Breaking: ನೂಪುರ್ ಶರ್ಮಾ ಹತ್ಯೆಗೆ ಸ್ಕೆಚ್ ಹಾಕಿದ್ದ ಉಗ್ರ ಅರೆಸ್ಟ್
ಲಕ್ನೋ, ಆಗಸ್ಟ್ 12: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹತ್ಯೆಗಾಗಿ ಹೊಂಚು ಹಾಕಿದ್ದ ಎನ್ನಲಾದ ಜೈಶ್-ಎ-ಮೊಹಮ್ಮದ್ ಸಂಘಟನೆ ಉಗ್ರನನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಬಂಧಿತನಾದ ಭಯೋತ್ಪಾದಕನಿಗೆ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಸಂಘಟನೆ ನಂಟಿದೆ. ಬಂಧಿಸಲ್ಪಟ್ಟ ಭಯೋತ್ಪಾದಕನು ಸಹರಾನ್ಪುರದ ಗಂಗೋಹ್ ಗ್ರಾಮದ ಮೊಹಮ್ಮದ್ ನದೀಮ್ ಎಂದು ಗುರುತಿಸಲಾಗಿದೆ. ನೂಪುರ್ ಶರ್ಮಾ ಹತ್ಯೆಯ ಹೊಣೆಯನ್ನು ಈತನಿಗೇ ವಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರವಾದಿ ಮೊಹಮ್ಮದ್ ವಿರುದ್ಧ ನೂಪುರ್ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗಳು ಭಾರತದಲ್ಲಿ ತೀವ್ರ ವಿರೋಧ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು. ಅಲ್ಲದೇ ಗಲ್ಭ್ ರಾಷ್ಟ್ರಗಳಿಂದಲೂ ಸಹ ತೀವ್ರ ಟೀಕೆಯನ್ನು ಎದುರಿಸಬೇಕಾಯಿತು. ಈ ಬೆಳವಣಿಗೆ ಬೆನ್ನಲ್ಲೇ ನೂಪುರ್ ಶರ್ಮಾರನ್ನು ಬಿಜೆಪಿಯಿಂದ ವಜಾಗೊಳಿಸಲಾಗಿತ್ತು.

ಪೊಲೀಸರ ಎದುರು ಸತ್ಯ ಒಪ್ಪಿಕೊಂಡ ಉಗ್ರ: ಭಾರತದಲ್ಲಿ ಪ್ರವಾದಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾರನ್ನು ಕೊಲ್ಲುವುದಕ್ಕಾಗಿಯೇ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಸಂಘಟನೆಯು ತನ್ನನ್ನು ನಿಯೋಜಿಸಿದೆ ಎಂದು ಸ್ವತಃ ಭಯೋತ್ಪಾದಕನೇ ಪೊಲೀಸರ ಎದುರಿಗೆ ಒಪ್ಪಿಕೊಂಡಿದ್ದಾನೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರನ ಮೊಬೈಲ್ ನೀಡಿದ ಸಾಕ್ಷಿಗಳು: ಉಗ್ರ ಮೊಹಮ್ಮದ್ ನದೀಮ್ ಶಸ್ತ್ರಾಸ್ತ್ರ ತರಬೇತಿಗಾಗಿ ಪಾಕಿಸ್ತಾನಕ್ಕೆ ತೆರಳಲು ಸಿದ್ಧನಾಗಿದ್ದು, ಫೋನ್ ದಾಖಲೆಗಳು ಮತ್ತು ಸಂದೇಶಗಳಿಂದ ಬಹಿರಂಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಫೋನ್ ದಾಖಲೆಗಳು ಸುಧಾರಿತ ಸ್ಫೋಟಕ ಸಾಧನ ಅಥವಾ IED ಅನ್ನು ಹೇಗೆ ನಿರ್ಮಿಸುವುದು ಎಂಬುದರ ಸಂಪೂರ್ಣ ಕೋರ್ಸ್ ಅನ್ನು ತೋರಿಸುತ್ತವೆ. ಇದರ ಜೊತೆಗೆ ಜೈಶ್ ಮತ್ತು ಥರೀಕ್-ಎ-ತಾಲಿಬಾನ್ ಜೊತೆಗಿನ ಚಾಟ್ ಮತ್ತು ಧ್ವನಿ ಸಂದೇಶಗಳನ್ನು ಮೊಹಮ್ಮದ್ ನದೀಮ್ ಫೋನ್ನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications