ಅಯೋಧ್ಯಾದಲ್ಲಿ ಶ್ರೀರಾಮ ಪ್ರತಿಮೆ ಸ್ಥಾಪನೆಗೆ ಮುಂದಾದ ಯೋಗಿ
ಲಕ್ನೋ, ನವೆಂಬರ್ 04: ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಶ್ರೀರಾಮಚಂದ್ರನ ಪ್ರತಿಮೆ ಸ್ಥಾಪಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ.
ಸುಮಾರು 151 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿದ್ದಾರೆ.
ಆದಿತ್ಯನಾತ್ ಹೇಳಿಕೆಯನ್ನು ಸ್ವಾಗತಿಸಿರುವ ಎಸ್ಪಿ ಮುಖಂಡ ಅಜಂ ಖಾನ್, " ಉದ್ದೇಶಿತ ರಾಮನ ಪ್ರತಿಮೆಯು ಸರ್ದಾರ್ ಪಟೇಲ್ ಪ್ರತಿಮೆಗಿಂತಲೂ ಎತ್ತರವಿರಬೇಕು" ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

"ಗುಜರಾತ್ನಲ್ಲಿ ಪಟೇಲ್ ಪ್ರತಿಮೆ ನಿರ್ಮಿಸುವುದಕ್ಕೂ ಮೊದಲೇ ರಾಮನ ಪ್ರತಿಮೆ ನಿರ್ಮಾಣ ಮಾಡಲು ಅವರೇಕೆ ಮನಸ್ಸು ಮಾಡಲಿಲ್ಲ," ಎಂದೂ ಅವರು ಇದೇ ವೇಳೆ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
'ಈ ಬಾರಿ ದೀಪವಾಳಿಗೆ ರಾಮನಿಗಾಗಿ ದೀಪ ಬೆಳಗುತ್ತೇವೆ. ಕೆಲಸ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ. ದೀಪಾವಳಿ ನಂತರ ಈ ಕಾರ್ಯ ಆರಂಭವಾಗಲಿದೆ," ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
Light a diya for Lord Ram this time, work there will start very soon. We have to take this up after #Diwali: CM Yogi Adityanath in Rajasthan's Bikaner (3.11.18) pic.twitter.com/IL8cuosBaW
— ANI UP (@ANINewsUP) November 4, 2018
ಸಂತ ತುಳಸೀದಾಸ್ ಘಾಟ್ ಬಳಿ ಸುಮಾರು 330 ಕೋಟಿ ರು ವೆಚ್ಚದಲ್ಲಿ 151 ಮೀಟರ್ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ, ದೀಪಾವಳಿ ಸಂದರ್ಭದಲ್ಲಿ ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಅಯೋಧ್ಯ ನಗರದ ಮೇಯರ್ ಋಷಿಕೇಶ್ ಉಪಾಧ್ಯಾಯ್ ಅವರು ಹೇಳಿದ್ದಾರೆ.












Click it and Unblock the Notifications