ಯುಪಿ ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಸಿದ್ದ: ನೀತಿ ಅನುಸರಿಸಿದರೆ ಏನು ಸಿಗುತ್ತೆ?
ಲಕ್ನೋ, ಜು.10: ಪ್ರಸ್ತಾವಿತ ಜನಸಂಖ್ಯಾ ನಿಯಂತ್ರಣ ಮಸೂದೆಯ ಮೊದಲ ಕರಡನ್ನು ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗ ಶುಕ್ರವಾರ ಬಿಡುಗಡೆ ಮಾಡಿದೆ. ಕರಡು ಮಸೂದೆಯಲ್ಲಿ ಎರಡು ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವ ಜನರಿಗೆ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ನೀಡದಿರಲು ಹಾಗೂ ಎರಡು ಮಕ್ಕಳ ನೀತಿಯನ್ನು ಅನುಸರಿಸುವವರಿಗೆ ಪ್ರೋತ್ಸಾಹಕ ಯೋಜನೆ ಪ್ರಸ್ತಾಪಿಸಲು ಅವಕಾಶವಿದೆ.
''ಎರಡು ಮಕ್ಕಳ ನೀತಿಯನ್ನು ಉಲ್ಲಂಘಿಸುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವುದನ್ನು ಅಥವಾ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದನ್ನು ತಡೆಯಲು ಮಸೂದೆಯು ಪ್ರಸ್ತಾಪಿಸಿದೆ. ಹಾಗೆಯೇ ಮಸೂದೆಯು ಪಡಿತರ ಚೀಟಿಯಲ್ಲಿನ ಜನಸಂಖ್ಯೆಗೂ ಕಡಿವಾಣ ಹಾಕಲಿದೆ,'' ಎಂದು ಯುಪಿ ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಎನ್ ಮಿತ್ತಲ್ ಇಂಡಿಯಾ ಟುಡೆ ಟಿವಿಗೆ ತಿಳಿಸಿದ್ದಾರೆ.
ಎರಡು ಮಕ್ಕಳ ನೀತಿಯನ್ನು ಅನುಸರಿಸುವ ಸರ್ಕಾರಿ ನೌಕರರು ಸಂಪೂರ್ಣ ಸೇವೆಯ ಸಮಯದಲ್ಲಿ ಎರಡು ಹೆಚ್ಚುವರಿ ಏರಿಕೆಯನ್ನು ಪಡೆಯಬಹುದಾಗಿದೆ. ಜಮೀನು ಅಥವಾ ಮನೆಯನ್ನು ಸಬ್ಸಿಡಿ ಖರೀದಿಸಲು ಸಬ್ಸಿಡಿ ಪಡೆಯಬಹುದಾಗಿದೆ. ಶುಲ್ಕಗಳ ಮೇಲೆ ರಿಯಾಯಿತಿ ಪಡೆಯಬಹುದಾಗಿದೆ. ಹಾಗೆಯೇ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ನೌಕರರ ಭವಿಷ್ಯ ನಿಧಿಯಲ್ಲಿ (ಇಪಿಎಫ್) ಮೂರು ಶೇಕಡ ಹೆಚ್ಚಳ ಮೊದಲಾದ ಪ್ರೋತ್ಸಾಹಕ ಯೋಜನೆಗೆ ಅರ್ಹರಾಗಿರುತ್ತಾರೆ. ಒಂದೇ ಮಗುವನ್ನು ಹೊಂದಿರುವವರಿಗೆ ಉದ್ಯೋಗದಲ್ಲಿ ನಾಲ್ಕು ಹೆಚ್ಚುವರಿ ಏರಿಕೆಗಳು ಇರುತ್ತದೆ. 20 ವರ್ಷ ವಯಸ್ಸಿನವರೆಗೆ ಮಗುವಿಗೆ ಉಚಿತ ಆರೋಗ್ಯ ಮತ್ತು ತಮ್ಮ ಮಗುವಿಗೆ ಶಿಕ್ಷಣವನ್ನು ಪಡೆಯಬಹುದಾಗಿದೆ.

''ಸರ್ಕಾರಿ ಸೇವೆಯಲ್ಲಿಲ್ಲದ ಆದರೆ ಎರಡು ಮಕ್ಕಳ ನೀತಿಯನ್ನು ಅನುಸರಿಸುವವರಿಗೆ ನೀರು ಮತ್ತು ವಿದ್ಯುತ್ ಬಿಲ್ಗಳು, ಮನೆ ತೆರಿಗೆ, ಗೃಹ ಸಾಲಗಳ ಮೇಲೆ ರಿಯಾಯಿತಿ ನೀಡಲು ಮಸೂದೆಯು ಪ್ರಸ್ತಾಪಿಸಿದೆ. ಹಾಗೆಯೇ ಈ ಮಸೂದೆಯು ಮಹಿಳೆ ಹಾಗೂ ಪುರುಚರಿಬ್ಬರಿಗೂ ಸಂತಾನಹರಣ ಚಿಕಿತ್ಸೆಗೆ ಒಳಗಾಗಲು ಉತ್ತೇಜಿಸುತ್ತದೆ,'' ಎಂದು ಮಿತ್ತಲ್ ಹೇಳಿದರು.
ಕರಡು ಮಸೂದೆಯನ್ನು ಯುಪಿ ಕಾನೂನು ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲಾಗಿದೆ. ಸಲಹೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ 2021ರ ಜುಲೈ 19 ಆಗಿದೆ.
"ಬಹುಪತ್ನಿತ್ವ ಹಾಗೂ ಬಹುಪತಿತ್ವ ಪ್ರಕರಣಗಳಲ್ಲಿ ಯಾವುದೇ ವಿನಾಯಿತಿ ಇಲ್ಲ. ಇದನ್ನು ಪ್ರಶ್ನಿಸುವವರು ಸರ್ಕಾರವು ತೆರಿಗೆದಾರರ ಹಣವನ್ನು ಎರಡು ಮಕ್ಕಳೊಂದಿಗೆ ಹೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ತಿಳಿದಿರಬೇಕು," ಎಂದು ತಿಳಿಸಿದ್ದಾರೆ.
ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ 2021-2030ಕ್ಕೆ ಹೊಸ ಜನಸಂಖ್ಯಾ ನೀತಿಯನ್ನು ಘೋಷಿಸಲು ಎರಡು ದಿನಗಳ ಮೊದಲು ಕರಡು ಮಸೂದೆಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ನೀತಿಯನ್ನು ಬಿಡುಗಡೆ ಮಾಡಲಿದ್ದಾರೆ.
ಕಳೆದ ತಿಂಗಳು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಮ್ಮ ಸರ್ಕಾರವು ಕ್ರಮೇಣ ಎರಡು ಮಕ್ಕಳ ನೀತಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದರು. "ಇದು ಸಾಲ ಮನ್ನಾ ಅಥವಾ ಯಾವುದೇ ಸರ್ಕಾರದ ಯೋಜನೆಯಾಗಿರಲಿ, ನಾವು ನಿಧಾನವಾಗಿ ಈ ಯೋಜನೆಗಳಿಗೆ ಜನಸಂಖ್ಯಾ ನೀತಿಯನ್ನು ಜಾರಿಗೆ ತರುತ್ತೇವೆ. ಚಹಾ ತೋಟ ನೋಡಿಕೊಳ್ಳುವ ಸಮುದಾಯ, ಎಸ್ಸಿ, ಎಸ್ಟಿ ಸಮುದಾಯಗಳಿಗೆ ಜನಸಂಖ್ಯಾ ಮಾನದಂಡಗಳು ಅನ್ವಯವಾಗುವುದಿಲ್ಲ. ಆದರೆ ಭವಿಷ್ಯದಲ್ಲಿ ಸರ್ಕಾರದಿಂದ ಪ್ರಯೋಜನಗಳನ್ನು ಪಡೆಯುವ ಎಲ್ಲರ ಮೇಲೆ ಹೇರಲಾಗುವುದು. ಏಕೆಂದರೆ ಜನಸಂಖ್ಯೆ ನೀತಿ ಈಗಾಗಲೇ ಅಸ್ಸಾಂನಲ್ಲಿ ಪ್ರಾರಂಭವಾಗಿದೆ," ಎಂದು ಸಿಎಂ ಶರ್ಮಾ ಹೇಳಿದ್ದರು.
''ರಾಜ್ಯದ ಜನಸಂಖ್ಯೆಯು ಸ್ಫೋಟಕ ಹಂತವನ್ನು ತಲುಪುತ್ತಿದೆ. ಹೆಚ್ಚುತ್ತಿರುವ ಜನಸಂಖ್ಯೆಯ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ. ಈ ಪರಿಶೀಲನೆಯ ಮೂಲಕ ಜನರು ಸರ್ಕಾರಿ ಸೌಲಭ್ಯಗಳು ಮತ್ತು ಸಂಪನ್ಮೂಲಗಳನ್ನು ಪಡೆಯಬಹುದಾಗಿದೆ,'' ಎಂದು ಉತ್ತರ ಪ್ರದೇಶದ ಕಾನೂನು ಆಯೋಗದ ಅಧ್ಯಕ್ಷ ಆದಿತ್ಯ ನಾಥ್ ಮಿತ್ತಲ್ ಈ ಹಿಂದೆ ಹೇಳಿದ್ದರು. ಹೇಳಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications