ಯುಪಿ: 'ಎಸ್ಪಿ ಅಧಿಕಾರಕ್ಕೆ ಬಂದರೆ ಮನೆಯಿಂದ ಹೊರಗೆ ಕಾಲಿಡಲು ಭಯಪಡುತ್ತಾರೆ'
ಮೀರತ್, ಜನವರಿ 27: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರ ರಂಗೇರುತ್ತಿವೆ. ಈ ನಡುವೆ ಸಮಾಜವಾದಿ ಪಕ್ಷದ ಅಭ್ಯರ್ಥಿ ಆದಿಲ್ ಚೌಧರಿ ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋದಲ್ಲಿ ಅವರು "ಉತ್ತರ ಪ್ರದೇಶದಲ್ಲಿ ನಮ್ಮ ಸರ್ಕಾರ ರಚನೆಯಾಗಲಿದೆ. ನಾವು ಅವರನ್ನು ಬಿಡುವುದಿಲ್ಲ" ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ಈ ವಿಡಿಯೋ ಎಸ್ಪಿಯನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಯನ್ನು ಪ್ರೇರೇಪಿಸಿದೆ. ವೈರಲ್ ವೀಡಿಯೊದಲ್ಲಿ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಬಂದಾಗ ಒಬ್ಬ ವ್ಯಕ್ತಿಯನ್ನು ಸಹ ಬಿಡುವುದಿಲ್ಲ ಎಂದು ಚೌಧರಿ ಹೇಳುವುದನ್ನು ಕೇಳಬಹುದು.
"ನೀವೆಲ್ಲರೂ ಟೆನ್ಷನ್ ಫ್ರೀ ಆಗಿರಿ! ಉತ್ತರ ಪ್ರದೇಶದಲ್ಲಿ ನಮ್ಮ ಸರ್ಕಾರ ರಚನೆಯಾಗುತ್ತದೆ. ಇನ್ಶಾ ಅಲ್ಲಾ, ನಾವು ಅವರನ್ನು ಬಿಡುವುದಿಲ್ಲ. ಅವರು ನಮ್ಮ ವಿರುದ್ಧ ಅಪರಾಧಗಳನ್ನು ನಡೆಸುತ್ತಿರುವ ರೀತಿ.... ಈ ಎಲ್ಲಾ ನಡೆಗಳ ವಿರುದ್ಧ ನಾವು ಸೇಡು ತೀರಿಸಿಕೊಳ್ಳುತ್ತೇವೆ. ಅವರು ತಮ್ಮ ತಪ್ಪುಗಳನ್ನು ಅರಿತುಕೊಳ್ಳುತ್ತಾರೆ, ಅವರು ನಮಗೆ ಹಾನಿ ಮಾಡುವ ಮೊದಲು 100 ಬಾರಿ ಯೋಚಿಸುತ್ತಾರೆ. ಅವರು ತಮ್ಮ ಮನೆಯಿಂದ ಹೊರಗೆ ಕಾಲಿಡಲು ಭಯಪಡುತ್ತಾರೆ. ನನ್ನ ಸಹೋದರರೇ, ಅವರ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ"ಎಂದು ಅವರು ವೈರಲ್ ಕ್ಲಿಪ್ನಲ್ಲಿ ಹೇಳಿದ್ದಾರೆ. ಚೌಧರಿಯವರ ಮಾತುಗಳನ್ನು ಕೇಳಿದ ಜನರು ಅವರ ಮಾತುಗಳನ್ನು ಕೇಳಿ ಚಪ್ಪಾಳೆ ತಟ್ಟಿದರು.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಬಿಜೆಪಿಯ ರಾಷ್ಟ್ರೀಯ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ತಮ್ಮ ಪೋಸ್ಟ್ನಲ್ಲಿ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಮೀರತ್ ದಕ್ಷಿಣದ ಎಸ್ಪಿ ಅಭ್ಯರ್ಥಿ ಆದಿಲ್ ಚೌಧರಿ ಹಿಂದೂಗಳಿಗೆ ಬೆದರಿಕೆ ಹಾಕಿದ್ದಾರೆ. 'ನಮ್ಮ ಸರ್ಕಾರ ಬಂದರೆ, ನಾವು ಅದನ್ನು ಬಿಡುವುದಿಲ್ಲ... ಸೆಲೆಕ್ಟಿವ್ ಆಗಿ ಸೇಡು ತೀರಿಸಿಕೊಳ್ಳುತ್ತೇವೆ' ಎಂದ ಹೇಳಿದ್ದಾರೆ. ಅಖಿಲೇಶ್ ಯಾದವ್ ಇಲ್ಲಿ ನಹಿದ್ ಹಸನ್, ಆದಿಲ್ ಚೌಧರಿ ಅವರಂತಹ ಹಿಂದೂ ವಿರೋಧಿ ಗೂಂಡಾಗಳಿಗೆ ಟಿಕೆಟ್ ನೀಡಿದ್ದಾರೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಉತ್ತರ ಪ್ರದೇಶ ಚುನಾವಣೆಯ ಎರಡನೇ ಹಂತ ಫೆಬ್ರವರಿ 14 ರಂದು, ಮೂರನೇ ಹಂತ ಫೆಬ್ರವರಿ 20 ರಂದು, ನಾಲ್ಕನೇ ಹಂತ ಫೆಬ್ರವರಿ 23 ರಂದು, 5 ನೇ ಹಂತ ಫೆಬ್ರವರಿ 27 ರಂದು, ಮಾರ್ಚ್ 3 ಮತ್ತು 7 ರಂದು 6 ನೇ ಹಂತ ಮತ್ತು ಮಾರ್ಚ್ 7 ರಂದು ಕೊನೆಯ ಹಂತವನ್ನು ನಡೆಸಲಾಗುವುದು. ಉತ್ತರ ಪ್ರದೇಶದ 403, ಪಂಜಾಬ್ನ 117, ಉತ್ತರಾಖಂಡದ 70, ಮಣಿಪುರದ 60 ಮತ್ತು ಗೋವಾದ 40 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.