ಕೊರೊನಾ ಸೋಂಕಿತೆ ಕನಿಕಾ ಜೊತೆ ಪಾರ್ಟಿಯಲ್ಲಿದ್ದ ವಸುಂಧರಾ ರಾಜೇ ಸೇಫ್
ಲಕ್ನೌ, ಮಾರ್ಚ್ 21: ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರಿಗೆ ಕೊರೊನಾ ಫಲಿತಾಂಶ ನೆಗಿಟಿವ್ ಬಂದಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಲಂಡನ್ನಿಂದ ಭಾರತಕ್ಕೆ ಬಂದಿದ್ದ ಗಾಯಕಿ ಕನಿಕಾ ಕಪೂರ್ಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಸೋಂಕು ದೃಢವಾಗುವುದಕ್ಕು ಮೊದಲು ಲಕ್ನೌನಲ್ಲಿ ನಡೆದ ಬರ್ತಡೇ ಪಾರ್ಟಿಯಲ್ಲಿ ಕನಿಕಾ ಕಪೂರ್ ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ವಸುಂಧರಾ ರಾಜೇ ಸೇರಿದಂತೆ ಹಲವು ರಾಜಕಾರಣಗಳಿಗೆ ಭಾಗವಹಿಸಿದ್ದರು. ಹಾಗಾಗಿ, ಕನಿಕಾ ಕಪೂರ್ನಿಂದ ತಮಗೂ ಸೋಂಕು ಹರಡಿಬರಹುದು ಎಂಬ ಆತಂಕದಿಂದ ಮನೆಯಲ್ಲೇ ದಿಗ್ಬಂಧನಕ್ಕೆ ಒಳಗಾಗಿದ್ದರು.
ಇದೀಗ, ವಸುಂಧರಾ ರಾಜೇ ಅವರ ಕೊರೊನಾ ಪರೀಕ್ಷೆಯ ವರದಿ ಬಂದಿದ್ದು ನೆಗಿಟಿವ್ ಎಂದು ತಿಳಿದು ಬಂದಿದೆ. ಅಂದ್ಹಾಗೆ, ಇದು ಮೊದಲ ವರದಿ. ಇನ್ನೊಂದು ವರದಿ ಬರಬೇಕಾಗಿದ್ದು, ಮಾರ್ಚ್ 22ಕ್ಕೆ ಆ ವರದಿ ಸಿಗಲಿದೆಯಂತೆ.

ಮತ್ತೊಂದೆಡೆ ಅದೇ ಬರ್ತಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ಉತ್ತರ ಪ್ರದೇಶದ ಆರೋಗ್ಯ ಸಚಿವರ ಕೊರೊನಾ ವರದಿಯೂ ನೆಗಿಟಿವ್ ಬಂದಿದೆ. ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾಲಯ ಈ ಬಗ್ಗೆ ಪರೀಕ್ಷೆ ನಡೆಸಿದ್ದು. ಸಚಿವ ಜೈ ಪ್ರತಾಪ್ ಸಿಂಗ್ ಅವರಿಗೆ ಸೋಂಕು ಇಲ್ಲ ಎಂದು ತಿಳಿಸಿದೆ.
ಜೈ ಪ್ರತಾಪ್ ಸಿಂಗ್ ಅವರ ಜೊತೆ ಸಂಪರ್ಕ ಹೊಂದಿದ್ದ 28 ಜನರ ರಕ್ತದ ಮಾದರಿ ಕೂಡ ಸಂಗ್ರಹಿಸಿ ಪರೀಕ್ಷಿಸಲಾಗಿತ್ತು. ಅವರಿಗೂ ಸೋಂಕು ನೆಗಿಟಿವ್ ಬಂದಿದೆ ಎಂದು ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.
ಇನ್ನು ವಸುಂಧರಾ ರಾಜೇ ಅವರ ಮಗ ಸಂಸದ ದುಶ್ಯಂತ್ ಮತ್ತು ಆತನ ಪತ್ನಿ ಕೂಡ ಕನಿಕಾ ಕಪೂರ್ ಭಾಗಿಯಾಗಿದ್ದ ಪಾರ್ಟಿಯಲ್ಲಿದ್ದರು. ಅವರ ಕುರಿತು ವರದಿ ಇನ್ನು ಬಹಿರಂಗವಾಗಿಲ್ಲ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications