ವಿಡಿಯೋ: ಜೌಗು ಪ್ರದೇಶದಲ್ಲಿ ಸಿಕ್ಕಿಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಬ್ರೇವ್ ಯುಪಿ ಪೊಲೀಸ್ ಅಧಿಕಾರಿ
ಲಕ್ನೋ, ಜುಲೈ 4: ಉತ್ತರ ಪ್ರದೇಶದ ಆಗ್ರಾದಲ್ಲಿ ಜೌಗು ಪ್ರದೇಶದಲ್ಲಿ ಸಿಕ್ಕಿಬಿದ್ದ 54 ವರ್ಷದ ವ್ಯಕ್ತಿಯನ್ನು ರಕ್ಷಿಸಲು ಪೊಲೀಸ್ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಈ ಸಾಹಸಮಯ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ಪೊಲೀಸರನ್ನು ಶ್ಲಾಘಿಸಿದ್ದಾರೆ.
ಆಗ್ರಾದ ಬರ್ಹಾನ್ ಪೊಲೀಸ್ ಠಾಣೆಯ ಎಸ್ಎಚ್ಒ ಶೇರ್ ಸಿಂಗ್ ಅವರು ಶುಕ್ರವಾರ ಮಧ್ಯಾಹ್ನ ಎತ್ಮಾದ್ಪುರದ ರೈಲ್ವೆ ನಿಲ್ದಾಣದ ಬಳಿ ಜೌಗು ಪ್ರದೇಶದಲ್ಲಿ ಸಿಲುಕಿರುವ ವ್ಯಕ್ತಿಯ ಬಗ್ಗೆ ಕರ್ತವ್ಯದಲ್ಲಿರುವ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ವ್ಯಕ್ತಿಯನ್ನು ಬ್ರಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಕೊಚ್ಚೆಯಲ್ಲಿ ಸಿಕ್ಕ ವ್ಯಕ್ತಿಗೆ ಚಲಿಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಅವರನ್ನು ಸುರಕ್ಷತವಾಗಿ ರಕ್ಷಣೆ ಮಾಡಲಾಗಿದೆ.
"ಪೊಲೀಸರ ತಂಡ ಸ್ಥಳವನ್ನು ತಲುಪಿ ಕಾನ್ಸ್ಟೆಬಲ್ ಸಂದೇಶ್ ಕುಮಾರ್ ಸೊಂಟಕ್ಕೆ ಹಗ್ಗವನ್ನು ಕಟ್ಟಿಕೊಂಡು ಜೌಗು ಪ್ರದೇಶಕ್ಕೆ ಪ್ರವೇಶಿಸಿದರು. ಕುಮಾರ್ ಆ ವ್ಯಕ್ತಿಯನ್ನು ತಪುಪಲು ಹರಸಾಹಸ ಪಡಬೇಕಾಯಿತು. ಇತರ ಪೊಲೀಸರು ಹಗ್ಗವನ್ನು ಬಳಸಿ ಅವರನ್ನು ಎಳೆಯಲು ಸಹಾಯ ಮಾಡಿದರು. ಆತನನ್ನು ರಕ್ಷಿಸಿದ ನಂತರ, ವ್ಯಕ್ತಿಯನ್ನು ಚಿಕಿತ್ಸೆಗಾಗಿ ಎತ್ಮಾದಪುರದ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ" ಎಂದು ಎಸ್ಎಚ್ಒ ತಿಳಿಸಿದ್ದಾರೆ.

"ಜೌಗು ಪ್ರದೇಶದಲ್ಲಿ ಅಸಹಾಯಕವಾಗಿ ಸಿಕ್ಕಿಬಿದ್ದ ವೃದ್ಧನನ್ನು ಹೊರತೆಗೆಯಲು ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿ ಕಾನ್ಸ್ಟೆಬಲ್ ಸಂದೇಶ್ ಕುಮಾರ್ ಮತ್ತು ತಂಡ PS ಬರ್ಹಾನ್ ಅವರ ಧೈರ್ಯಶಾಲಿ ಪ್ರಯತ್ನಗಳಿಗೆ ವಂದನೆಗಳು" ಎಂದು ಯುಪಿ ಪೊಲೀಸರು ಟ್ವೀಟ್ ಮಾಡಿದ್ದಾರೆ.
'Marshals of safety'
— UP POLICE (@Uppolice) July 3, 2022
Saluting the courageous efforts of Constable Sandesh Kumar & team PS Barhan of @agrapolice who marshalled the available resources to pull out an old man helplessly trapped in a marshy land. #UPPCares pic.twitter.com/M24tWtBwfn
ಆಗ್ರಾ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಜೀವ್ ಕೃಷ್ಣ ಅವರು ಕಾನ್ಸ್ಟೆಬಲ್ ಸಂದೇಶ್ ಕುಮಾರ್ ಅವರ ಧೈರ್ಯಶಾಲಿ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ವ್ಯಕ್ತಿಯ ಜೀವವನ್ನು ಉಳಿಸಿದ್ದಕ್ಕಾಗಿ ಅವರಿಗೆ ಬಹುಮಾನವನ್ನು ಘೋಷಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬನ ಜೀವ ಉಳಿಸಿದ ಪೊಲೀಸರ ಪ್ರಯತ್ನವನ್ನು ಜನರು ಶ್ಲಾಘಿಸಿದ್ದಾರೆ.

ವೈರಲ್ ವಿಡಿಯೋಕ್ಕೆ ಪ್ರತಿಕ್ರಿಯಿಸಿದ ವ್ಯಕ್ತಿಯೊಬ್ಬರು, "ನಾಗರಿಕರ ಸುರಕ್ಷತೆ ಮತ್ತು ಸಮವಸ್ತ್ರದ ಕರ್ತವ್ಯವನ್ನು ಪರಿಚಯಿಸಿದ ಸಂದೇಶ್ ಕುಮಾರ್ ಜಿ. ನಿಮ್ಮಲ್ಲಿ ಮಾನವೀಯತೆ ತುಂಬಿದೆ. ನೀವು ಉತ್ತಮ ಕೆಲಸ ಮುಂದುವರಿಸಿ. ಆ ದೇವರು ನಿಮ್ಮನ್ನು ನಿರೀಕ್ಷಿಸುತ್ತಾನೆ" ಎಂದು ಬರೆದಿದ್ದಾರೆ. ಮತ್ತೊಬ್ಬರು "ಅವರ ಅಸಾಧಾರಣ ಧೈರ್ಯಕ್ಕೆ ಸೆಲ್ಯೂಟ್" ಎಂದು ಬರೆದಿದ್ದಾರೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ











Click it and Unblock the Notifications