ಪುಲ್ವಾಮಾ ದಾಳಿ ನಡೆಯಬೇಕಾಗಿದ್ದೇ ಎಂದ ಸಮಾಜವಾದಿ ಪಕ್ಷ ನಾಯಕ!
ಲಕ್ನೋ, ಫೆಬ್ರವರಿ 16: ಪುಲ್ವಾಮಾದಲ್ಲಿ ಭಯೋತ್ಪಾದನಾ ದಾಳಿಯಿಂದ ಸೈನಿಕರು ಬಲಿಯಾಗಿದ್ದರೆ, ದೇಶದ ಅನೇಕ ರಾಜಕಾರಣಿಗಳು ಈ ದುಃಖದ ಸನ್ನಿವೇಶದಲ್ಲಿಯೂ ರಾಜಕೀಯ ಹುಡುಕುತ್ತಿದ್ದಾರೆ.
ಪುಲ್ವಾಮಾ ದಾಳಿಗೆ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದು ಹೇಳುವ ಮೂಲಕ ನವಜೋತ್ ಸಿಂಗ್ ಸಿಧು ಜನರ ಭಾವನೆಗಳನ್ನು ಕೆರಳಿಸಿದ್ದರು.
ಅಸೂಕ್ಷ್ಮದ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿ ಮಾಡುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಕೂಡ ಪುಲ್ವಾಮಾ ಘಟನೆಯಲ್ಲಿ ರಾಜಕೀಯ ಲಾಭ ಮಾಡುವ ಪ್ರಯತ್ನ ನಡೆಸಿದ್ದಾರೆ.
ಪುಲ್ವಾಮಾ ಘಟನೆ ನಡೆಯಬೇಕಾಗಿದ್ದೇ ಎಂದು ಅಜಂ ಖಾನ್ ಆಘಾತಕಾರಿ ಹೇಳಿಕೆ ನೀಡಿದ್ದಾರೆ.

ನಮ್ಮ ಗುಪ್ತಚರ ಸೇವೆಗಳು ಸೇರಿದಂತೆ ಎಲ್ಲ ಸಂಸ್ಥೆಗಳನ್ನೂ ರಾಜಕೀಯ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಕೆಲವು ಸಂಸ್ಥೆಗಳು ಮಮತಾ ಬ್ಯಾನರ್ಜಿ, ರಾಬ್ರಟ್ ವಾದ್ರಾ ಸಾಬ್, ಅಖಿಲೇಶ್ ಜಿ ಅವರ ವಿರುದ್ಧದ ತನಿಖೆಯಲ್ಲಿ ಬ್ಯುಸಿಯಾಗಿವೆ.
ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ಜೀವನ ಪರ್ಯಂತ ನೀಡಿದ ಕೊಡುಗೆಗಳನ್ನು ಮರೆಸುವಂತೆ ಒತ್ತಾಯಪೂರ್ವಕವಾಗಿ ಹೇಳಿಕೆ ನೀಡುವ ರೀತಿ ಆಗಿದ್ದನ್ನು ನೀವೇ ನೋಡಿದ್ದೀರಿ.
ಈ ಸಂಸ್ಥೆಗಳನ್ನು ತಮ್ಮ ಕೆಲಸವನ್ನು ಕಿತ್ತುಕೊಂಡು ರಾಜಕೀಯ ಕೆಲಸಗಳಿಗೆ ಹಚ್ಚಿದರೆ ಕೆಟ್ಟ ಘಟನೆಗಳು ನಡೆಯುತ್ತವೆ ಎಂದು ಅಜಂ ಖಾನ್ ಹೇಳಿದ್ದಾರೆ.
ಯಾರೋ ಮಾಡಿದ ಕೃತ್ಯಕ್ಕೆ ಇಡೀ ದೇಶವನ್ನು (ಪಾಕಿಸ್ತಾನ) ದೂಷಿಸುವುದು ತಪ್ಪು. ಇದಕ್ಕೆ ಸಂಬಂಧಪಟ್ಟ ಸಂಘಟನೆಯನ್ನೋ ಅಥವಾ ವ್ಯಕ್ತಿಯನ್ನು ದೂಷಿಸಬೇಕು ಎಂದು, ಉಗ್ರರ ಕೃತ್ಯದಲ್ಲಿ ಪಾಕ್ ಕೈವಾಡವಿಲ್ಲ ಎಂದು ಪರೋಕ್ಷವಾಗಿ ಸಿದ್ದು ಹೇಳಿಕೆ ನೀಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications