ಉತ್ತರ ಪ್ರದೇಶ ಚುನಾವಣೆ; ಕಾರ್ಯತಂತ್ರ ಸಭೆ ಆರಂಭಿಸಿದ ಬಿಜೆಪಿ
ಲಖ್ನೋ, ಸೆಪ್ಟೆಂಬರ್ 23: ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಸನ್ನದ್ಧವಾಗುತ್ತಿದೆ. ಮುಂದಿನ ವರ್ಷಾರಂಭದಲ್ಲಿಯೇ ವಿಧಾನಸಭೆ ಚುನಾವಣೆ ಎದುರಾಗುವುದಾಗಿ ತಿಳಿದುಬಂದಿದ್ದು, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಚುನಾವಣಾ ತಂಡ ಬುಧವಾರ ಲಖ್ನೋಗೆ ಭೇಟಿ ನೀಡಿದೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಹಾಗೂ ಕಾರ್ಯತಂತ್ರದ ಪ್ರಕ್ರಿಯೆಯನ್ನು ಆರಂಭಿಸಲು ಸಭೆ ನಡೆಸಲಾಗಿದೆ. ಕೇಂದ್ರ ನಾಯಕರು ಎರಡು ದಿನಗಳ ಕಾಲ ರಾಜ್ಯ ರಾಜಧಾನಿಯಲ್ಲಿ ಉಳಿಯಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಅನುರಾಗ್ ಠಾಕೂರ್ ಸೇರಿದಂತೆ ಚುನಾವಣಾ ಸಮಿತಿ ಸದಸ್ಯರು ಬುಧವಾರ ಮಧ್ಯಾಹ್ನ ನಗರಕ್ಕೆ ಆಗಮಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಪಕ್ಷದ ಕಚೇರಿಯಲ್ಲಿ ಸೇರಿದ್ದಾರೆ. ಅವರೊಂದಿಗೆ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿನೇಶ್ ಶರ್ಮಾ, ಉತ್ತರ ಪ್ರದೇಶ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಹಾಗೂ ಉತ್ತರಾಖಂಡದ ಮಾಜಿ ರಾಜ್ಯಪಾಲರು ಹಾಗೂ ಹೊಸದಾಗಿ ನೇಮಕವಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಬೇಬಿ ರಾಣಿ ಮೌರ್ಯ ಸಭೆಯಲ್ಲಿ ಸೇರಿದ್ದರು.

ಸಂಜೆವರೆಗೂ ಸಭೆ ನಡೆದಿದ್ದು, ರಾಜ್ಯ ಕ್ಯಾಬಿನೆಟ್ ಮಂತ್ರಿಗಳು ಚರ್ಚೆಯ ಭಾಗವಾಗಿದ್ದರು ಎಂದು ಮೂಲಗಳು ತಿಳಿಸಿವೆ. ಪಕ್ಷದ ಕಾರ್ಯಕ್ರಮಗಳು, ಚುನಾವಣಾ ಪ್ರಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇದು ಚುನಾವಣಾ ಪೂರ್ವಭಾವಿ ಸಭೆಯಾಗಿದೆ. ಗುರುವಾರ ಚುನಾವಣೆ ಕಾರ್ಯತಂತ್ರಗಳ ಕುರಿತು ಸಭೆ ನಡೆಯಲಿದೆ. ಇತ್ತೀಚೆಗೆ ನೇಮಿಸಲಾಗಿರುವ ವಲಯಗಳ ಉಸ್ತುವಾರಿ ನಾಯಕರು ಹಾಗೂ ರಾಜ್ಯದ ಪ್ರಮುಖ ನಾಯಕರು ಈ ಸಭೆಯ ಭಾಗವಾಗಿರಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರು ಮಾಹಿತಿ ನೀಡಿದ್ದಾರೆ.
ಬುಧವಾರ ಉತ್ತರ ಪ್ರದೇಶಕ್ಕೆ ಆಗಮಿಸುತ್ತಿದ್ದಂತೆಯೇ ಅನುರಾಗ್ ಠಾಕೂರ್ ಆಶಾವಾದ ವ್ಯಕ್ತಪಡಿಸಿದ್ದಾರೆ. 'ಈ ಬಾರಿ ಉತ್ತರ ಪ್ರದೇಶ ಜನರು ಬಿಜೆಪಿಯನ್ನು ಆಶೀರ್ವದಿಸುತ್ತಾರೆ ಹಾಗೂ ಹೆಚ್ಚಿನ ಮತಗಳು, ಸ್ಥಾನಗಳನ್ನು ಬಿಜೆಪಿಗೆ ನೀಡುತ್ತಾರೆಂಬ ಭರವಸೆಯಿದೆ' ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದೊಂದಿಗೆ, ಗೋವಾ, ಪಂಜಾಬ್, ಉತ್ತರಾಖಂಡ್ ಮತ್ತು ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆ ಕೂಡ ನಡೆಯಲಿದ್ದು, 2022ರ ಆರಂಭದಲ್ಲಿಯೇ ವಿಧಾನಸಭೆ ಚುನಾವಣೆಗಳು ಎದುರಾಗಲಿವೆ ಎಂಬ ಮಾಹಿತಿ ಇದೆ. ಹೀಗಾಗಿ ಬಿಜೆಪಿ ಈಗಾಗಲೇ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ.

430 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಉಸ್ತುವಾರಿಯಾಗಿದ್ದಾರೆ. ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಅನುರಾಗ್ ಠಾಕೂರ್, ಅರ್ಜುನ್ ರಾಮ್ ಮೇಘ್ವಾಲ್, ಅನ್ನಪ್ರಾಣಾ ದೇವಿ, ಸರೋಜ್ ಪಾಂಡೆ ಸಹ ಉಸ್ತುವಾರಿಗಳು ನೇಮಕವಾಗಿದ್ದಾರೆ. ಆರು ವಿಭಾಗವಾರು ಉಸ್ತುವಾರಿಗಳನ್ನು ಸಹ ಬಿಜೆಪಿ ನೇಮಕ ಮಾಡಿದೆ.
ಬಿಜೆಪಿ, ಸಮಾಜವಾದಿ ಪಕ್ಷ, ಬಿಎಸ್ಪಿ ಈಗಾಗಲೇ ಮುಂದಿನ ಚುನಾವಣೆಗಾಗಿ ಪ್ರಚಾರವನ್ನು ಆರಂಭಿಸಿವೆ. ರಾಜ್ಯ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಲಿರುವ ಸಂಸದ ಅಸಾದುದ್ದೀನ್ ಓವೈಸಿ ಎಐಎಂಐಎಂ ಪಕ್ಷ, ಕುಂದಾ ಕ್ಷೇತ್ರದ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ನೇತೃತ್ವದ ಜನಸತ್ತಾ ಲೋಕತಾಂತ್ರಿಕ ದಳ ಕೂಡ ಪ್ರಚಾರಕ್ಕೆ ಮುಂದಾಗಿವೆ. ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸ್ಪರ್ಧೆ ನಡೆಸಲಿದೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications