ಉತ್ತರಪ್ರದೇಶ ಸಿಎಂ ಕಚೇರಿ ಟ್ವಿಟ್ಟರ್ ಹ್ಯಾಕ್; 100ಕ್ಕೂ ಅಧಿಕ ಟ್ವೀಟ್
ಲಕ್ನೋ, ಏಪ್ರಿಲ್ 9: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಚೇರಿಯ ಟ್ವಿಟ್ಟರ್ ಖಾತೆ ಶನಿವಾರ ಮುಂಜಾನೆ ಹ್ಯಾಕರ್ಗಳು ಹ್ಯಾಕ್ ಮಾಡಿದ್ದರು. ಈ ವೇಳೆ 100ಕ್ಕೂ ಅಧಿಕ ಟ್ವೀಟ್ಗಳನ್ನು ಮಾಡಿದ್ದರು.
ಸುಮಾರು 4 ತಾಸುಗಳ ಬಳಿಕ ಭಾಗಶಃ ಸರಿಪಡಿಸಲಾಗಿದ್ದು, ಹ್ಯಾಕ್ ಮಾಡಿದ ಕಿಡಿಗೇಡಿಗಳು ಮಾಡಿದ್ದ ಟ್ವೀಟ್ಗಳನ್ನೆಲ್ಲ ಡಿಲೀಟ್ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಕಚೇರಿಯ ಟ್ವಿಟರ್ನ್ನು ಹ್ಯಾಕ್ ಮಾಡಿದವರು ಆ ಖಾತೆಯಿಂದ 100ಕ್ಕೂ ಅಧಿಕ ಟ್ವಿಟ್ ಮಾಡಿದ್ದರು.
ಅಲ್ಲದೆ ಟ್ವಿಟ್ಟರ್ ಖಾತೆಯ ಪ್ರೊಫೈಲ್ಲ್ಲಿದ್ದ ಸಿಎಂ ಯೋಗಿ ಆದಿತ್ಯನಾಥ್ ಫೋಟೋವನ್ನು ತೆಗೆದುಹಾಕಿ ಬೇರೆ ಫೋಟೋ ಹಾಕಿದ್ದರು. ಮೊಬೈಲ್ ಗೇಮ್ಗೆ ಸಂಬಂಧಿಸಿದ ಟ್ವೀಟ್ಗಳನ್ನು ಹಾಕಿದ್ದರು. ಪ್ರೊಫೈಲ್ ಫೋಟೋ ಕೂಡ ಈ ಗೇಮ್ನಲ್ಲಿ ಬರುವ ಮಂಗಗಳದ್ದೇ ಇತ್ತು. ಅದರ ಪ್ರೊಫೈಲ್ ಫೋಟೋ ಬದಲಾಗಿದ್ದು ಮತ್ತು ಟ್ವೀಟ್ಗಳನ್ನು ನೋಡಿದ ನೆಟ್ಟಿಗರು ದೂರು ನೀಡಿದ್ದಾರೆ.

ಈ ಟ್ವಿಟರ್ ಖಾತೆ ಹ್ಯಾಕ್ ಆಗಿದೆ ಎಂದು ರಿಪೋರ್ಟ್ ಮಾಡಿದ್ದರು, ಅಂತೂ ಅದನ್ನು ಭಾಗಶಃ ಸರಿಪಡಿಸಿರುವ ತಂತ್ರಜ್ಞರು ಮತ್ತೆ ಸಿಎಂ ಯೋಗಿ ಫೋಟೋ ಹಾಕಿದೆ.
ಸರ್ಕಾರಿ ಕಚೇರಿಗಳ ಟ್ವಿಟ್ಟರ್ ಖಾತೆಗಳು ಹ್ಯಾಕ್ ಆಗುತ್ತಿರುವುದು ಇದೇ ಮೊದಲೇನಲ್ಲ. 2021ರ ಡಿಸೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ಹೀಗೆ ಹ್ಯಾಕ್ ಮಾಡಿದ್ದ ಕಿಡಿಗೇಡಿಗಳು, ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನು ಬದ್ಧವಾಗಿದೆ. ಅದಕ್ಕೆ ಸಂಬಂಧಪಟ್ಟ ಕಾನೂನು ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಟ್ವಿಟ್ ಮಾಡಿದ್ದರು.

ಬಳಿಕ ಪ್ರಧಾನ ಮಂತ್ರಿ ಕಚೇರಿಯ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಅದನ್ನು ಮರುಸ್ಥಾಪಿಸಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗಿದೆ. ಬಿಟ್ಕಾಯಿನ್ ಕುರಿತು ಮಾಡಲಾದ ಯಾವುದೇ ಟ್ವೀಟ್ಗಳನ್ನೂ ನಂಬಬೇಡಿ ಎಂದು ತಿಳಿಸಲಾಗಿತ್ತು.
ತದನಂತರ ಒಂದು ತಿಂಗಳ ಬಳಿಕ ಅಂದರೆ 2022ರ ಜನವರಿ 12ರಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು. ಟ್ವಿಟರ್ ಅಕೌಂಟ್ ಹ್ಯಾಕ್ ಮಾಡಿದ್ದ ಹ್ಯಾಕರ್ಸ್ಗಳು ಖಾತೆಯ ಹೆಸರನ್ನು ಎಲೋನ್ ಮಸ್ಕ್ ಎಂದು ಬದಲಿಸಿದ್ದರು.
Recommended Video

ಹಾಗೆಯೇ (ಅದ್ಭುತ ಕೆಲಸ) ಎಂದೂ ಟ್ವೀಟ್ ಮಾಡಿದ್ದರು. ಇನ್ನು ಒಂದಿಷ್ಟು ಲಿಂಕ್ಗಳನ್ನೆಲ್ಲ ಪೋಸ್ಟ್ ಮಾಡಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಟ್ವಿಟ್ಟರ್ ಖಾತೆಯ ಮೇಲೆ ನಿಯಂತ್ರಣ ವಾಪಸ್ ಪಡೆದು ಪ್ರೊಫೈಲ್ನ್ನು ಬದಲಿಸಿ, ಟ್ವೀಟ್ಗಳನ್ನೂ ಡಿಲೀಟ್ ಮಾಡಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications