ಯುಪಿ ಚುನಾವಣೆ: ಎಸ್ಪಿ-ಆರ್ಎಲ್ಡಿ ಮೈತ್ರಿಗೆ ಬೆಂಬಲ ನಿರಾಕರಿಸಿದ ರಾಕೇಶ್ ಟಿಕಾಯತ್
ಲಕ್ನೋ ಜನವರಿ 17: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ (ಎಸ್ಪಿ-ಆರ್ಎಲ್ಡಿ) ಮೈತ್ರಿಗೆ ಬೆಂಬಲ ನೀಡುವುದಾಗಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅಧ್ಯಕ್ಷ ನರೇಶ್ ಟಿಕಾಯತ್ ಘೋಷಿಸಿದ್ದರೂ ಸಹ ಅವರ ಸಹೋದರ ಮತ್ತು ಬಿಕೆಯು ವಕ್ತಾರ ರಾಕೇಶ್ ಟಿಕಾಯತ್ ಇದನ್ನು ನಿರಾಕರಿಸಿದ್ದಾರೆ. ಜೊತೆಗೆ ಇದೊಂದು ತಪ್ಪು ತಿಳುವಳಿಕೆ ಎಂದಿದ್ದಾರೆ.
"ನಾವು ಯಾವುದೇ ಬೆಂಬಲವನ್ನು ನೀಡಲಿಲ್ಲ, ಜನರು ಅರ್ಥಮಾಡಿಕೊಳ್ಳುವಲ್ಲಿ ತಪ್ಪು ಮಾಡಿದ್ದಾರೆ" ಎಂದು ರಾಕೇಶ್ ಟಿಕಾಯತ್ ಹೇಳಿದರು. ನರೇಶ್ ಟಿಕೈತ್ ಎಸ್ಪಿ-ಆರ್ಎಲ್ಡಿಗೆ ಬೆಂಬಲ ನೀಡುವ ವೀಡಿಯೊ ಇತ್ತೀಚೆಗೆ ಹೊರಹೊಮ್ಮಿದೆ. ಈ ಕುರಿತು ಕೇಳಿದಾಗ, ರಾಕೇಶ್ ಟಿಕಾಯತ್, "ನಾವು ಇನ್ನೂ ಯಾವುದೇ ಬೆಂಬಲವನ್ನು ನೀಡಿಲ್ಲ ಮತ್ತು ನಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ನಾವು ಅದನ್ನು ಶೀಘ್ರದಲ್ಲೇ ಖಚಿತಪಡಿಸುತ್ತೇವೆ" ಎಂದು ಹೇಳಿದರು.
"ನಮ್ಮ ಮನೆಗೆ ಯಾರಾದರೂ ಬಂದರೆ ನಾವು ನಿಮ್ಮೊಂದಿಗಿದ್ದೇವೆ ಎಂದು ಹೇಳುತ್ತೇವೆ. ಹಾಗೇ ನರೇಶ್ ಟಿಕಾಯತ್ ಹೇಳಿದ್ದಾರೆ. ಯಾರಿಗೆ ಮತ ಹಾಕಬೇಕೆಂದು ನಾವು ಯಾರಿಗೂ ಹೇಳುತ್ತಿಲ್ಲ. ನಾವು ಯಾರಿಗೂ ಬೆಂಬಲ ನೀಡುವುದಿಲ್ಲ. ಇದನ್ನು ನಾವು ನಿರ್ಧರಿಸಿದ್ದೇವೆ. ನಾವು ಸರ್ಕಾರದ ವಿರುದ್ಧವಾಗಿದ್ದರೂ, ಎಲ್ಲರಿಗೂ (ಜನರು) ತಾವು ಏನು ಮಾಡಬೇಕೆಂದು ತಿಳಿದಿದೆ, "ಎಂದು ಅವರು ಹೇಳಿದರು.
"ರಾಜ್ಯದ ಜನರು ಈ ಒಕ್ಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ" ಎಂದು ನರೇಶ್ ಟಿಕಾಯತ್ ಸಿಸೌಲಿಯಲ್ಲಿ ನಿನ್ನೆ ಜನರನ್ನು ಉದ್ದೇಶಿಸಿ ಹೇಳಿದರು.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಎಸ್ಪಿ-ಆರ್ಎಲ್ಡಿ ಮೈತ್ರಿಕೂಟ, ಕಾಂಗ್ರೆಸ್, ಎಸ್ಪಿ ಮತ್ತು ಬಹುಜನ ಸಮಾಜ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಎಸ್ಪಿ-ಆರ್ಎಲ್ಡಿ ಮೈತ್ರಿಕೂಟವು ಮುಜಾಫರ್ನಗರ ಜಿಲ್ಲೆಯ ಬುಧಾನಾದಿಂದ ರಾಜ್ಪಾಲ್ ಬಲಿಯಾನ್, ಮೀರಾಪುರದಿಂದ ಚಂದನ್ ಚೌಹಾಣ್ ಮತ್ತು ಶಾಮ್ಲಿಯ ಥಾನಾ ಭವನದಿಂದ ಅಶ್ರಫ್ ಅಲಿ ಉಮೇದುವಾರಿಕೆಯನ್ನು ಪ್ರಕಟಿಸಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಬಿಡುಗಡೆ ಮಾಡಿರುವ ಈ ಮೊದಲ ಪಟ್ಟಿಯಲ್ಲಿ ಉನ್ನಾವೋ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಹೆಸರೂ ಸೇರಿದೆ. ಉನ್ನಾವೋ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಹೆಸರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿದೆ. ಇತ್ತ ಭಾರತೀಯ ಜನತಾ ಪಕ್ಷ (ಬಿಜೆಪಿ) ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತನ್ನನ್ನು ಮಿತ್ರಪಕ್ಷವೆಂದು ಪರಿಗಣಿಸದ ಕಾರಣ ಜೆಡಿಯು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.
Recommended Video
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ಮತ್ತು ಮಾರ್ಚ್ 7 ರ ನಡುವೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 58 ಸ್ಥಾನಗಳಿಗೆ ಮತದಾನ ನಡೆದರೆ, 55 ಸ್ಥಾನಗಳು ಮತ್ತು 59 ಸ್ಥಾನಗಳು ಕ್ರಮವಾಗಿ ಎರಡನೇ ಹಂತ ಮತ್ತು ಮೂರನೇ ಹಂತದಲ್ಲಿ ಗ್ರಾಬ್ ಆಗಲಿವೆ. ಮಾರ್ಚ್ 10 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ.