ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪರಿಹಾರ ಘೋಷಿಸಿದ ಯೋಗಿ ಆದಿತ್ಯನಾಥ್

ಲಕ್ನೋ, ಏಪ್ರಿಲ್ 10: ದೇಶಾದ್ಯಂತ ಲಾಕ್‌ಡೌನ್‌ನಿಂದ ಲಕ್ಷಾಂತರ ಕಾರ್ಮಿಕರು ಕಂಗಾಲಾಗಿದ್ದಾರೆ. ಕೆಲಸವಿಲ್ಲದೆ, ಕೂಲಿ ಇಲ್ಲದೆ, ಊಟವಿಲ್ಲದೆ ಪರದಾಡುತ್ತಿದ್ದಾರೆ. ಇದೀಗ ಉತ್ತರ ಪ್ರದೇಶ ಸರ್ಕಾರ ಇಂತಹವರ ನೆರವಿಗೆ ಬಂದಿದೆ.

Recommended Video

      ಇಂತಹ ಒಬ್ರೋ ಇಬ್ರಿಂದ ಎಲ್ಲರಿಗೂ ಕೆಟ್ಟ ಹೆಸರು | Muslim | selling Mask | Seased

      ಕಟ್ಟಡ ನಿರ್ಮಾಣ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ 1 ಸಾವಿರ ರೂಪಾಯಿಯನ್ನು ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 11 ಲಕ್ಷ ಕಾರ್ಮಿಕರಿಗೆ ತಲಾ ಒಂದು ಸಾವಿರ ರೂಪಾಯಿ ಅವರ ಖಾತೆಗೆ ಜಮಾ ಆಗಲಿದೆ ಎಂದು ಅವರು ಹೇಳಿದ್ದಾರೆ.

      ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಖ್ಯೆ ಹೆಚ್ಚಿದೆ. ಲಕ್ಷಾಂತರ ಕುಟುಂಬಗಳು ಇದನ್ನೇ ನಂಬಿಕೊಂಡಿವೆ. ಹೀಗಾಗಿ, ಚರ್ಚೆ ನಡೆಸಿ ಸರ್ಕಾರ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪರಿಹಾರ ನೀಡುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

      Uttar Pradesh Government Announced Rs 1000 Each Construction Workers

      ಲಾಕ್‌ಡೌನ್‌ನಿಂದ ಮನೆಯಿಂದ ಹೊರ ಬರುವ ಹಾಗೆ ಇಲ್ಲ. ಯಾವುದೇ ಕಟ್ಟಡ ನಿರ್ಮಾಣ ಕಾರ್ಯಗಳು ಇಲ್ಲ. ಇದರಿಂದ ದಿನ ನಿತ್ಯದ ಕೂಲಿಯನ್ನು ನಂಬಿಕೊಂಡಿದ್ದ ಎಷ್ಟೋ ಕುಟುಂಬಕ್ಕೆ ಇದರಿಂದ ಊಟಕ್ಕೂ ಕಷ್ಟವಾಗಿದೆ.

      ಉತ್ತರ ಪ್ರದೇಶದಲ್ಲಿ ಸದ್ಯ 410 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿವೆ. 4 ಜನರು ಮರಣ ಹೊಂದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+