ಯೋಗಿ ಪ್ರಮಾಣ ವಚನ ಸ್ವೀಕಾರಿಸುವ ಏಕಾನಾ ಕ್ರೀಡಾಂಗಣದ ವಿಶೇಷತೆ ಏನು?
ಲಕ್ನೋ ಮಾರ್ಚ್ 19: ಉತ್ತರಪ್ರದೇಶದಲ್ಲಿ ಭಾರಿ ಗೆಲುವಿನ ನಂತರ ಬಿಜೆಪಿ ಮತ್ತೆ ಬಹುಮತದ ಸರ್ಕಾರ ರಚಿಸಲು ಭರದ ಸಿದ್ಧತೆ ನಡೆದಿದೆ. ಮಾರ್ಚ್ 25 ರಂದು ಯೋಗಿ ಆದಿತ್ಯನಾಥ್ ಮತ್ತು ಅವರ ಹೊಸದಾಗಿ ಚುನಾಯಿತ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂದೆಂದಿಗೂ ನೆನಪಿನಲ್ಲಿ ಉಳಿಯುವ 2022ರ ಪ್ರಮಾಣ ವಚನಕ್ಕಾಗಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಲಕ್ನೋದ ಅಂತರಾಷ್ಟ್ರೀಯ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಪ್ರಮಾಣವಚನ ಸಮಾರಂಭಕ್ಕೆ ಈ ಕ್ರೀಡಾಂಗಣವನ್ನು ಏಕೆ ಆಯ್ಕೆ ಮಾಡಲಾಗಿದೆ ಮತ್ತು ಅದರ ವಿಶೇಷತೆ ಏನು ಎಂದು ತಿಳಿಯೋಣ.
ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಯುಪಿ ಮುಖ್ಯಮಂತ್ರಿಯಾಗಲು ಪ್ರಮಾಣ ವಚನ ಸ್ವೀಕರಿಸುವ ಅಂತಾರಾಷ್ಟ್ರೀಯ ಏಕನಾ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಐದು ನೂರು ಕೋಟಿ ರೂಪಾಯಿ ವೆಚ್ಚವಾಗಿದೆ. ಜೊತೆಗೆ ಇದು ಈ ಕ್ರೀಡಾಂಗಣವು 70 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ.
ಲಕ್ನೋದ ಸುಲ್ತಾನ್ಪುರ ರಸ್ತೆಯಲ್ಲಿರುವ ಶಹೀದ್ ಪಥದಲ್ಲಿ ನಿರ್ಮಿಸಲಾಗಿರುವ ಈ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಹಾಗೂ ಹೊಸ ಆಟಗಾರರಿಗೆ ತರಬೇತಿ ನೀಡಲು ನಿರ್ಮಿಸಲಾಗಿದೆ. ಯೋಗಿ ಸರ್ಕಾರದ ಅಡಿಯಲ್ಲಿ 2018 ರಲ್ಲಿ ಕ್ರೀಡಾಂಗಣವನ್ನು ಪೂರ್ಣಗೊಳಿಸಲಾಗಿದೆ. 70 ಎಕರೆ ಪ್ರದೇಶದಲ್ಲಿ ಹರಡಿರುವ ಈ ಕ್ರೀಡಾಂಗಣವು ಒಂಬತ್ತು ಪಿಚ್ಗಳನ್ನು ಹೊಂದಿದೆ. ಈ ಕ್ರೀಡಾಂಗಣದಲ್ಲಿ ನಾಲ್ಕು ವಿಐಪಿ ಲಾಂಚ್ಗಳಿವೆ.

ಇದನ್ನು ಆಯ್ಕೆ ಮಾಡಲು ಕಾರಣವೇನು?
ಲಕ್ನೋದಲ್ಲಿರುವ ಈ ಕ್ರೀಡಾಂಗಣವನ್ನು ಪ್ರಮಾಣ ವಚನಕ್ಕೆ ಆಯ್ಕೆ ಮಾಡಲಾಗಿದೆ. ಏಕೆಂದರೆ ಈ ಕ್ರೀಡಾಂಗಣವು 50 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಮಧ್ಯದ ಮೈದಾನದಲ್ಲಿ ಆಸನ ವ್ಯವಸ್ಥೆ ಮಾಡಿದರೆ 60ರಿಂದ 65 ಸಾವಿರ ಮಂದಿ ಈ ಕ್ರೀಡಾಂಗಣಕ್ಕೆ ಬರಬಹುದು.

ಒಂದು ಸಾವಿರ ಕಾರ್ ಪಾರ್ಕಿಂಗ್
ಇದು ಭಾರತದ ಐದನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಒಟ್ಟಿಗೆ ಒಂದು ಸಾವಿರ ಕಾರ್ ಪಾರ್ಕಿಂಗ್ ಮಾಡಬಹುದು ಮತ್ತು ಐದು ಸಾವಿರ ದ್ವಿಚಕ್ರ ವಾಹನ ನಿಲುಗಡೆಗೆ ಅವಕಾಶವಿದೆ. ಈ ಕ್ರೀಡಾಂಗಣವು ಅಂತಾರಾಷ್ಟ್ರೀಯ ಮಟ್ಟದ ಫ್ಲಡ್ ಲೈಟ್ಗಳು, ಮಾಧ್ಯಮ ಕೇಂದ್ರ ಇತರ ಸೌಲಭ್ಯಗಳನ್ನು ಹೊಂದಿದೆ. ಈ ಕ್ರೀಡಾಂಗಣದ ವಿಶೇಷತೆ ಏನೆಂದರೆ ಮಳೆ ಬಂದ ಕೆಲವೇ ಗಂಟೆಗಳಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ನೀರನ್ನು ಹೊರತೆಗೆದು ಮೈದಾನವನ್ನು ಆಟವಾಡುವಂತೆ ಮಾಡಬಹುದು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ನೆನಪಿಗಾಗಿ ಬಿಜೆಪಿ ಮಾಡಿದ್ದು ಹೀಗೆ?
ಈ ಹಿಂದೆ ಏಕನಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಎಂದು ಕರೆಯಲಾಗುತ್ತಿತ್ತು, ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ನಿಧನದ ನಂತರ ಯೋಗಿ ಸರ್ಕಾರ ಇದರ ಹೆಸರನ್ನು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಎಂದು ಬದಲಾಯಿಸಿತು.

ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ
ಈ ಪ್ರಮಾಣ ವಚನದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸಂಪುಟದ ಸಚಿವರು ಸೇರಿದಂತೆ 45 ಸಾವಿರಕ್ಕೂ ಹೆಚ್ಚು ಜನರು, ಕೇಂದ್ರದ ಮುಖ್ಯಸ್ಥರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ 45 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಕಾರಣ ಈ ಅದ್ಧೂರಿ ಕಾರ್ಯಕ್ರಮಕ್ಕೆ ಈ ಕ್ರೀಡಾಂಗಣವನ್ನು ಆಯ್ಕೆ ಮಾಡಲಾಗಿದೆ. ನಾಯಕರೊಂದಿಗೆ ಖ್ಯಾತ ಕೈಗಾರಿಕೋದ್ಯಮಿಗಳು ಮತ್ತು ಧಾರ್ಮಿಕ ಮುಖಂಡರನ್ನು ಸಹ ಆಹ್ವಾನಿಸಲಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಈ ಕ್ರೀಡಾಂಗಣವನ್ನು ವಧುವಿನಂತೆ ಸಿಂಗರಿಸಲಾಗುತ್ತಿದೆ.












Click it and Unblock the Notifications