ನೀರು ಕುಡಿಯಲು ದೇವಾಲಯದ ಒಳಗೆ ಹೋಗಿದ್ದಕ್ಕೆ ಮುಸ್ಲಿಂ ಬಾಲಕನ ಮೇಲೆ ಹಲ್ಲೆ: ಅಮಾನವೀಯ ಘಟನೆ
ಗಾಜಿಯಾಬಾದ್, ಮಾರ್ಚ್ 13: ನೀರು ಕುಡಿಯುವ ಸಲುವಾಗಿ ದೇವಸ್ಥಾನದ ಒಳಗೆ ಹೋಗಿದ್ದ ಬಾಲಕನೊಬ್ಬನನ್ನು ಅಮಾನವೀಯವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಈ ಭಯಾನಕ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಕಂಡುಬಂದ ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಆ ದೃಶ್ಯದ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ ಪೊಲೀಸರು ತಿಳಿಸಿದ್ದಾರೆ. ಬಿಹಾರ ಮೂಲದ ಶ್ರಿಂಗಿ ನಂದನ್ ಯಾದವ್ ಎಂದು ಆರೋಪಿಯನ್ನು ಗುರುತಿಸಲಾಗಿದೆ.

ನೀರು ಕುಡಿಯುವ ಸಲುವಾಗಿ ದೇವಸ್ಥಾನದ ಒಳಗೆ ಬಂದಿದ್ದ ಬಾಲಕನನ್ನು ಹಿಡಿದುಕೊಂಡಿದ್ದ ಆರೋಪಿ, ಆತನ ಹೆಸರು ಮತ್ತು ಅವನ ತಂದೆಯ ಹೆಸರು ಕೇಳುವುದು ವಿಡಿಯೋದಲ್ಲಿ ದಾಖಲಾಗಿದೆ. ಆ ಬಾಲಕ ಹೆದರಿಕೊಂಡು ನಿಂತಿರುವುದು ಕಾಣಿಸುತ್ತದೆ.
According to a instagram account (hinduektasanghh), A muslim kid was mercilessly beaten for drinking water in a temple.
— Mohammed Zubair (@zoo_bear) March 12, 2021
Cc : @ghaziabadpolice @Uppolice pic.twitter.com/61ezNX0zMn
ದೇವಸ್ಥಾನದ ಒಳಗೆ ಏಕೆ ಹೋಗಿದ್ದಿ ಎಂದು ಆರೋಪಿ ಪ್ರಶ್ನಿಸಿದಾಗ, ನೀರು ಕುಡಿಯಲೆಂದು ಒಳಗೆ ಹೋಗಿದ್ದಾಗಿ ಬಾಲಕ ತಿಳಿಸಿದ್ದಾನೆ. ಅದನ್ನು ಕೇಳಿದ ಕೂಡಲೇ ಆರೋಪಿ, ಬಾಲಕನ ಮೇಲೆ ಕರುಣೆ ಇಲ್ಲದೆ ಮನಬಂದಂತೆ ಬಾರಿಸಿ, ಒದ್ದಿದ್ದಾನೆ. ಆತನ ಜತೆಗಿದ್ದವನು ಈ ವಿಡಿಯೋ ರೆಕಾರ್ಡ್ ಮಾಡಿದ್ದಾನೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications