ಕೊರೊನಾ ಸೋಂಕಿತೆ ಕನಿಕಾ ಜೊತೆ ಪಾರ್ಟಿಯಲ್ಲಿದ್ದ ವಸುಂಧರಾ ರಾಜೇ ಸೇಫ್
ಲಕ್ನೌ, ಮಾರ್ಚ್ 21: ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರಿಗೆ ಕೊರೊನಾ ಫಲಿತಾಂಶ ನೆಗಿಟಿವ್ ಬಂದಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಲಂಡನ್ನಿಂದ ಭಾರತಕ್ಕೆ ಬಂದಿದ್ದ ಗಾಯಕಿ ಕನಿಕಾ ಕಪೂರ್ಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಸೋಂಕು ದೃಢವಾಗುವುದಕ್ಕು ಮೊದಲು ಲಕ್ನೌನಲ್ಲಿ ನಡೆದ ಬರ್ತಡೇ ಪಾರ್ಟಿಯಲ್ಲಿ ಕನಿಕಾ ಕಪೂರ್ ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ವಸುಂಧರಾ ರಾಜೇ ಸೇರಿದಂತೆ ಹಲವು ರಾಜಕಾರಣಗಳಿಗೆ ಭಾಗವಹಿಸಿದ್ದರು. ಹಾಗಾಗಿ, ಕನಿಕಾ ಕಪೂರ್ನಿಂದ ತಮಗೂ ಸೋಂಕು ಹರಡಿಬರಹುದು ಎಂಬ ಆತಂಕದಿಂದ ಮನೆಯಲ್ಲೇ ದಿಗ್ಬಂಧನಕ್ಕೆ ಒಳಗಾಗಿದ್ದರು.
ಇದೀಗ, ವಸುಂಧರಾ ರಾಜೇ ಅವರ ಕೊರೊನಾ ಪರೀಕ್ಷೆಯ ವರದಿ ಬಂದಿದ್ದು ನೆಗಿಟಿವ್ ಎಂದು ತಿಳಿದು ಬಂದಿದೆ. ಅಂದ್ಹಾಗೆ, ಇದು ಮೊದಲ ವರದಿ. ಇನ್ನೊಂದು ವರದಿ ಬರಬೇಕಾಗಿದ್ದು, ಮಾರ್ಚ್ 22ಕ್ಕೆ ಆ ವರದಿ ಸಿಗಲಿದೆಯಂತೆ.

ಮತ್ತೊಂದೆಡೆ ಅದೇ ಬರ್ತಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ಉತ್ತರ ಪ್ರದೇಶದ ಆರೋಗ್ಯ ಸಚಿವರ ಕೊರೊನಾ ವರದಿಯೂ ನೆಗಿಟಿವ್ ಬಂದಿದೆ. ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾಲಯ ಈ ಬಗ್ಗೆ ಪರೀಕ್ಷೆ ನಡೆಸಿದ್ದು. ಸಚಿವ ಜೈ ಪ್ರತಾಪ್ ಸಿಂಗ್ ಅವರಿಗೆ ಸೋಂಕು ಇಲ್ಲ ಎಂದು ತಿಳಿಸಿದೆ.
ಜೈ ಪ್ರತಾಪ್ ಸಿಂಗ್ ಅವರ ಜೊತೆ ಸಂಪರ್ಕ ಹೊಂದಿದ್ದ 28 ಜನರ ರಕ್ತದ ಮಾದರಿ ಕೂಡ ಸಂಗ್ರಹಿಸಿ ಪರೀಕ್ಷಿಸಲಾಗಿತ್ತು. ಅವರಿಗೂ ಸೋಂಕು ನೆಗಿಟಿವ್ ಬಂದಿದೆ ಎಂದು ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.
ಇನ್ನು ವಸುಂಧರಾ ರಾಜೇ ಅವರ ಮಗ ಸಂಸದ ದುಶ್ಯಂತ್ ಮತ್ತು ಆತನ ಪತ್ನಿ ಕೂಡ ಕನಿಕಾ ಕಪೂರ್ ಭಾಗಿಯಾಗಿದ್ದ ಪಾರ್ಟಿಯಲ್ಲಿದ್ದರು. ಅವರ ಕುರಿತು ವರದಿ ಇನ್ನು ಬಹಿರಂಗವಾಗಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications