ರಸ್ತೆಯಲ್ಲೇ ಮಹಿಳಾ ಅಭ್ಯರ್ಥಿಯ ಸೀರೆ ಎಳೆದಾಡಿದ ದುರುಳರು

ಲಕ್ನೋ, ಜುಲೈ 09: ಸ್ಥಳೀಯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಮಹಿಳಾ ಅಭ್ಯರ್ಥಿಯ ಸೀರೆ ಎಳೆದು ಅವಮಾನ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬರ ಮೇಲೆ ಕೈ ಮಾಡಿ, ಬಳಿಕ ಸೀರೆ ಎಳೆದು ಅವಮಾನ ಮಾಡಿದ್ದಾರೆ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಬೆಂಬಲಿಗರೇ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಬ್ಲಾಕ್ ಪಂಚಾಯ್ತಿ ಚುನಾವಣೆಗೆ ಅಭ್ಯರ್ಥಿಯೊಬ್ಬರ ಜತೆ ಆಕೆಯೂ ಕೂಡ ನಾಮಪತ್ರ ಸಲ್ಲಿಸಲು ತೆರಳುವಾಗ ಘಟನೆ ನಡೆದಿದೆ.

Woman Manhandled, Guns Fired During Filing Of Blockhead Nominations In UP

825 ಬ್ಲಾಕ್ ಅಥವಾ ಸ್ಥಳೀಯ ಪಂಚಾಯತ್ ಮುಖಂಡರಿಗೆ ಶನಿವಾರ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಭದ್ರತಾ ವ್ಯವಸ್ಥೆ ಮಾಡಲಾಗಿದೆ ಆದರೆ 14 ಪ್ರದೇಶಗಳಿಂದ ಹಿಂಸಾಚಾರ ಪ್ರಕರಣ ವರದಿಯಾಗಿದೆ.

ಈ ವಿಡಿಯೋವನ್ನು ಅಖಿಲೇಶ್ ಯಾದವ್ ಹಂಚಿಕೊಂಡಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಗೂಂಡಾಗಳು ಮಹಿಳೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಿಂಸಾಚಾರದ ವಿಡಿಯೋವನ್ನು ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಟೀಕೆ ನಡೆಸಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಲಕ್ನೋನಿಂದ 130 ಕಿ.ಮೀ ದೂರದಲ್ಲಿರುವ ಲಿಂಖಿಪರ್ ಖೇರಿಯಲ್ಲಿ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+