Breaking: ಸಮವಸ್ತ್ರ ಧರಿಸಿಲ್ಲ ಎಂದು ದಲಿತ ಬಾಲಕಿ ಮೇಲೆ ಹಲ್ಲೆ
ಲಕ್ನೋ, ಆಗಸ್ಟ್ 23: ಸಮವಸ್ತ್ರ ಧರಿಸಿಲ್ಲ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಭದೋಹಿ ಗ್ರಾಮದ ಮಾಜಿ ಮುಖ್ಯಸ್ಥರೊಬ್ಬರು ದಲಿತ ಬಾಲಕಿಯನ್ನು ಥಳಿಸಿ ಶಾಲೆಯಿಂದ ಹೊರಹಾಕಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಆರೋಪಿ ಮಾಜಿ ಪ್ರಧಾನನನ್ನು ಮನೋಜ್ ಕುಮಾರ್ ದುಬೆ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮನೋಜ್ ಕುಮಾರ್ ದುಬೆಯು ಅಧಿಕಾರಿಯೂ ಅಲ್ಲ, ಶಿಕ್ಷಕನೂ ಅಲ್ಲ, ಆದರೂ ಪ್ರತಿದಿನ ಗ್ರಾಮದ ಶಾಲೆಗೆ ಹೋಗಿ ಶಿಕ್ಷಕರು ಮತ್ತು ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಸರಕಾರಿ ಶಾಲೆಗೆ ಹೋದ ಮನೋಜ್ ಕುಮಾರ್ ದುಬೆ ಸಮವಸ್ತ್ರ ಧರಿಸದೆ ಬಂದಿದ್ದ 8 ನೇ ತರಗತಿ ವಿದ್ಯಾರ್ಥಿನಿಯನ್ನು ಸಮವಸ್ತ್ರ ಧರಿಸದ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಬಾಲಕಿ, ತನ್ನ ತಂದೆ ತನಗಾಗಿ ಖರೀದಿಸಿದಾಗ ಸಮವಸ್ತ್ರ ಹಾಕಿಕೊಂಡು ಬರುವುದಾಗಿ ಉತ್ತರಿಸಿದ್ದಾಳೆ ಎಂದು ಚೌರಿ ಪೊಲೀಸ್ ಠಾಣೆ ಪ್ರಭಾರಿ ಗಿರಿಜಾ ಶಂಕರ್ ಯಾದವ್ ತಿಳಿಸಿದರು.

ಬಾಲಕಿಯ ಉತ್ತರ ಕೇಳಿದ ಮನೋಜ್ ಕುಮಾರ್ ದುಬೆ ತರಗತಿಯಲ್ಲಿದ್ದ ಬಾಲಕಿಯನ್ನು ಥಳಿಸಿ, ಆಕೆಯ ವಿರುದ್ಧ ಜಾತಿ ನಿಂದನೆ ಮಾಡಿ ಶಾಲೆಯಿಂದ ಹೊರಹಾಕಿದ್ದಾನೆ ಎಂದು ಅವರು ಹೇಳಿದರು.
ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಹಲ್ಲೆ, ಬೆದರಿಕೆ ಮತ್ತು ಪರಿಶಿಷ್ಟ ಜಾತಿ, ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗಿರಿಜಾ ಶಂಕರ್ ಯಾದವ್ ತಿಳಿಸಿದ್ದಾರೆ.
ಆರೋಪಿಯು ಪರಾರಿಯಾಗಿದ್ದು, ಆರೋಪಿಯನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತಿಚೆಗೆ ಉತ್ತರಪ್ರದೇಶದ ಶ್ರಾವಸ್ತಿಯಲ್ಲಿ ಶಿಕ್ಷಕನೊಬ್ಬ ಶುಲ್ಕದ ವಿಚಾರದಲ್ಲಿ ವಿಕೃತ ಮೆರೆದಿದ್ದರು. ಶುಲ್ಕ ಪಾವತಿಸದ 3ನೇ ತರಗತಿಯ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿದ್ದಾರೆ. ಇದರಿಂದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಶಾಲಾ ಶುಲ್ಕಕ್ಕಾಗಿ ಶಿಕ್ಷಕರು ಥಳಿಸಿದ್ದಾರೆ ಎಂದು ಮೃತನ ಹಿರಿಯ ಸಹೋದರ ಆರೋಪಿಸಿದ್ದಾರೆ. ಶಾಲಾ ಶುಲ್ಕ ನೀಡಲ್ಲ (ತಿಂಗಳಿಗೆ 250 ರೂ.) ಎಂಬ ಕಾರಣಕ್ಕೆ ನನ್ನ ಸಹೋದರನನ್ನು ಶಿಕ್ಷಕರು ಥಳಿಸಿದ್ದಾರೆ ಎಂದು ಮೃತ ವಿದ್ಯಾರ್ಥಿಯ ಸಹೋದರ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications