ಬುಲಂದ್ ಶಹರ್ ಪ್ರಕರಣ: ಉನ್ನತ ಪೊಲೀಸ್ ಅಧಿಕಾರಿ ವರ್ಗಾವಣೆ
ಲಕ್ನೋ, ಡಿಸೆಂಬರ್ 08: ಉತ್ತರ ಪ್ರದೇಶದ ಬುಲಂದ್ ಶಹರ್ ಹಿಂಸಾಚಾರದ ಆರು ದಿನಗಳ ನಂತರ ಇಲ್ಲಿನ ಉನ್ನತ ಪೊಲೀಸ್ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ.
ಬುಲಂದ್ ಶಹರ್ ಪೊಲೀಸ್ ಅಧಿಕಾರಿ ಹತ್ಯೆ ಕೇಸ್: ಶಂಕಿತನ ಬಂಧನ
ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಆರಂಭವಾದ ಪ್ರತಿಭಟನೆ ಗಲಭೆಯಾಗಿ ಬದಲಾಗಿ, ಸುಬೋಧ್ ಕುಮಾರ್ ಸಿಂಗ್ ಎಂಬುವವರ ಹತ್ಯೆಯಾಗಿತ್ತು. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಸರಿಯಾಗಿ ನಿಭಾಯಿಸಲು ಅಸಮರ್ಥರಾದ ಕಾರಣ ನೀಡಿ ಹಿರಿಯ ಸೂಪರಿಂಟೆಂಡೆಂಟ್ ಪೊಲೀಸ್ ಕೃಷ್ಣ ಬಹದ್ದೂರ್ ಸಿಂಗ್ ಅವರನ್ನು ಲಕ್ನೋದ ಪೊಲೀಸ್ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಉತ್ತರ ಪ್ರದೇಶ ಹಿಂಸಾಚಾರ: ಇನ್ಸ್ಪೆಕ್ಟರ್ ಹತ್ಯೆಯಲ್ಲಿ ಸೈನಿಕನ ಕೈವಾಡ?
ಅವರ ಜಾಗಕ್ಕೆ ಸೀತಾಪುರದ ಪ್ರಭಾಕರ್ ಚೌಧರಿ ಎಮಬ ಅಧಿಕಾರಿಯನ್ನು ನೇಮಿಸಲಾಗಿದೆ.
ಅಷ್ಟೇ ಅಲ್ಲ, ಘಟನೆಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಕೋಮು ಹಿಂಸೆಯೇ ನಮ್ಮಪ್ಪನ ಜೀವ ಕಿತ್ತುಕೊಂಡಿತು: ಪುತ್ರನ ಭಾವುಕ ನುಡಿ
ಪೊಲೀಸ್ ಅಧಿಕಾರಿ ಸುಬೋಧ್ ಅವರ ಹತ್ಯೆಗೆ ಸಂಬಂಧಿಸಿದಂತೆ ಶ್ರೀನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧ ಜೀತು ಫೌಜಿ ಎಂಬುವವರನ್ನು ಬಂಧಿಸಲಾಗಿದ್ದು, ಅವರೇ ಸುಬೋಧ್ ಅವರನ್ನು ಕೊಂದಿರಬಹುದೆಂದು ಶಂಕಿಸಲಾಗಿದೆ. ಗಲಭೆಯ ಸಂದರ್ಭದ ಕೆಲವು ವಿಡಿಯೋ ತುಣುಕುಗಳು ಕೂಡ ಈ ಶಂಕೆಗೆ ಪುಷ್ಠಿ ನೀಡಿವೆ.