ರಾಜಕೀಯ ಸಾಮರಸ್ಯ: ಅಖಿಲೇಶ್ ಯಾದವ್ ಹೆಗಲ ಮೇಲೆ ಕೈ ಹಾಕಿದ ಸಿಎಂ ಯೋಗಿ!
ಲಕ್ನೋ ಮಾರ್ಚ್ 28: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೂತನವಾಗಿ ಚುನಾಯಿತ ಶಾಸಕರ ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದರು. ಸಿಎಂ ಯೋಗಿ ಮುಗುಳ್ನಗುತ್ತಾ ಅಖಿಲೇಶ್ ಯಾದವ್ ಅವರಿಗೆ ಹಸ್ತಲಾಘವ ಮಾಡಿ ಮತ್ತು ಅವರ ಭುಜದ ಮೇಲೂ ಕೈ ಹಾಕಿದರು. ಸುದ್ದಿ ಸಂಸ್ಥೆ ಎಎನ್ಐ ಈ ವಿಡಿಯೋವನ್ನು ಹಂಚಿಕೊಂಡಿದೆ.
18ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇಂದು ಆರಂಭವಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, 'ಈ ಸಂದರ್ಭದಲ್ಲಿ ಎಲ್ಲ ಸದಸ್ಯರನ್ನು ಸ್ವಾಗತಿಸುತ್ತೇನೆ. ಹೊಸದಾಗಿ ಚುನಾಯಿತರಾದ ಸದಸ್ಯರು ಸದನದ ಸಭ್ಯತೆ ಮತ್ತು ಸಂಪ್ರದಾಯವನ್ನು ಅನುಸರಿಸುತ್ತಾರೆ ಮತ್ತು ಸದನದ ಕಲಾಪಗಳನ್ನು ಮುಂದುವರಿಸುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ' ಎಂದರು.
ಖುಷಿನಗರದಲ್ಲಿ ಬಾಬರ್ ಹತ್ಯೆ ಪ್ರಕರಣ: ಕಟ್ಟುನಿಟ್ಟಿನ ಕ್ರಮಕ್ಕೆ ಯೋಗಿ ಸೂಚನೆ- ಇಬ್ಬರ ಬಂಧನ
ಸದನದ ನಾಯಕನಾಗಿ ಸಿಎಂ ಯೋಗಿ ಪ್ರಮಾಣ ವಚನ ಸ್ವೀಕಾರ
ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆಯಲ್ಲಿ ಮೊದಲು ಸದನದ ನಾಯಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಅಖಿಲೇಶ್ ಯಾದವ್ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ವಿಧಾನಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಸದಸ್ಯ ಬ್ರಜೇಶ್ ಪಾಠಕ್ ಸಭಾನಾಯಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ರಮಾಪತಿ ಶಾಸ್ತ್ರಿ ಪ್ರಮಾಣ ವಚನ ಬೋಧಿಸಿದರು.
#WATCH Uttar Pradesh CM Yogi Adityanath meets Leader of Opposition Akhilesh Yadav in the Legislative Assembly during oath-taking of newly-elected legislators #Lucknow pic.twitter.com/7r6fX7ErjX
— ANI UP/Uttarakhand (@ANINewsUP) March 28, 2022
'ಬೆಂಚ್ ಮಾತ್ರ ಬದಲಾಗಿದೆ' ಅಖಿಲೇಶ್
ಯುಪಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, "ಬೆಂಚ್ ಮಾತ್ರ ಬದಲಾಗಿದೆ, ನಾನು ಈಗ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುತ್ತೇನೆ. ಪ್ರತಿಪಕ್ಷಗಳು ಸರ್ಕಾರದ ಹೊಣೆಗಾರಿಕೆಗಾಗಿ ಕೆಲಸ ಮಾಡಲಿದ್ದು, ಪ್ರತಿಪಕ್ಷಗಳ ಪಾತ್ರ ಧನಾತ್ಮಕವಾಗಿರುತ್ತದೆ" ಎಂದರು.