ಪಾಕಿಸ್ತಾನ್ ಜಿಂದಾಬಾದ್: ಆರ್ಎಲ್ಡಿ ಅಭ್ಯರ್ಥಿ ನೀರಜ್ ಚೌಧರಿ ವಿರುದ್ಧ ದೇಶದ್ರೋಹ ಪ್ರಕರಣ
ಲಕ್ನೋ, ಫೆಬ್ರವರಿ 5: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಿಜ್ನೋರ್ನ ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಅಭ್ಯರ್ಥಿ ನೀರಜ್ ಚೌಧರಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ, ಬಿಜ್ನೋರ್ನ ಆರ್ಎಲ್ಡಿ ಅಭ್ಯರ್ಥಿ ನೀರಜ್ ಚೌಧರಿ ಅವರು ಮನೆ-ಮನೆ ಪ್ರಚಾರದ ವೀಡಿಯೊ ವೈರಲ್ ಆಗಿದ್ದು, ಇದರಲ್ಲಿ ಕೆಲವರು "ಪಾಕಿಸ್ತಾನ್ ಜಿಂದಾಬಾದ್" ಎಂಬ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.
"ಬಿಜ್ನೋರ್ ವಿಧಾನಸಭಾ ಕ್ಷೇತ್ರದ ಆರ್ಎಲ್ಡಿ ಅಭ್ಯರ್ಥಿ ನೀರಜ್ ಚೌಧರಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಅವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾಗ ಜೊತೆಗಿದ್ದ ಕೆಲವರು 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆಗಳನ್ನು ಕೂಗಿದ್ದಾರೆ," ಎಂದು ಕೊತ್ವಾಲಿ ಬಿಜ್ನೋರ್ನ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ರಾಧಾಯ್ ಶ್ಯಾಮ್ ತಿಳಿಸಿದ್ದಾರೆ.

25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಖಾಕಿ
ಉತ್ತರ ಪ್ರದೇಶದ ಲಬಿಜ್ನೋರ್ ವಿಧಾನಸಭೆ ಕ್ಷೇತ್ರದ ರಾಷ್ಟ್ರೀಯ ಲೋಕದಳ ಅಭ್ಯರ್ಥಿ ನೀರಜ್ ಚೌಧರಿ ಮತ್ತು ಇತರೆ 20 ರಿಂದ 25 ಜನರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜೊತೆಗೆ ರಾಷ್ಟ್ರೀಯ ಲೋಕ ದಳ ಪಾರ್ಟಿಯು ಮೈತ್ರಿ ಮಾಡಿಕೊಂಡು ಸ್ಪರ್ಧೆಗೆ ಇಳಿದಿದೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ
124-ಎ (ದೇಶದ್ರೋಹ) ಮತ್ತು 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಮತ್ತು ಸಾಂಕ್ರಾಮಿಕ ರೋಗಗಳ ಕಾಯಿದೆ," ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ ಈವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ರಾಧಾನ್ ಶ್ಯಾಮ್ ಹೇಳಿದ್ದಾರೆ.

ವಿಡಿಯೋ ಮತ್ತು ಆಡಿಯೋ ಮರುಪರಿಶೀಲನೆ
ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಮತ್ತು ಅದರಲ್ಲಿನ ಆಡಿಯೋವನ್ನು ಮತ್ತೊಮ್ಮೆ ಮರುಪರಿಶೀಲನೆಗೆ ಒಳಪಡಿಸಲಾಗುವುದು. ಈ ಹಂತದಲ್ಲಿ ಘೋಷಣೆ ಕೂಗುತ್ತಿರುವುದು ನೀರಜ್ ಚೌಧರಿ ಅಥವಾ ಅವರ ಹಿಂಬಾಲಕೇ ಎಂಬುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜ್ನೋರ್ ಅಭ್ಯರ್ಥಿ ಬಗ್ಗೆ ಜಯಂತ್ ಚೌಧರಿ ಪ್ರತಿಕ್ರಿಯೆ
ಇನ್ನು ತಮ್ಮ ಪಕ್ಷದ ಅಭ್ಯರ್ಥಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಲೋಕ ದಳ ಮುಖ್ಯಸ್ಥ ಜಯಂತ್ ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ. "ಮತದಾರರೇ ಜಾಗರೂಕತೆಯನ್ನು ವಹಿಸಿ. ಈ ಚುನಾವಣೆಯು ಸೋದರತ್ವ ವರ್ಸಸ್ ಬಿಜೆಪಿ ನಡುವೆ ನಡೆಯುತ್ತಿದೆ. ನವಭಾರತದಲ್ಲಿ ಅಕಿಫ್ ಭಾಯಿ ಜಿಂದಾಬಾದ್ ಎಂದು ಕೂಗಿದರೆ ಅದು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಕರೆಯುತ್ತಾರೆ," ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
"ನಮ್ಮ ಬಿಜ್ನೋರ್ ಅಭ್ಯರ್ಥಿ ಚೌಧರಿ ನೀರಜ್ ಒಬ್ಬ ವೈದ್ಯ. ಅವನು ಒಬ್ಬ ಉದಾತ್ತ ವ್ಯಕ್ತಿ. ಈ ಮೂರ್ಖರು ('ಮೂರ್ಖ್') ವೀಡಿಯೊವನ್ನು ಮಾಡುವ ಮೂಲಕ ಅವರನ್ನು ದೇಶದ್ರೋಹಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ," ಎಂದು ಮತ್ತೊಂದು ಟ್ವೀಟ್ನಲ್ಲಿ ದೂಷಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications