ಯುಪಿ: ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ, ಖಾಸಗಿ ಅಂಗಕ್ಕೆ ಥಳಿಸಿದ ಗುಂಪು
ಲಕ್ನೋ, ಜು.10: ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಗುಂಪೊಂದು 20 ವರ್ಷದ ದಲಿತ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಯುವಕನನ್ನು ಎಳದಾಡಿ, ಕೋಲುಗಳಿಂದ ಹೊಡೆಯುವ, ಕಾಲಿಂದ ಒದೆಯುವ, ಪ್ಯಾಂಟ್ ಜಾರಿಸಿ ಖಾಸಗಿ ಅಂಗಕ್ಕೆ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದೆ. ಎರಡು ದಿನಗಳ ಹಿಂದೆ ನಡೆದು ತಡವಾಗಿ ಬೆಳಕಿಗೆ ಬಂದಿರುವ ಈ ಘಟನೆ ಕಾನ್ಪುರ್ ದೇಹತ್ನ ಅಕ್ಬರ್ಪುರ ಪ್ರದೇಶದಿಂದ ಬಂದಿದೆ.
ಇನ್ನು ''ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಇತರ ಅಪರಾಧಿಗಳ ಪತ್ತೆ ಕಾರ್ಯ ನಡೆಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ,'' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯುವಕನನ್ನು ಥಳಿಸಿದ ಈ ಗುಂಪು ಆತನ ಬಳಿ ಜಾತಿ ಯಾವುದೆಂದು ಕೇಳಿದ್ದು, ಯುವಕ ತನ್ನ ಜಾತಿ ಹೇಳುತ್ತಿದ್ದಂತೆ ಇನ್ನಷ್ಟು ಕ್ರೂರವಾಗಿ ಥಳಿಸಲು ಆರಂಭಿಸಿದ್ದಾರೆ.
पीटने वाला: "कौन कास्ट हो?"
— Kamal khan (@kamalkhan_NDTV) July 10, 2021
पिटने वाला: "चमार हैं."
फिर डंडों की बौछार बढ़ जाती है।उसे लात, घूसों,डंडों से बेरहमी से पीटा। जिस्म के नाज़ुक हिस्सों में डंडे घुसेड़े।कानपुर देहात में मामला प्रेम प्रसंग का बताते हैं।पुलिस ने एफ़ आई आर कर एक को पकड़ लिया है।दो की तलाश है। pic.twitter.com/BAU4QN2IiZ
ಇನ್ನು ಈ ಬಗ್ಗೆ ಎನ್ಡಿ ಟಿವಿಗೆ ಪ್ರತಿಕ್ರಿಯೆ ನೀಡಿದ ಕಾನ್ಪುರ್ ದೇಹತ್ ಹೆಚ್ಚುವರಿ ಎಸ್ಪಿ ಘಾನ್ಶ್ಯಾಮ್ ಚೌರಾಸಿಯಾ, ವಿಡಿಯೋ ಬಗ್ಗೆ ನಮಗೆ ತಿಳಿದ ಕೂಡಲೇ ಈ ವಿಷಯದಲ್ಲಿ ಪೊಲೀಸ್ ಪ್ರಕರಣ ದಾಖಲಾಗಿತ್ತು. ವೈರಲ್ ವೀಡಿಯೊದಲ್ಲಿ ಗುರುತಿಸಲಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ಜನರು ದಲಿತ ಯುವಕರನ್ನು ಹೊಡೆಯುವುದನ್ನು ವಿಡಿಯೋದಲ್ಲಿ ಕಾಣಬಹುದು. ಆ ಇಬ್ಬರ ವಿವರವನ್ನು ಪತ್ತೆ ಹಚ್ಚಲು ನಾವು ಪ್ರಯತ್ನಿಸುತ್ತಿದ್ದೇವೆ. ಇಬ್ಬರ ಬಂಧನಕ್ಕೆ ತಂಡಗಳನ್ನು ರಚಿಸಲಾಗಿದೆ," ಎಂದು ತಿಳಿಸಿದ್ದಾರೆ.
ಇನ್ನು ಮತ್ತೊಂದು ವಿಡಿಯೋದಲ್ಲಿ ಯುವಕನ ಪ್ಯಾಂಟ್ ಅನ್ನು ಜಾರಿಸಿ ಆತನನ್ನು ಮರಕ್ಕೆ ತಳ್ಳಿ ಹಿಡಿದು, ಖಾಸಗಿ ಅಂಗಗಳಿಗೆ ಕೋಲಿನಿಂದ ಥಳಿಸಿದ್ದಾರೆ. ಯುವಕನನ್ನು ಕಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದಕ್ಕೂ ಮುನ್ನ, ಉತ್ತರ ಪ್ರದೇಶದದ ಲಖಿಂಪುರ ಖೇರಿಯಲ್ಲಿ ಸ್ಥಳೀಯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಮಹಿಳಾ ಅಭ್ಯರ್ಥಿಯ ಸೀರೆ ಎಳೆದು ಅವಮಾನ ಮಾಡಿರುವ ಘಟನೆ ಲ್ಲಿ ನಡೆದಿದೆ. ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬರ ಮೇಲೆ ಕೈ ಮಾಡಿ, ಬಳಿಕ ಸೀರೆ ಎಳೆದು ಅವಮಾನ ಮಾಡಿದ್ದಾರೆ, ಅಖಿಲೇಶ್ ಯಾದವ್ರ ಸಮಾಜವಾದಿ ಪಕ್ಷದ ಬೆಂಬಲಿಗರೇ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
(ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications