ಅಯೋಧ್ಯೆ ರಾಮ ಮಂದಿರ ನಿರ್ಮಾಣ ಸ್ಥಳಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಅಯೋಧ್ಯೆ, ಆಗಸ್ಟ್ 29: ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಭೇಟಿ ನೀಡಿದರು. ರಾಮ ಲಲ್ಲಾ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಪ್ರಾರ್ಥನೆ ಸಲ್ಲಿಸಿದರು.
ರಾಮಾಯಣ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ರಾಮನಿಲ್ಲದೆ ಅಯೋಧ್ಯೆ ಅಯೋಧ್ಯೆಯಲ್ಲ. ರಾಮ ಇರುವಲ್ಲಿ ಅಯೋಧ್ಯೆ ಇದೆ. ಭಗವಾನ್ ರಾಮನು ಈ ನಗರದಲ್ಲಿ ಶಾಶ್ವತವಾಗಿ ನೆಲೆಸಿದ್ದಾನೆ, ಆದ್ದರಿಂದ ನಿಜವಾದ ಅರ್ಥದಲ್ಲಿ, ಈ ಸ್ಥಳವು ಅಯೋಧ್ಯೆಯಾಗಿದೆ "ಎಂದು ಹೇಳಿದರು. ತದನಂತರದಲ್ಲಿ ಅಯೋಧ್ಯ ರಾಮ ಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕುಟುಂಬ ಸದಸ್ಯರು, ಉತ್ತರ ಪ್ರದೇಶ ರಾಜ್ಯಪಾಲ ಆನಂದಿ ಬೆನ್ ಪಟೇಲ್, ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ರಾಜ್ಯ ಸಚಿವ ದರ್ಶನ ವಿಕ್ರಮ್ ಜರ್ದೋಷ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಉಪಸ್ಥಿತರಿದ್ದರು. ಒಂದು ಕಡೆ ದೇವಸ್ಥಾನದಲ್ಲಿ ಅರ್ಚಕರು ಘೋಷಣೆ ಕೂಗುತ್ತಿರುವ ಸಮಯದಲ್ಲಿ ರಾಮ ಲಲ್ಲಾಗೆ ಪ್ರಾರ್ಥನೆ ಸಲ್ಲಿಸಿದರು.

ರಾಮ ಮಂದರಿ ಅರ್ಚಕರ ಜೊತೆ ಸಂವಾದ:
ರಾಷ್ಟ್ರಪತಿಗಳಿಗೆ ಶಾಲು ಹೊದಿಸಿ, ಚಿಕಣಿ ಪ್ರತಿಕೃತಿಯನ್ನು ನೀಡುವ ಮೂಲಕ ಗೌರವಿಸಲಾಯಿತು. ಈ ವೇಳೆ ರಾಮ ಮಂದಿರದ ಅರ್ಚಕರ ಜೊತೆಗೆ ರಾಮನಾಥ್ ಕೋವಿಂದ್ ಸಂವಾದ ನಡೆಸಿ ನಂತರ ಸಸಿ ನೆಡುವ ಕಾರ್ಯ ಮಾಡಿದರು. 2019 ರ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಅಯೋಧ್ಯೆಗೆ ಮೊದಲ ಭೇಟಿ ನೀಡಿದ ಕೋವಿಂದ್, ದೇವಾಲಯದ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟರು. ಅಲ್ಲಿಂದ ಸುಮಾರು 2 ಕಿಮೀ ದೂರದಲ್ಲಿರುವ ಹನುಮನ್ಗರಿ ದೇಗುಲಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹನುಮಂಗರಿ ದೇವಸ್ಥಾನದಲ್ಲಿ ರಾಷ್ಟ್ರಪತಿಗಳಿಗೆ ಗುಲಾಬಿ ಬಣ್ಣದ ಪೇಟ ನೀಡಲಾಯಿತು.
"ರಾಮ ಎಲ್ಲರಲ್ಲಿಯೂ ಇದ್ದಾರೆ"
ರಾಮಾಯಣ ಸಮಾವೇಶದ ಜೊತೆಗೆ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ರಾಮನಾಥ್ ಕೋವಿಂದ್, "ನಾವು ಪ್ರತಿಯೊಬ್ಬರಲ್ಲೂ ರಾಮ ಮತ್ತು ಸೀತೆಯನ್ನು ನೋಡಲು ಪ್ರಯತ್ನಿಸಬೇಕು. ರಾಮ್ ಎಲ್ಲರಿಗೂ ಸೇರಿದವನು, ಮತ್ತು ರಾಮ್ ಎಲ್ಲದರಲ್ಲೂ ಇದ್ದಾನೆ," ಎಂದರು. ಅವರ ಹೆಸರಿನಲ್ಲಿರುವ 'ರಾಮ್' ಪದವನ್ನು ಉಲ್ಲೇಖಿಸುತ್ತಾ ಮಾತನಾಡಿದ ಅವರು "ನನ್ನ ಕುಟುಂಬ ಸದಸ್ಯರು ನನಗೆ (ರಾಮ್ ನಾಥ್ ಕೋವಿಂದ್) ಹೆಸರಿಟ್ಟಾಗ, ಅವರು ಬಹುಶಃ ರಾಮ ಕಥಾ ಮತ್ತು ಭಗವಾನ್ ರಾಮನ ಬಗ್ಗೆ ಗೌರವ ಮತ್ತು ಪ್ರೀತಿಯ ಭಾವನೆಯನ್ನು ಹೊಂದಿದ್ದರು ಎಂದು ನಾನು ಭಾವಿಸುತ್ತೇನೆ," ಎಂದರು.
ಮಹಾತ್ಮ ಗಾಂಧೀಜಿ ರಾಮರಾಜ್ಯದ ಕನಸು:
"ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧಿಯವರು ರಾಮನ ಆದರ್ಶಗಳನ್ನು ಅಳವಡಿಸಿಕೊಂಡಿದ್ದರು. ಗಾಂಧೀಜಿ ತನ್ನ ಆದರ್ಶ ಭಾರತದ ಪರಿಕಲ್ಪನೆಯನ್ನು 'ರಾಮರಾಜ್ಯ' ಎಂದು ಹೆಸರಿಸಿದ್ದರು. ಮಹಾತ್ಮ ಗಾಂಧೀಜಿಗೆ ರಾಮನ ಹೆಸರು ಬಹಳ ಮುಖ್ಯವಾಗಿತ್ತು ಎಂದು ಕೋವಿಂದ್ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications