ಸ್ಮಾರ್ಟ್ಸಿಟಿಯಲ್ಲಿ ಸ್ಕೂಟರ್ ಸಮೇತ ಮ್ಯಾನ್ಹೋಲ್ಗೆ ಬಿದ್ದ ದಂಪತಿ: ವಿಡಿಯೋ ನೋಡಿ
ಅಲಿಘರ್, ಜೂನ್ 19: ದೇಶಾದ್ಯಂತ ಮುಂಗಾರು ಆರಂಭವಾಗಿದೆ. ಈಶಾನ್ಯ ಭಾರತದಲ್ಲಿ ಮಳೆ ಅಬ್ಬರಿಸುತ್ತಿದ್ದು ನದಿಗಳು ಉಕ್ಕಿ ಹರಿಯುತ್ತಿವೆ. ಬಿಸಿಗಾಳಿಯಿಂದ ತತ್ತರಿಸಿದ್ದ ದೆಹಲಿ, ಉತ್ತರ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ.
ಉತ್ತರ ಪ್ರದೇಶದ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿರುವ ಅಲಿಘರ್ ದಲ್ಲೂ ಉತ್ತಮ ಮಳೆಯಾಗಿದ್ದು, ತುಂಬಿ ಹರಿಯುತ್ತಿರುವ ಚರಂಡಿಯೊಂದಕ್ಕೆ ದಂಪತಿಗಳು ಸ್ಕೂಟರ್ ಸಮೇತ ಬಿದ್ದಿರುವ ವಿಡಿಯೋ ಈಗ ವೈರಲ್ ಆಗಿದೆ. ಅದೃಷ್ಟವಶಾತ್ ಸಮೀಪದ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ.
ಜಲಾವೃತಗೊಂಡ ರಸ್ತೆಯ ಮೇಲೆ ದಂಪತಿಗಳು ಬೈಕ್ ಸಮೇತ ತೆರೆದ ಮ್ಯಾನ್ಹೋಲ್ಗೆ ಬೀಳುತ್ತಿರುವ ವೀಡಿಯೋವನ್ನು ಸ್ಥಳೀಯರು ಸೆರೆ ಹಿಡಿದಿದ್ದಾರೆ, ಈ ವಿಡಿಯೋ ಈಗ ಟ್ವಿಟರ್ ನಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ, ವಾಹನ ಮತ್ತು ಅದರ ಮೇಲಿದ್ದವರು ಮ್ಯಾನ್ಹೋಲ್ಗೆ ಉರುಳುವ ಮೊದಲು, ಪಾದಚಾರಿ ಮಾರ್ಗದ ಪಕ್ಕದಲ್ಲಿ ನಿಲ್ಲಿಸಲು ಜಲಾವೃತವಾದ ರಸ್ತೆಯ ಮೂಲಕ ಸ್ಕೂಟರ್ನಲ್ಲಿ ದಂಪತಿಗಳು ಚಾಲನೆ ಮಾಡುತ್ತಿರುವುದನ್ನು ಕಾಣಬಹುದು. ದಾರಿಹೋಕರು ದಂಪತಿಗೆ ಸಹಾಯಕ್ಕೆ ಧಾವಿಸಿದರು. ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ.
ಮೂಲಗಳ ಪ್ರಕಾರ, ಸ್ಕೂಟರ್ನಲ್ಲಿ ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿ ಮತ್ತು ಅವರ ಪತ್ನಿ ಪ್ರಯಾಣಿಸುತ್ತಿದ್ದರು. ಅವರು ವೈದ್ಯರನ್ನು ನೋಡಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಇನ್ನು ಮ್ಯಾನ್ಹೋಲ್ಗೆ ಬಿದ್ದವರನ್ನು, ಯುಪಿ ಪೊಲೀಸ್ ಅಧಿಕಾರಿ ದಯಾನಂದ್ ಸಿಂಗ್ ಅಟ್ರಿ ಮತ್ತು ಅವರ ಪತ್ನಿ ಅಂಜು ಅತ್ರಿ ಎಂದು ಗುರುತಿಸಲಾಗಿದೆ. ಗಂಡ ಹೆಂಡತಿ ಇಬ್ಬರಿಗೂ ಗಾಯಗಳಾಗಿವೆ.
"ನನ್ನ ಮುಂದಿರುವ ರಸ್ತೆಯು ಜಲಾವೃತಗೊಂಡಿದ್ದರಿಂದ, ನಾನು ಹೊಂಡವನ್ನು ಕಾಣಿಸದ ಕಾರಣ ಅದರಲ್ಲಿ ಬಿದ್ದಿದ್ದೇನೆ" ಎಂದು ದಯಾನಂದ ಸಿಂಗ್ ಅತ್ರಿ ತಿಳಿಸಿದರು.
ಇನ್ನು ಟ್ವಿಟರ್ ನಲ್ಲಿ ವಿಡಿಯೋ ವೈರಲ್ ಆಗಿದ್ದು ಬಿಜೆಪಿ ಸರ್ಕಾರವನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ವಿಟರ್ ಬಳಕೆದಾರರೊಬ್ಬರು, "ಸ್ಮಾರ್ಟ್ ಸಿಟಿ ಅಲಿಘರ್ಗೆ ಸ್ವಾಗತ ಎಂದು" ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
#यूपी का स्मार्ट सिटी अलीगढ़।
— Surya Pratap Singh IAS Rtd. (@suryapsingh_IAS) June 19, 2022
किसे धन्यवाद दें? pic.twitter.com/VnwAqLRKQc
ಇನ್ನೊಬ್ಬ ಟ್ವಿಟರ್ ಬಳಕೆದಾರರು 2019ರಲ್ಲಿ ಅಲಿಘರ್ ಪ್ರವಾಹ ಪರಿಸ್ಥಿತಿ ವಿಡಿಯೋ ಹಂಚಿಕೊಂಡಿದ್ದು, ಅಲಿಘರ್ ನಲ್ಲಿ ಅಭಿವೃದ್ಧಿ ಸ್ಥಿರವಾಗಿದೆ ಎನಿಸುತ್ತಿದೆ ಎಂದು ಹೇಳಿದ್ದಾರೆ.
This was Aligarh in 2019. I guess development in Aligarh remained constant! pic.twitter.com/zVfhs9dqYf
— Anupriya Singh (@cricketwoman) June 19, 2022
ಇನ್ನೊಬ್ಬ ಟ್ವಿಟರ್ ಬಳಕೆದಾರರು "ಉತ್ತಮ ಪ್ರದೇಶದದಲ್ಲಿ ಡಬಲ್ ಇಂಜಿನ್ ಸರ್ಕಾರದ ಪರಿಣಾಮ, ಸಂತ್ರಸ್ತರು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿ ಎಂದು ಟ್ವೀಟ್ ಮಾಡಿದ್ದಾರೆ.
Meanwhile in Aligarh, Uttam Pradesh with double engine sarkar. The victim is an UP cop. pic.twitter.com/pgQFDIHphc
— DevelopingBengal (@DevelopBengal) June 18, 2022
ಮಳೆಗಾಲದಲ್ಲಿ ಈ ಭಾಗದ ರಸ್ತೆಗಳು ಆಗಾಗ್ಗೆ ಜಲಾವೃತಗೊಳ್ಳುತ್ತವೆ. ಇದರಿಂದ ಈ ಹಿಂದೆ ಹಲವಾರು ಅವಘಡಗಳು ಸಂಭವಿಸಿವೆ.ಈ ಹೊಂಡವು ಈ ಹಿಂದೆ ಹಲವಾರು ಅವಘಡಗಳಿಗೆ ಮೂಲವಾಗಿತ್ತು.ಆದರೂ ನಗರಸಭೆ ಗಮನಹರಿಸಿಲ್ಲ ಎಂದು ಆಂಬ್ಯುಲೆನ್ಸ್ ಚಾಲಕ ವಿನೋದ್ ಕುಮಾರ್ ಆರೋಪಿಸಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications