ಇಸ್ಲಾಂ ವಿರುದ್ಧ ಬರವಣಿಗೆ: ಪತ್ರಕರ್ತನಿಗೆ ಪರಿಚಯಸ್ಥನಿಂದಲೇ ಬೆದರಿಕೆ, ಬಂಧನ
ಹೊಸದಿಲ್ಲಿ ಸೆಪ್ಟೆಂಬರ್ 21: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸಂಯೋಜಿತ ಪ್ರಕಟಣೆಯಾದ 'ಆರ್ಗನೈಸರ್ ವೀಕ್ಲಿ' ವರದಿಗಾರನಿಗೆ ಇಸ್ಲಾಂ ಧರ್ಮದ ವಿರುದ್ಧ ಬರೆದಿದ್ದಕ್ಕಾಗಿ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪ್ರಾಣಪ್ರಿಯಾ ವತ್ಸ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ವರದಿಗಾರನಿಗೆ ಪರಿಚಯಸ್ಥ ಎಂದು ತಿಳಿದು ಬಂದಿದೆ.
ಪತ್ರಕರ್ತ ನಿಶಾಂತ್ ಆಜಾದ್ ಅವರು ಸೆಪ್ಟೆಂಬರ್ 10 ರಂದು ಉತ್ತರ ಪ್ರದೇಶದ ಗಾಜಿಯಾಬಾದ್ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ತಾವು ಇಸ್ಲಾಂ ಧರ್ಮದ ವಿರುದ್ಧ ಬರೆದಿದ್ದಕ್ಕಾಗಿ ಅಮೆರಿಕ ಮೂಲದ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶಗಳು ಮತ್ತು ವಾಟ್ಸಾಪ್ ಕರೆಯನ್ನು ಸ್ವೀಕರಿಸಿದ್ದಾರೆ ಎಂದು ಆರೋಪಿಸಿದ್ದರು.

ಪತ್ರಕರ್ತ ನಿಶಾಂತ್ ಆಜಾದ್ ತಮಗೆ ಬಂದ ಬೆದರಿಕೆ ಸಂದೇಶಗಳ ಸ್ಕ್ರೀನ್ ಶಾಟ್ ಅನ್ನೂ ಹಂಚಿಕೊಂಡಿದ್ದಾರೆ. ಇಸ್ಲಾಂ ವಿರುದ್ಧ ಅಜೆಂಡಾವನ್ನು ಪ್ರಚಾರ ಮಾಡುವುದನ್ನು ನಿಲ್ಲಿಸಿ. ಇಲ್ಲವಾದರೆ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಸಂದೇಶಗಳು ಪತ್ರಕರ್ತ ನಿಶಾಂತ್ ಆಜಾದ್ ಅವರಿಗೆ ಬಂದಿವೆ.
Tweet by Right wing Influencer @ARanganathan72 pic.twitter.com/xavub5Q4tw
— Mohammed Zubair (@zoo_bear) September 20, 2022
ಗಾಜಿಯಾಬಾದ್ ಪೊಲೀಸರು ಮಂಗಳವಾರ (ಸೆಪ್ಟೆಂಬರ್ 20) ಟ್ವಿಟರ್ಗೆ ಅಪ್ಲೋಡ್ ಮಾಡಿದ ಹೇಳಿಕೆಯಲ್ಲಿ, ಪ್ರಕರಣದ ಆರೋಪಿ ಪ್ರಾಣಪ್ರಿಯಾ ವತ್ಸ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. "ಪತ್ರಕರ್ತ ನಿಶಾಂತ್ ಆಜಾದ್, ಸೆಪ್ಟೆಂಬರ್ 13 ರಂದು ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ, ವಾಟ್ಸಾಪ್ನಲ್ಲಿ ಬಂದ ಕರೆ ಮೂಲಕ ಬೆದರಿಕೆ ಹಾಕಲಾಗಿದೆ" ಎಂದು ದೂರಿದ್ದಾರೆ. "ಇಂದಿರಾಪುರಂ ಠಾಣೆಯ ಸೈಬರ್ ಸೆಲ್ ಮೂಲಕ ಡೇಟಾವನ್ನು ವಿಶ್ಲೇಷಿಸಿದಾಗ, ಕರೆ ಹಿಂದೆ ಪ್ರಾಣಪ್ರಿಯಾ ವತ್ಸ್ ಇದ್ದಾರೆ ಮತ್ತು (ಆಜಾದ್) ಅವರನ್ನು ಹೆದರಿಸಲು ಮತ್ತು ತೊಂದರೆ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಅವರನ್ನು (ಪ್ರಾಣಪ್ರಿಯಾ ವತ್ಸ್) ಬಂಧಿಸಲಾಗಿದೆ. ವತ್ಸ್ ಆಜಾದ್ ಗೆ ಗೊತ್ತಿರುವ ವ್ಯಕ್ತಿ ಎಂದು ಹೇಳಲಾಗುತ್ತಿದೆ.
#Ghaziabad @RSSorg के पत्रिका पांचजन्य के पत्रकार @azad_nishant को सर तन से एजुद करने की धमकी देने का मामले में निशांत के परिचित प्राणप्रिय वत्स को गिरफ्तार किया गया है, जिसने निशांत को परेशान करने और डराने के लिए धमकी दी थी। @ghaziabadpolice ने की गिरफ्तारी। @Uppolice @bstvlive pic.twitter.com/2SPAwuaXtM
— Lokesh Rai 🇮🇳लोकेश राय (@lokeshRlive) September 20, 2022
ಗಾಜಿಯಾಬಾದ್ ಮೂಲದ ವೈದ್ಯರೊಬ್ಬರು ಹಿಂದೂ ಸಂಘಟನೆಗಳನ್ನು ಬೆಂಬಲಿಸುವ ಉದ್ದೇಶದಿಂದ ಬೆದರಿಕೆ ಸಂದೇಶಗಳನ್ನು ಸ್ವೀಕರಿಸಿದ್ದರು. ಅದೇ ಸಮಯದಲ್ಲಿ ಆಜಾದ್ ಅವರ ಆರೋಪಗಳು ಹೊರಹೊಮ್ಮಿದವು ಎಂಬುದನ್ನು ಸಹ ಗಮನಿಸಬೇಕು.
ಆ ಸಂದರ್ಭದಲ್ಲಿ "ಯುಎಸ್ ಮೂಲದ" ಫೋನ್ ಸಂಖ್ಯೆಯಿಂದ ಬೆದರಿಕೆ ಸಂದೇಶಗಳು ಆಜಾದ್ ಅವರಿಗೆ ಬಂದಿವೆ. ಬೆದರಿಕೆಗಳನ್ನು ವಾಟ್ಸಾಪ್ನಲ್ಲಿ ಮಾಡಲಾಗಿದೆ ಮತ್ತು ಸಂದೇಶಗಳ ಹಿಂದೆ ಇರುವ ಉದ್ದೇಶಿತ ವ್ಯಕ್ತಿ ವೈದ್ಯ ಅರವಿಂದ್ ವತ್ಸ್ ಅಕೇಲಾ ಎಂದು ತಿಳಿದು ಬಂದಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications