ನಾಪತ್ತೆಯಾಗಿದ್ದ ಕೋವಿಡ್ ರೋಗಿಯ ಮೃತದೇಹ ಪತ್ತೆ: ಕಿಡ್ನಿ ಕದಿಯಲು ಆಸ್ಪತ್ರೆ ಸಿಬ್ಬಂದಿಯಿಂದಲೇ ಕೊಲೆ?
ವಾರಣಾಸಿ, ಆಗಸ್ಟ್ 25: ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ಬಲಿಯಾದವರ ದೇಹಗಳ ಹಸ್ತಾಂತರ ಮಾಡುವ ಪ್ರಕರಣಗಳು ಸಾಕಷ್ಟು ವಿವಾದ ಸೃಷ್ಟಿಸುತ್ತಿವೆ. ಕುಟುಂಬದವರಿಗೆ ಮಾಹಿತಿ ನೀಡದೆಯೇ ಅಂತ್ಯಸಂಸ್ಕಾರ ನಡೆಸಿದ ಹಲವು ಪ್ರಕರಣಗಳಿವೆ. ಇನ್ನು ಕೆಲವು ಪ್ರಕರಣಗಳಲ್ಲಿ ಮೃತರ ದೇಹವನ್ನು ಕೊನೆಯ ಬಾರಿಗೆ ನೋಡಲು ಕೂಡ ದುಡ್ಡು ಕೇಳಿದ ಆಸ್ಪತ್ರೆಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
Recommended Video
ಕೊರೊನಾದಿಂದ ಮೃತಪಟ್ಟಿದ್ದಾರೆ ಎನ್ನಲಾದ ವ್ಯಕ್ತಿಗಳ ಮೃತದೇಹವನ್ನು ಪ್ಲಾಸ್ಟಿಕ್ ಹೊದಿಕೆಯಿಂದ ಸುತ್ತಿರಲಾಗುತ್ತದೆ. ಅವರ ಅಂಗಾಂಗಗಳನ್ನು ಕಳವು ಮಾಡಿದ್ದರೂ ಇದರಿಂದ ಗೊತ್ತಾಗುವುದಿಲ್ಲ ಎಂಬ ಅನುಮಾನಗಳು ಹೆಚ್ಚಾಗುತ್ತಿವೆ. ಅದಕ್ಕೆ ಪೂರಕವೆಂಬಂತಹ ಘಟನೆಯೊಂದು ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರದಲ್ಲಿಯೇ ನಡೆದಿದೆ.
ಉತ್ತರ ಪ್ರದೇಶದ ವಾರಣಾಸಿಯ ಆಸ್ಪತ್ರೆಯೊಂದರಿಂದ ಕಣ್ಮರೆಯಾಗಿದ್ದ ಕೋವಿಡ್ ರೋಗಿಯ ದೇಹ ಒಂದು ದಿನದ ಬಳಿಕ ಸಮೀಪದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಚರಂಡಿಯೊಂದರಲ್ಲಿ ಪತ್ತೆಯಾಗಿದೆ. ಮುಂದೆ ಓದಿ...

ನಾಪತ್ತೆಯಾಗಿದ್ದ ರೋಗಿ
ವಾರಣಾಸಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದರು. ಆಘಾತಕಾರಿ ಬೆಳವಣಿಗೆಯಲ್ಲಿ ಅವರು ಕಣ್ಮರೆಯಾಗಿ ಮರುದಿನ ವಾರಣಾಸಿಯ ಚರಂಡಿಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಚರಂಡಿಯಲ್ಲಿ ಮೃತದೇಹ ಪತ್ತೆ
ನಗರದ ಬಿಎಚ್ಯು ಕೋವಿಡ್ ಆಸ್ಪತ್ರೆಯ ಸಮೀಪದ ಚರಂಡಿ ಸಾಲಿನಲ್ಲಿ ಸೋಮವಾರ ರೋಗಿಯ ಮೃತದೇಹ ದೊರಕಿದೆ. ಈ ಘಟನೆ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ರೋಗಿಯ ಅಂಗಾಂಗಗಳನ್ನು ಕದಿಯುವ ಸಲುವಾಗಿ ಅವರನ್ನು ಆಸ್ಪತ್ರೆ ಅಧಿಕಾರಿಗಳು ಕೊಂದು ಹಾಕಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಕಿಡ್ನಿ ಕದಿಯಲು ಕೊಲೆ
ರೋಗಿಯ ಕಿಡ್ನಿಗಳನ್ನು ಕದಿಯಲು ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ ಕುಟುಂಬದವರು, ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದಾಂಧಲೆ ನಡೆಸಿದ್ದಾರೆ. ಸುತ್ತಲಿನ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಸ್ಥಳಕ್ಕೆ ಧಾವಿಸಿ ಕುಟುಂಬದವರನ್ನು ಸಮಾಧಾನಪಡಿಸಿದರು.

ಆಸ್ಪತ್ರೆಯಿಂದ ನಾಪತ್ತೆ
ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಬಿಎಚ್ಯು ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿದ್ದ ವ್ಯಕ್ತಿ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು. ದಾಫಿಯ ಲಂಕಾ ಪೊಲೀಸ್ ಠಾಣೆಯಲ್ಲಿ ಕುಟುಂಬದವರು ಕಾಣೆಯಾದ ಬಗ್ಗೆ ದೂರು ನೀಡಿದ್ದರು.

ಅಪಘಾತದಲ್ಲಿ ಗಾಯಗೊಂಡಿದ್ದರು
ಅಪಘಾತವೊಂದರಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕಳೆದ ವಾರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವುದು ಬಳಿಕ ಕಂಡುಬಂದಿತ್ತು. ಇದರಿಂದ ಅವರನ್ನು ಆಸ್ಪತ್ರೆಯ ಕೋವಿಡ್ ಐಸೋಲೇಷನ್ ವಾರ್ಡ್ಗೆ ವರ್ಗಾಯಿಸಲಾಗಿತ್ತು. ಭಾನುವಾರ ಅವರು ನಾಪತ್ತೆಯಾಗಿರುವುದು ಗೊತ್ತಾದ ಬಳಿಕ ತೀವ್ರ ಹುಡುಕಾಟ ನಡೆಸಲಾಗಿತ್ತು. ಆಸ್ಪತ್ರೆಯ ಚರಂಡಿ ಸಾಲಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications