ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಅರ್ಧ ದಾರಿಯಲ್ಲೇ ಪೊಲೀಸರು ತಡೆದಿದ್ದೇಕೆ..?

ಲಕ್ನೋ, ಡಿಸೆಂಬರ್ 24: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ಪ್ರಾಣ ಕಳೆದುಕೊಂಡ ಕುಟುಂಬಸ್ಥರನ್ನು ಭೇಟಿಯಾಗಲು ಮೀರತ್ ಗೆ ಹೋಗುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಅರ್ಧ ದಾರಿಯಲ್ಲೇ ಉತ್ತರ ಪ್ರದೇಶ ಪೊಲೀಸರು ತಡೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಳೆದ ವಾರ ನಡೆದಿದ್ದ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ಆರು ಜನರು ಪ್ರಾಣ ಕಳೆದುಕೊಂಡಿದ್ದರು.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಇಂದು ಬೆಳಿಗ್ಗೆ ಕಾರಿನ ಮೂಲಕ ಮೀರತ್ ಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ದೆಹಲಿಯಿಂದ 60 ಕಿ.ಮೀ ದೂರದ ಮೀರತ್ ಗೆ ಹೋಗದಂತೆ ಕಾಂಗ್ರೆಸ್ ನಾಯಕರಿಗೆ ತಿಳಳಿಸಿದ್ದರು.

Why Did The Police Stop Rahul And Priyanka In Half Way?

ಈ ಪ್ರದೇಶದಲ್ಲಿ ಹೆಚ್ಚು ಜನ ಸೇರುವುದನ್ನು ನಿಷೇಧಿಸಿರುವ ಕಾರಣ ಪೊಲೀಸರು ಪ್ರವೇಶ ನಿರಾಕರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ವಾಪಸ್ ಆಗಿದ್ದಾರೆ.

ಪ್ರವೇಶ ನಿರಾಕರಣೆಯ ಆದೇಶ ಪ್ರತಿ ತೋರಿಸುವಂತೆ ಪೊಲೀಸರನ್ನು ನಾವು ಕೇಳಿದೆವು, ಆದರೆ ಅವರು ಯಾವುದನ್ನು ತೋರಿಸಲಿಲ್ಲ. ದಯವಿಟ್ಟು ಹಿಂತಿರುಗಿ ಎಂದಷ್ಟೇ ಹೇಳಿದರು. ಹಾಗಾಗಿ ನಮ್ಮ ಭೇಟಿಯನ್ನು ಮುಂದೂಡಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+