ಬಂದೂಕಿನೊಂದಿಗೆ ಸೆಲ್ಫಿ ಕ್ಲಿಕ್ಕಿಸುವಾಗ ಗುಂಡು ಹಾರಿ ಮಹಿಳೆ ಸಾವು
ಲಕ್ನೋ, ಜುಲೈ 24: ಬಂದೂಕಿನೊಂದಿಗೆ ಸೆಲ್ಫಿ ಕ್ಲಿಕ್ಕಿಸುವಾಗ ಗುಂಡು ಹಾರಿ ಮಹಿಳೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ತನ್ನ ಮಾವನ ಸಿಂಗಲ್ ಬ್ಯಾರೆಲ್ ಬಂದೂಕಿನೊಂದಿಗೆ ಮಹಿಳೆ ಸೆಲ್ಫಿ ಕ್ಲಿಕ್ಕಿಸುವಾಗ ಈ ದುರಂತ ಸಂಭವಿಸಿದೆ. ತಮ್ಮ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಪೋಷಕರು ದೂರು ನೀಡಿದ್ದಾರೆ.
ಕೇವಲ ಎರಡು ತಿಂಗಳ ಹಿಂದಷ್ಟೇ ರಾಧಿಕಾ,ಆಕಾಶ್ ಗುಪ್ತಾ ಜತೆ ಮದುವೆಯಾಗಿದ್ದರು ಎಂದು ಮಹಿಳೆಯ ಮಾವ ರಾಜೇಶ್ ಗುಪ್ತಾ ಮಾಹಿತಿ ನೀಡಿದ್ದಾರೆ. ಆದರೆ ಇದರಲ್ಲಿ ಏನೋ ಸಂಚು ನಡೆದಿದೆ ಎಂದು ಆರೋಪಿಸಿರುವ ಮಹಿಳೆಯ ತಂದೆ, ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಸೆಲ್ಫಿ ತೆಗೆದುಕೊಳ್ಳುವ ಸಮಯದಲ್ಲಿ ಬಂದೂಕಿನಲ್ಲಿ ಗುಂಡು ಇರುವುದು ಮಹಿಳೆಗೆ ಗೊತ್ತಿರಲಿಲ್ಲ, ನಳಿಕೆ ಎಳೆದ ಪರಿಣಾಮ ಗುಂಡು ಹಾರಿದೆ, ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.
ಮಹಿಳೆಯ ಮನೆಯವರದ್ದು ಸಣ್ಣ ಆಭರಣ ವ್ಯವಹಾರವಿದೆ, ಚುನಾವಣೆ ಸಮಯದಲ್ಲಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದ ಬಂದೂಕನ್ನು ಆಕಾಶ್ ಗುರುವಾರ ವಾಪಸ್ ತಂದಿದ್ದ, ಬಂದೂಕಿನ ಜತೆ ಸೆಲ್ಫಿ ತೆಗೆದುಕೊಳ್ಳುತ್ತೇನೆ ಎಂದು ರಾಧಿಕಾ ಹಠ ಮಾಡಿದ್ದಳು.
ಎರಡನೇ ಮಹಡಿಯಲ್ಲಿದ್ದ ಬಂದೂಕು ಜತೆ ಸೆಲ್ಫಿ ತೆಗೆದುಕೊಳ್ಳಲು ರಾಧಿಕಾ ಮುಂದಾಗಿದ್ದಳು ಆಗ ಗುಂಡಿನ ಸಪ್ಪಳ ಕೇಳಿಸಿತು, ಎಲ್ಲರೂ ಹೋಗಿ ನೋಡಿದಾಗ ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದಳು.
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಗುಂಡೇಟಿನ ಹೊರತಾಗಿ ಬೇರೆ ಯಾವುದೇ ಹಿಂಸೆಯ ಗುರುತು ಮೈಮೇಲೆ ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications