ಇಸ್ಲಾಂ ವಿರುದ್ಧ ಬರವಣಿಗೆ: ಪತ್ರಕರ್ತನಿಗೆ ಪರಿಚಯಸ್ಥನಿಂದಲೇ ಬೆದರಿಕೆ, ಬಂಧನ
ಹೊಸದಿಲ್ಲಿ ಸೆಪ್ಟೆಂಬರ್ 21: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸಂಯೋಜಿತ ಪ್ರಕಟಣೆಯಾದ 'ಆರ್ಗನೈಸರ್ ವೀಕ್ಲಿ' ವರದಿಗಾರನಿಗೆ ಇಸ್ಲಾಂ ಧರ್ಮದ ವಿರುದ್ಧ ಬರೆದಿದ್ದಕ್ಕಾಗಿ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪ್ರಾಣಪ್ರಿಯಾ ವತ್ಸ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ವರದಿಗಾರನಿಗೆ ಪರಿಚಯಸ್ಥ ಎಂದು ತಿಳಿದು ಬಂದಿದೆ.
ಪತ್ರಕರ್ತ ನಿಶಾಂತ್ ಆಜಾದ್ ಅವರು ಸೆಪ್ಟೆಂಬರ್ 10 ರಂದು ಉತ್ತರ ಪ್ರದೇಶದ ಗಾಜಿಯಾಬಾದ್ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ತಾವು ಇಸ್ಲಾಂ ಧರ್ಮದ ವಿರುದ್ಧ ಬರೆದಿದ್ದಕ್ಕಾಗಿ ಅಮೆರಿಕ ಮೂಲದ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶಗಳು ಮತ್ತು ವಾಟ್ಸಾಪ್ ಕರೆಯನ್ನು ಸ್ವೀಕರಿಸಿದ್ದಾರೆ ಎಂದು ಆರೋಪಿಸಿದ್ದರು.

ಪತ್ರಕರ್ತ ನಿಶಾಂತ್ ಆಜಾದ್ ತಮಗೆ ಬಂದ ಬೆದರಿಕೆ ಸಂದೇಶಗಳ ಸ್ಕ್ರೀನ್ ಶಾಟ್ ಅನ್ನೂ ಹಂಚಿಕೊಂಡಿದ್ದಾರೆ. ಇಸ್ಲಾಂ ವಿರುದ್ಧ ಅಜೆಂಡಾವನ್ನು ಪ್ರಚಾರ ಮಾಡುವುದನ್ನು ನಿಲ್ಲಿಸಿ. ಇಲ್ಲವಾದರೆ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಸಂದೇಶಗಳು ಪತ್ರಕರ್ತ ನಿಶಾಂತ್ ಆಜಾದ್ ಅವರಿಗೆ ಬಂದಿವೆ.
Tweet by Right wing Influencer @ARanganathan72 pic.twitter.com/xavub5Q4tw
— Mohammed Zubair (@zoo_bear) September 20, 2022
ಗಾಜಿಯಾಬಾದ್ ಪೊಲೀಸರು ಮಂಗಳವಾರ (ಸೆಪ್ಟೆಂಬರ್ 20) ಟ್ವಿಟರ್ಗೆ ಅಪ್ಲೋಡ್ ಮಾಡಿದ ಹೇಳಿಕೆಯಲ್ಲಿ, ಪ್ರಕರಣದ ಆರೋಪಿ ಪ್ರಾಣಪ್ರಿಯಾ ವತ್ಸ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. "ಪತ್ರಕರ್ತ ನಿಶಾಂತ್ ಆಜಾದ್, ಸೆಪ್ಟೆಂಬರ್ 13 ರಂದು ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ, ವಾಟ್ಸಾಪ್ನಲ್ಲಿ ಬಂದ ಕರೆ ಮೂಲಕ ಬೆದರಿಕೆ ಹಾಕಲಾಗಿದೆ" ಎಂದು ದೂರಿದ್ದಾರೆ. "ಇಂದಿರಾಪುರಂ ಠಾಣೆಯ ಸೈಬರ್ ಸೆಲ್ ಮೂಲಕ ಡೇಟಾವನ್ನು ವಿಶ್ಲೇಷಿಸಿದಾಗ, ಕರೆ ಹಿಂದೆ ಪ್ರಾಣಪ್ರಿಯಾ ವತ್ಸ್ ಇದ್ದಾರೆ ಮತ್ತು (ಆಜಾದ್) ಅವರನ್ನು ಹೆದರಿಸಲು ಮತ್ತು ತೊಂದರೆ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಅವರನ್ನು (ಪ್ರಾಣಪ್ರಿಯಾ ವತ್ಸ್) ಬಂಧಿಸಲಾಗಿದೆ. ವತ್ಸ್ ಆಜಾದ್ ಗೆ ಗೊತ್ತಿರುವ ವ್ಯಕ್ತಿ ಎಂದು ಹೇಳಲಾಗುತ್ತಿದೆ.
#Ghaziabad @RSSorg के पत्रिका पांचजन्य के पत्रकार @azad_nishant को सर तन से एजुद करने की धमकी देने का मामले में निशांत के परिचित प्राणप्रिय वत्स को गिरफ्तार किया गया है, जिसने निशांत को परेशान करने और डराने के लिए धमकी दी थी। @ghaziabadpolice ने की गिरफ्तारी। @Uppolice @bstvlive pic.twitter.com/2SPAwuaXtM
— Lokesh Rai 🇮🇳लोकेश राय (@lokeshRlive) September 20, 2022
ಗಾಜಿಯಾಬಾದ್ ಮೂಲದ ವೈದ್ಯರೊಬ್ಬರು ಹಿಂದೂ ಸಂಘಟನೆಗಳನ್ನು ಬೆಂಬಲಿಸುವ ಉದ್ದೇಶದಿಂದ ಬೆದರಿಕೆ ಸಂದೇಶಗಳನ್ನು ಸ್ವೀಕರಿಸಿದ್ದರು. ಅದೇ ಸಮಯದಲ್ಲಿ ಆಜಾದ್ ಅವರ ಆರೋಪಗಳು ಹೊರಹೊಮ್ಮಿದವು ಎಂಬುದನ್ನು ಸಹ ಗಮನಿಸಬೇಕು.
ಆ ಸಂದರ್ಭದಲ್ಲಿ "ಯುಎಸ್ ಮೂಲದ" ಫೋನ್ ಸಂಖ್ಯೆಯಿಂದ ಬೆದರಿಕೆ ಸಂದೇಶಗಳು ಆಜಾದ್ ಅವರಿಗೆ ಬಂದಿವೆ. ಬೆದರಿಕೆಗಳನ್ನು ವಾಟ್ಸಾಪ್ನಲ್ಲಿ ಮಾಡಲಾಗಿದೆ ಮತ್ತು ಸಂದೇಶಗಳ ಹಿಂದೆ ಇರುವ ಉದ್ದೇಶಿತ ವ್ಯಕ್ತಿ ವೈದ್ಯ ಅರವಿಂದ್ ವತ್ಸ್ ಅಕೇಲಾ ಎಂದು ತಿಳಿದು ಬಂದಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications