ವಿಕಾಸ್ ದುಬೆ ಪತ್ನಿ ಸಮಾಜವಾದಿ ಪಕ್ಷದ ಸದಸ್ಯೆಯಲ್ಲ
ಲಕ್ನೋ, ಜುಲೈ 09 : ಎಂಟು ಪೊಲೀಸರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಉತ್ತರ ಪ್ರದೇಶದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಪತ್ನಿ ಸಮಾಜವಾದಿ ಪಕ್ಷದ ಸದಸ್ಯಯೇ?. ಮಧ್ಯಪ್ರದೇಶದ ಉಜ್ಜೈನಿಯಲ್ಲಿ ವಿಕಾಸ್ ದುಬೆಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
Recommended Video
ವಿಕಾಸ್ ದುಬೆ ಪತ್ನಿ ಸಮಾಜವಾದಿ ಪಕ್ಷದ ಅಜೀವ ಸದಸ್ಯೆ ಎಂಬ ವರದಿಗಳನ್ನು ಪಕ್ಷದ ನಾಯಕ ಅಭಿಷೇಕ್ ಮಿಶ್ರಾ ತಳ್ಳಿ ಹಾಕಿದ್ದಾರೆ. "ವಿಕಾಸ್ ದುಬೆ ಪತ್ನಿ ರಿಚಾ ದುಬೆ ನಮ್ಮ ಪಕ್ಷದ ಸದಸ್ಯೆ ಅಲ್ಲ" ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.
"ರಿಚಾ ದುಬೆ ನಮ್ಮ ಪಕ್ಷದ ಸಕ್ರಿಯ ಕಾರ್ಯಕರ್ತೆಯಲ್ಲ, ನಮ್ಮ ಪಕ್ಷದ ಚಿನ್ಹೆಯಡಿ ಆಕೆ ಎಂದೂ ಚುನಾವಣೆಗೆ ಸ್ಪರ್ಧಿಸಿಲ್ಲ" ಎಂದು ಅಭಿಷೇಕ್ ಮಿಶ್ರಾ ಹೇಳಿದ್ದಾರೆ. ರಿಚಾ ಸಮಾಜವಾದಿ ಪಕ್ಷದ ಕಾರ್ಯಕರ್ತೆ ಎಂದು ಹರಿದಾಡುತ್ತಿರುವ ದಾಖಲೆಗಳು ನಕಲಿ ಎಂದು ಅವರು ತಿಳಿಸಿದ್ದಾರೆ.

2015ರಲ್ಲಿ 20 ಸಾವಿರ ರೂ. ನೀಡಿ ರಿಚಾ ದುಬೆ ಸಮಾಜವಾದಿ ಪಕ್ಷದ ಅಜೀವ ಸದಸ್ಯತ್ವ ಪಡೆದಿದ್ದಾಳೆ. ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾಳೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. 2015ರಲ್ಲಿ ಕಾನ್ಪುರ ಗ್ರಾಮಾಂತರದ ಜಿಲ್ಲಾ ಪಂಚಾಯತ್ ಚುನಾವಣೆಗೆ ಆಕೆ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದಳು ಎಂಬ ಸುದ್ದಿಗಳು ಹಬ್ಬಿದ್ದವು.
"ವಿರೋಧ ಪಕ್ಷದ ಐಟಿ ಸೆಲ್ಗಳು ರಿಚಾ ದುಬೆ ಸಮಾಜವಾದಿ ಪಕ್ಷದ ಸದಸ್ಯೆ ಎಂದು ಸುಳ್ಳು ನಕಲು ಕಾಗದ ಪತ್ರಗಳನ್ನು ತೋರಿಸುತ್ತಿವೆ. ಜನರು ಚುನಾವಣಾ ಆಯೋಗದ ವೆಬ್ ಸೈಟ್ನಲ್ಲಿ ಈ ಕುರಿತು ಮಾಹಿತಿ ಪಡೆಯಬಹುದು. ಗುರುವಾರ ಮಧ್ಯರಾತ್ರಿ ನಡೆದ ಪೊಲೀಸರ ದಾಳಿ ಬಗ್ಗೆ ಸಿಬಿಐ ತನಿಖೆ ನಡೆಯಬೇಕು" ಎಂದು ಅಭಿಷೇಕ್ ಮಿಶ್ರಾ ಒತ್ತಾಯಿಸಿದರು.
ಪತ್ನಿಗೆ ನೋಟಿಸ್ : ಲಕ್ನೋ ಅಭಿವೃದ್ಧಿ ಪ್ರಾಧಿಕಾರ ರಿಚಾ ದುಬೆಯ ಲಕ್ನೋ ನಿವಾಸಕ್ಕೆ ನೋಟಿಸ್ ಕಳುಹಿಸಿದ್ದು, ವಿಕಾಸ್ ದುಬೆಗೆ ಸೇರಿದ ಮನೆಯ ನಕ್ಷೆಯನ್ನು ನೀಡುವಂತೆ ಸೂಚನೆ ನೀಡಿದೆ. ಗುರುವಾರ ಮುಂಜಾನೆ ಮಧ್ಯಪ್ರದೇಶದಲ್ಲಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications