ಯಮುನಾ ಎಕ್ಸ್ಪ್ರೆಸ್ ವೇಗೆ ಮಾಜಿ ಪ್ರಧಾನಿ ಹೆಸರಿಡಲು ಮುಂದಾದ ಆದಿತ್ಯನಾಥ್ ಸರ್ಕಾರ!?
ಲಕ್ನೋ, ನವೆಂಬರ್ 23: ಉತ್ತರಪ್ರದೇಶ ಸರ್ಕಾರವು ಕಳೆದ ಐದು ವರ್ಷಗಳಲ್ಲಿ ನಗರ, ಪ್ರದೇಶಗಳಿಗೆ ಮರುನಾಮಕರಣ ಮಾಡಿದೆ. ನದಿಗಳ, ಜಿಲ್ಲೆಗಳ ಹೆಸರನ್ನು ಬದಲು ಮಾಡಿದೆ. ಅದೇ ರೀತಿ ಇದೀಗ ಯಮುನಾ ಎಕ್ಸ್ಪ್ರೆಸ್ ವೇ ಸರದಿ.
ಯಮುನಾ ಎಕ್ಸ್ಪ್ರೆಸ್ ವೇ ಮರುನಾಮಕರಣವಾಗುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ತಿಳಿಸಿವೆ. ಯಮುನಾ ಎಕ್ಸ್ಪ್ರೆಸ್ ವೇಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರನ್ನು ನಾಮಕರಣ ಮಾಡಲು ಉತ್ತರಪ್ರದೇಶ ಸರ್ಕಾರ ಮುಂದಾಗಿದೆ.
ಇದೇ ನವೆಂಬರ್ 25ರಂದು ಗೌತಮ ಬುದ್ಧ ನಗರದ ಜೇವಾರ್ನಲ್ಲಿ ನಡೆಯಲಿರುವ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಡಿಗಲ್ಲು ಸ್ಥಾಪನೆ ಕಾರ್ಯಕ್ರಮದಲ್ಲಿ ಈ ಘೋಷಣೆಯಾಗಲಿದೆ ಅಂತಾ ತಿಳಿದುಬಂದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಉತ್ತರಪ್ರದೇಶದ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಸ್ಥಾಪನೆ ಮಾಡುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಸೇರಿ ಹಲವು ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಯಮುನಾ ಎಕ್ಸ್ಪ್ರೆಸ್ ವೇ ಹೆಸರನ್ನು ಅಟಲ್ ಬಿಹಾರಿ ವಾಜಪೇಯಿ ಎಕ್ಸ್ಪ್ರೆಸ್ ವೇ ಎಂದು ಬದಲಿಸಿ, ಅಧಿಕೃತವಾಗಿ ಘೋಷಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಈ ಬಗ್ಗೆ ಹೆಸರು ಹೇಳಲು ಇಚ್ಛಿಸದ ಬಿಜೆಪಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದ್ದು, ಭಾರತದಲ್ಲಿ ಅತ್ಯಂತ ಪ್ರೀತಿಸಲ್ಪಟ್ಟ ರಾಜಕಾರಣಿ ಅಟಲ್ ಬಿಹಾರಿ ವಾಜಪೇಯಿ. ಅವರನ್ನು ಪಕ್ಷಾತೀತವಾಗಿ ಎಲ್ಲರೂ ಗೌರವಿಸುತ್ತಾರೆ, ಆದರಿಸುತ್ತಾರೆ. ಮುಂದಿನ ಪೀಳಿಗೆಗೆ ವಾಜಪೇಯಿಯ ಸಾಧನೆ, ಮೌಲ್ಯಗಳನ್ನು ಅರ್ಥ ಮಾಡಿಸುವ ಸದುದ್ದೇಶದಿಂದ ಯಮುನಾ ಎಕ್ಸ್ಪ್ರೆಸ್ ವೇಗೆ ಅವರ ಹೆಸರು ಇಡಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶ ಸಾರ್ವತ್ರಿಕ ವಿಧಾನಸಭೆ ಚುನಾವಣೆ
ಉತ್ತರಪ್ರದೇಶದಲ್ಲಿ 2022ರಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಬಿಜೆಪಿಗೆ ಮತ್ತೆ ಅಧಿಕಾರ ಹಿಡಿಯುವ ಸವಾಲು ಎದುರಾಗಿದೆ. ಅದರಲ್ಲೂ ಬಿಜೆಪಿ ಸೇರಿ ಬಹುತೇಕ ಪ್ರತಿಪಕ್ಷಗಳು ಬ್ರಾಹ್ಮಣ ಮತಬ್ಯಾಂಕ್ ಬಹುಮುಖ್ಯವೆಂದು ಪರಿಗಣಿಸಿವೆ.
ಇದೀಗ ಅಟಲ್ ಬಿಹಾರಿ ವಾಜಪೇಯಿ ಹೆಸರನ್ನು ಯಮುನಾ ಎಕ್ಸ್ಪ್ರೆಸ್ ವೇಗೆ ಇಟ್ಟರೆ ಅವರನ್ನು ಪ್ರೀತಿಸುವ ಅಭಿಮಾನಿಗಳು, ಅದರಲ್ಲೂ ಮುಖ್ಯವಾಗಿ ಬ್ರಾಹ್ಮಣ ಸಮುದಾಯದವರು ತುಂಬ ಖುಷಿಯಾಗುತ್ತಾರೆ ಎಂಬ ಲೆಕ್ಕಾಚಾರವೂ ಇರಬಹುದು. ಇನ್ನೊಂದು ಬದಿ ಯೋಚಿಸುವುದಾರೆ, ಬಿಜೆಪಿಯಲ್ಲಿ ವಾಜಪೇಯಿ ಅವರಿಗೆ ಅಪಾರ ಗೌರವ ಇದೆ. ಅವರ ಹೆಸರನ್ನು ಈಗಾಗಲೇ ಅನೇಕ ಯೋಜನೆಗಳಿಗೆ ಇಟ್ಟಿದೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications