ಬಿಜೆಪಿ ಮುಖಂಡನ ವಿರುದ್ಧ ಎನ್ಎಸ್ಎ, ಗ್ಯಾಂಗ್ಸ್ಟರ್ ಕಾಯ್ದೆಯಡಿ ಪ್ರಕರಣ
ಲಕ್ನೋ, ಅಕ್ಟೋಬರ್ 17: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆಯುತ್ತಿದ್ದ ಸಭೆ ವೇಳೆ ವಿವಾದ ಉಂಟಾದಾಗ ಗುಂಡು ಹಾರಿಸಿ ವ್ಯಕ್ತಿಯೊಬ್ಬನ ಸಾವಿಗೆ ಕಾರಣನಾಗಿದ್ದ ಸ್ಥಳೀಯ ಬಿಜೆಪಿ ಮುಖಂಡ ಸೇರಿದಂತೆ ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಮತ್ತು ಗ್ಯಾಂಗ್ಸ್ಟರ್ ಕಾಯ್ದೆಗಳ ಅಡಿ ಪ್ರಕರಣ ದಾಖಲಿಸುವುದಾಗಿ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ರಿಯೋಟಿ ಪ್ರದೇಶದಲ್ಲಿ ದುರ್ಜನಪುರ ಗ್ರಾಮದಲ್ಲಿ ಪಡಿತರ ಅಂಗಡಿಗಳ ಆಯ್ಕೆಯ ವಿಚಾರದಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯುತ್ತಿದ್ದಾಗ ಜಗಳ ಉಂಟಾಗಿತ್ತು. ಆಗ ಗನ್ ತೆಗೆದಿದ್ದ ಸ್ಥಳೀಯ ಬಿಜೆಪಿ ಮುಖಂಡ ಧೀರೇಂದ್ರ ಪ್ರತಾಪ್ ಸಿಂಗ್ ಜನರ ಗುಂಪಿನತ್ತ ಗುಂಡು ಹಾರಿಸಿದ್ದರು. ಗುಂಡಿಗೆ ಜೈಪ್ರಕಾಶ್ ಎಂಬುವವರು ಬಲಿಯಾಗಿದ್ದರು. ನಂತರ ಧೀರೇಂದ್ರ ಸ್ಥಳದಿಂದ ಪರಾರಿಯಾಗಿದ್ದರು.
ಗುರುವಾರ ನಡೆದಿದ್ದ ಘಟನೆ ಸಂಬಂಧ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಧೀರೇಂದ್ರ ಸೇರಿದಂತೆ ಇಬ್ಬರ ವಿರುದ್ಧ ಪೊಲೀಸರು ಲುಕೌಟ್ ಜಾರಿ ಮಾಡಿದ್ದಾರೆ.

ಈ ನಡುವೆ ವಿಡಿಯೋ ಬಿಡುಗಡೆ ಮಾಡಿರುವ ಧೀರೇಂದ್ರ, ತಾವು ಗುಂಡು ಹಾರಿಸಿಯೇ ಇಲ್ಲ. ಈ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಯಬೇಕು ಎಂದಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಭ್ರಷ್ಟಾಚಾರ ಹಾಗೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಪೊಲೀಸರು ಐವರನ್ನು ಬಂಧಿಸಿದ್ದು, ಎಂಟು ಆರೋಪಿಗಳ ಜತೆಗೆ 20-25 ಅಪರಿಚಿತರ ವಿರುದ್ಧ ಕೂಡ ಎಫ್ಐಆರ್ನಲ್ಲಿ ಹೆಸರು ಉಲ್ಲೇಖಿಸಲಾಗಿದೆ. ಪ್ರತಿ ಆರೋಪಿಯ ಬಗ್ಗೆ ಸೂಕ್ತ ಸುಳಿವು ನೀಡಿ ಬಂಧನಕ್ಕೆ ಸಹಕರಿಸಿದವರಿಗೆ ತಲಾ 50,000 ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.
-
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications