ವಿಡಿಯೋ: ಸುರೇಂದ್ರ ಸಿಂಗ್ ಚಟ್ಟಕ್ಕೆ ಹೆಗಲು ಕೊಟ್ಟ ಸ್ಮೃತಿ ಇರಾನಿ
Recommended Video
ಲಕ್ನೋ, ಮೇ 26: ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಸಂಸದೆ ಸ್ಮೃತಿ ಇರಾನಿ ಅವರು ತಮ್ಮ ಆಪ್ತ ಬೆಂಬಲಿಗರ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಶನಿವಾರ ರಾತ್ರಿ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನರೇಂದ್ರ ಮೋದಿ ಅವರನ್ನು ನೂತನ ಸಂಸದೀಯ ನಾಯಕರನ್ನಾಗಿ ಆಯ್ಕೆ ಮಾಡುವ ಸಮಾರಂಭ, ಸಂಭ್ರಮದಲ್ಲಿದ್ದ ಸ್ಮೃತಿ ಅವರು ಇಂದು ಸುರೇಂದ್ರ ಸೂತಕದಲ್ಲಿದ್ದಾರೆ.
ಅಮೇಥಿಯ ಬರುಲಿಯಾ ಗ್ರಾಮದ ತಮ್ಮ ಮನೆಯಲ್ಲಿ ಶನಿವಾರ ರಾತ್ರಿ ವಿಶ್ರಾಂತಿ ಪಡೆಯುತ್ತಿದ್ದ ಸುರೇಂದ್ರ ಸಿಂಗ್ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬರುಲಿಯಾ ಗ್ರಾಮದ ಮಾಜಿ ಮುಖ್ಯಸ್ಥರಾಗಿದ್ದ ಸುರೇಂದ್ರ ಅವರ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಜಮೋ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸುರೇಂದ್ರ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸ್ಮೃತಿ, ಭಾನುವಾರ ಮಧ್ಯಾಹ್ನ ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ಸ್ಮೃತಿ ತಮ್ಮ ಬೆಂಬಲಿಗನ ಮೃತದೇಹವನ್ನು ಹೊರುವ ವೇಳೆ ಚಟ್ಟಕ್ಕೆ ಹೆಗಲು ನೀಡಿದರು.
#WATCH BJP MP from Amethi, Smriti Irani lends a shoulder to mortal remains of Surendra Singh, ex-village head of Barauli, Amethi, who was shot dead last night. pic.twitter.com/jQWV9s2ZwY
— ANI (@ANI) May 26, 2019
ಪೊಲೀಸರು ಕೊಲೆಯ ಹಿಂದೆ ವೈಯಕ್ತಿಕ ದ್ವೇಷ ಇರಬಹುದು ಎಂದು ಶಂಕಿಸಿದ್ದು, ರಾಜಕೀಯ ವೈಷಮ್ಯದ ಹಿನ್ನೆಲೆಯೂ ಕೊಲೆ ನಡೆದಿರಬಹುದು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆ ಸಂಬಂಧ ಏಳು ಜನರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.ಮುಂದಿನ 12 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ನಿರ್ದೇಶಕ ಒ.ಪಿ ಸಿಂಗ್ ಹೇಳಿದ್ದಾರೆ.
This : best symbol of true women empowerment : to those who don’t understand , many women aren’t allowed to even carry the arthi .. I wasn’t ..
— pallavi ghosh (@_pallavighosh) May 26, 2019
ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಿ, ಇಲ್ಲದಿದ್ದರೆ ಶಿಸ್ತುಕ್ರಮಕ್ಕೆ ಸಿದ್ಧರಾಗಿ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಈ ನಡುವೆ ಸ್ಮೃತಿ ಇರಾನಿ ಅವರು ಸುರೇಂದ್ರ ಸಿಂಗ್ ಪಾರ್ಥೀವ ಶರೀರವನ್ನು ಹೊತ್ತು ಸಾಗುವ ವಿಡಿಯೋ ನೋಡಿದ ಪತ್ರಕರ್ತೆ ಪಲ್ಲವಿ ಘೋಷ್, ಎಷ್ಟೋ ಮಹಿಳೆಯರಿಗೆ ಅಂತ್ಯ ಸಂಸ್ಕಾರ ಸ್ಥಳಕ್ಕೆ ಭೇಟಿ ನೀಡಲು ಅವಕಾಶ ಇರುವುದಿಲ್ಲ. ಸ್ಮೃತಿ ಇರಾನಿ ಅವರ ನಡೆ ಮಹಿಳಾ ಸಬಲೀಕರಣದ ಸಂಕೇತ ಎಂದಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications