ಉತ್ತರ ಪ್ರದೇಶದಲ್ಲಿ ದೊಣ್ಣೆಯಿಂದ ಬಡಿದು, ಟ್ರಾಕ್ಟರ್ ಹಾಯಿಸಿ ಹುಲಿಯ ಹತ್ಯೆ
ಲಖನೌ, ನವೆಂಬರ್ 05 : ಓರ್ವನನ್ನು ಕೊಂದ ಕಿಚ್ಚಿಗೆ ರೊಚ್ಚಿಗೆದ್ದ ಜನ ಹುಲಿಯೊಂದನ್ನು ಹೊಡೆದು, ಅದರ ಮೇಲೆ ಟ್ರಾಕ್ಟರ್ ಹಾಯಿಸಿ ಸಾಯಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ಭಾನುವಾರ ಜರುಗಿದೆ.
2 ವರ್ಷಗಳಲ್ಲಿ 13 ಜನರನ್ನು ಕೊಂದುತಿಂದ ಅವನಿ ಎಂಬ 'ನರಭಕ್ಷಕ' ಹುಲಿಯನ್ನು ಮಹಾರಾಷ್ಟ್ರದಲ್ಲಿ ಸರಕಾರದ ಆದೇಶದ ಮೇರೆಗೆ ಕೊಂದ ವಿವಾದ ಇಡೀ ದೇಶವನ್ನು ಆವರಿಸಿಕೊಂಡಿರುವ ಹೊತ್ತಿನಲ್ಲಿ ಮತ್ತೊಂದು ಹುಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಲಖನೌದಿಂದ 210 ಕಿ.ಮೀ. ದೂರದಲ್ಲಿರುವ ದುಧ್ವಾ ಹುಲಿ ಅಭಿಯಾರಣ್ಯದ ಬಳಿ, ಅರಣ್ಯದ ಮೂಲಕ ಹಾದು ಹೋಗುತ್ತಿದ್ದಾಗ 50 ವರ್ಷದ ವ್ಯಕ್ತಿಯ ಮೇಲೆ 10 ವರ್ಷದ ಹುಲಿ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರು ನಂತರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಇದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಅಭಯಾರಣ್ಯದೊಳಗೆ ನುಗ್ಗಿ, ಅರಣ್ಯ ರಕ್ಷಣಾ ಸಿಬ್ಬಂದಿಯನ್ನು ಥಳಿಸಿ, ಅಲ್ಲಿಯೇ ಇದ್ದ ಟ್ರಾಕ್ಟರ್ ಜೊತೆ ಕಾಡಿನೊಳಗೆ ನುಗ್ಗಿದ್ದಾರೆ. ಹುಲಿ ಕಾಣಿಸಿಕೊಳ್ಳುತ್ತಿದ್ದಂತೆ ಅದನ್ನು ದೊಣ್ಣೆಗಳಿಂದ ಬಡಿದಿದ್ದಾರೆ ಮತ್ತು ಅದರ ಮೇಲೆ ಟ್ರಾಕ್ಟರ್ ಅನ್ನೂ ಹಾಯಿಸಿ ಕೊಂದಿದ್ದಾರೆ.
ಕೆಲ ಸಮಾಜಘಾತುಕ ಶಕ್ತಿಗಳು ಹುಲಿಯನ್ನು ಕೊಂದಿವೆ. ಅವರನ್ನು ನಾವು ಗುರುತಿಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸುತ್ತೇವೆ ಮತ್ತು ಅವರನ್ನು ಬಂಧಿಸುತ್ತೇವೆ ಎಂದು ದುಧ್ವಾ ರಾಷ್ಟ್ರೀಯ ಪಾರ್ಕ್ ನ ನಿರ್ದೇಶಕ ಮಹಾವೀರ ಕೋಜಿಲಂಗಿ ಎಂಬುವವರು ಹೇಳಿದ್ದಾರೆ.
ಅರಣ್ಯಾಧಿಕಾರಿಗಳ ಪ್ರಕಾರ, ಕಳೆದ 10 ವರ್ಷಗಳಲ್ಲಿ ಆ ಹೆಣ್ಣು ಹುಲಿ ಯಾವ ಮನುಷ್ಯನ ಮೇಲೂ ದಾಳಿ ಮಾಡಿಲ್ಲ. ಆದರೆ, ಮಾನವರೇ ಅರಣ್ಯದೊಳಗೆ ಪ್ರವೇಶಿಸಿ, ಕಾಡು ಪ್ರಾಣಿಗಳಿಗೆ ತೊಂದರೆ ನೀಡುತ್ತಾರೆ. ಆದರೆ, ಗ್ರಾಮಸ್ಥರು ಹೇಳುವುದೇ ಬೇರೆ, ಕಳೆದೆರಡು ವಾರಗಳಿಂದ ಹುಲಿಯಿಂದಾಗಿ ಜನರು ಭೀತಿಗೊಳಗಾಗಿದ್ದರು. ಈ ಬಗ್ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
Another #Tiger #NationalPride mercilessly killed by villagers with a tractor seized from @UpforestUp officials in #Chaltua #Mailani #KishanpurTigerSanctuary #UttarPradesh she injured a man when he ventured into the jungle. We need a special team for ever rising #ManAnimalConflict pic.twitter.com/FwN93fm2Ax
— Randeep Hooda (@RandeepHooda) November 4, 2018
ಹುಲಿಯನ್ನು ಗ್ರಾಮಸ್ಥರು ಕೊಂದಿರುವ ಚಿತ್ರವನ್ನು ಬಾಲಿವುಡ್ ನಟ ರಣದೀಪ್ ಹೂಡಾ ಅವರು ಟ್ವಿಟ್ಟರ್ ನಲ್ಲಿ ಹಾಕಿದ್ದಾರೆ. ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚುತ್ತಿದ್ದು, ಇದನ್ನು ತಹಬದಿಗೆ ತರಲು ಹೊಸ ತಂಡವನ್ನು ರಚಿಸಬೇಕು ಎಂದು ಉಪದೇಶ ನೀಡಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications