ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಮಾಣವಚನಕ್ಕೆ ಮಾ.25ರ ಮುಹೂರ್ತ
ಲಕ್ನೋ, ಮಾರ್ಚ್ 18: ಉತ್ತರ ಪ್ರದೇಶದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಯೋಗಿ ಆದಿತ್ಯನಾಥ್ ಮಾರ್ಚ್ 25ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಯುಪಿ ಸಿಎಂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಕೇಂದ್ರ ಸಚಿವರು ಹಾಜರಾಗಲಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮವು ಮಾರ್ಚ್ 25ರ ಶುಕ್ರವಾರ ಸಂಜೆ 4 ಗಂಟೆಗೆ ಲಕ್ನೋದಲ್ಲಿರುವ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕ್ತಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. 50,000 ಆಸನಗಳ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣದಲ್ಲಿ 200 ವಿವಿಐಪಿ ಆಸನಗಳ ವ್ಯವಸ್ಥೆಯೂ ಇದೆ.
ಪ್ರಧಾನಿ ಮೋದಿ ಮತ್ತು ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿಪಕ್ಷಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಹಾಜರಾಗುವ ನಿರೀಕ್ಷೆಯಿದೆ.

ಅದ್ಧೂರಿಯಾಗಿ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮ:
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಬಿಜೆಪಿ ಮುಂದಾಗಿದ್ದು, ಆಹ್ವಾನಿತರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಅತಿಥಿಗಳಲ್ಲಿ "ಲಭರ್ತಿ" ಎಂದು ಕರೆಯಲ್ಪಡುವ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳು ಇರುತ್ತಾರೆ, ಅವರು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.
ಯುಪಿಯಲ್ಲಿ 255 ಕ್ಷೇತ್ರಗಳನ್ನು ಗೆದ್ದಿರುವ ಬಿಜೆಪಿ
2022ರಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಎರಡನೇ ಬಾರಿ ಗೆಲುವಿನ ಬಾವುಟ ಹಾರಿಸಿದೆ. ರಾಜ್ಯದ 75 ಜಿಲ್ಲೆಗಳ 403 ಕ್ಷೇತ್ರಗಳಲ್ಲಿ ಸರ್ಕಾರ ರಚಿಸುವುದಕ್ಕೆ ಕನಿಷ್ಠ 202 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಆದರೆ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 255 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿಗೆ ಸೆಡ್ಡು ಹೊಡೆದ ಸಮಾಜವಾದಿ ಪಕ್ಷವು 111 ಕ್ಷೇತ್ರಗಳಲ್ಲಿ ಗೆಲುವಿನ ಸೈಕಲ್ ಏರಿದೆ. ಅಪ್ನಾ ದಳ 12, ಬಹುಜನ ಸಮಾಜವಾದಿ ಪಕ್ಷ 1, ಜೆಡಿಎಲ್ 2, ನಿರ್ಬಲ್ ಇಂಡಿಯನ್ ಶೋಷಿತ ಹಮಾರಾ ಆಮ್ ದಳ 6, ರಾಷ್ಟ್ರೀಯ ಲೋಕ ದಳ 8, ಸುಹೇಲ್ದೇವ್ ಭಾರತೀಯ ಸಮಾಜ ಪಾರ್ಟಿ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಮಾತ್ರ ಕೇವಲ 2 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳುವಂತೆ ಆಗಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications