ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯಾದಲ್ಲಿ ಶ್ರೀರಾಮ ಪ್ರತಿಮೆ ಸ್ಥಾಪನೆಗೆ ಮುಂದಾದ ಯೋಗಿ

|
Google Oneindia Kannada News

ಲಕ್ನೋ, ನವೆಂಬರ್ 04: ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಶ್ರೀರಾಮಚಂದ್ರನ ಪ್ರತಿಮೆ ಸ್ಥಾಪಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ.

ದೀಪಾವಳಿ ವಿಶೇಷ ಪುರವಣಿ

ಸುಮಾರು 151 ಮೀಟರ್​ ಎತ್ತರದ ಪ್ರತಿಮೆ ನಿರ್ಮಾಣ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸಲಿದ್ದಾರೆ ಯೋಗಿ ಆದಿತ್ಯನಾಥ್‌ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸಲಿದ್ದಾರೆ ಯೋಗಿ ಆದಿತ್ಯನಾಥ್‌

ಆದಿತ್ಯನಾತ್ ಹೇಳಿಕೆಯನ್ನು ಸ್ವಾಗತಿಸಿರುವ ಎಸ್​ಪಿ ಮುಖಂಡ ಅಜಂ ಖಾನ್​, " ಉದ್ದೇಶಿತ ರಾಮನ ಪ್ರತಿಮೆಯು ಸರ್ದಾರ್ ಪಟೇಲ್​ ಪ್ರತಿಮೆಗಿಂತಲೂ ಎತ್ತರವಿರಬೇಕು" ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

Yogi Adityanath govt plans to build 100-metre statue of Lord Ram on banks of Saryu River

"ಗುಜರಾತ್​ನಲ್ಲಿ ಪಟೇಲ್​ ಪ್ರತಿಮೆ ನಿರ್ಮಿಸುವುದಕ್ಕೂ ಮೊದಲೇ ರಾಮನ ಪ್ರತಿಮೆ ನಿರ್ಮಾಣ ಮಾಡಲು ಅವರೇಕೆ ಮನಸ್ಸು ಮಾಡಲಿಲ್ಲ," ಎಂದೂ ಅವರು ಇದೇ ವೇಳೆ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಯೋಗಿ ಆದಿತ್ಯನಾಥ ಯಾರ್ಯಾರ ಹೆಸರು ಬದಲಾಯಿಸಿದ್ದಾರೆ ಗೊತ್ತಾ?ಯೋಗಿ ಆದಿತ್ಯನಾಥ ಯಾರ್ಯಾರ ಹೆಸರು ಬದಲಾಯಿಸಿದ್ದಾರೆ ಗೊತ್ತಾ?

'ಈ ಬಾರಿ ದೀಪವಾಳಿಗೆ ರಾಮನಿಗಾಗಿ ದೀಪ ಬೆಳಗುತ್ತೇವೆ. ಕೆಲಸ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ. ದೀಪಾವಳಿ ನಂತರ ಈ ಕಾರ್ಯ ಆರಂಭವಾಗಲಿದೆ," ಎಂದು ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.

ಸಂತ ತುಳಸೀದಾಸ್ ಘಾಟ್ ಬಳಿ ಸುಮಾರು 330 ಕೋಟಿ ರು ವೆಚ್ಚದಲ್ಲಿ 151 ಮೀಟರ್ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ, ದೀಪಾವಳಿ ಸಂದರ್ಭದಲ್ಲಿ ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಅಯೋಧ್ಯ ನಗರದ ಮೇಯರ್ ಋಷಿಕೇಶ್ ಉಪಾಧ್ಯಾಯ್ ಅವರು ಹೇಳಿದ್ದಾರೆ.

English summary
Amid the growing uproar to bring a law for early construction of a Lord Ram Mandir at the disputed site in Ayodhya, the BJP government in Uttar Pradesh is likely to make an announcement to build a grand statue of Lord Ram in the temple town of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X