ಅಯೋಧ್ಯೆಯಲ್ಲಿ ಹನುಮನಿಗೆ ಯೋಗಿ ವಿಶೇಷ ಪೂಜೆ
ಲಕ್ನೋ, ಆಗಸ್ಟ್ 03: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬುಧವಾರ ಶಂಕು ಸ್ಥಾಪನೆ ಮಾಡಲಾಗುತ್ತದೆ. ಕಾರ್ಯಕ್ರಮದ ಕೊನೆಯ ಹಂತದ ಸಿದ್ಧತೆಗಳನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರಿಶೀಲನೆ ನಡೆಸಿದರು.
Recommended Video
ಸೋಮವಾರ ಮಧ್ಯಾಹ್ನ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಆಗಮಿಸಿದರು. ಮೊದಲು ಅವರು ಹನುಮಾನ್ ಗಡಿ ದೇವಾಲಯಕ್ಕೆ ಭೇಟಿ ನೀಡಿದರು. ಅಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಶಂಕು ಸ್ಥಾಪನೆ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದರು.
ಅಯೋಧ್ಯೆ ಹನುಮಾನ್ ಮಂದಿರದಲ್ಲಿ ಮೋದಿ ವಿಶೇಷ ಪೂಜೆ
ಅಯೋಧ್ಯೆಯಲ್ಲಿರುವ ಹನುಮಾನ್ ಗಡಿ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಬುಧವಾರ ಭೇಟಿ ನೀಡಲಿದ್ದಾರೆ. ಈಗಾಗಲೇ ದೇವಾಲಯವನ್ನು ಸ್ಯಾನಿಟೈಸ್ ಮಾಡಲಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮೋದಿ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.
ರಾಮ ಮಂದಿರ ಭೂಮಿ ಪೂಜೆಗೆ ಕರ್ನಾಟಕದ 8 ಗಣ್ಯರಿಗೆ ಆಹ್ವಾನ
ಬಿಗಿ ಪೊಲೀಸ್ ಬಂದೋಬಸ್ತ್ : ಆಗಸ್ಟ್ 5ರ ಬುಧವಾರ ರಾಮ ಮಂದಿರ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯುವ ಹಿನ್ನಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಯೋಧ್ಯಾ ರಾಮ ಮಂದಿರ ಮೇಲೆ ಪಾಕ್ ಐಎಸ್ಐ ಕಣ್ಣು!
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಅಯೋಧ್ಯೆಗೆ ಭೇಟಿ ನೀಡಬೇಕಿತ್ತು. ಆದರೆ, ಸಂಪುಟದ ಸಹೋದ್ಯೋಗಿ ಕಮಲ್ ರಾಣಿ ವರುಣ್ ಕೋವಿಡ್ನಿಂದ ಮೃತಪಟ್ಟ ಕಾರಣಕ್ಕಾಗಿ ಪ್ರವಾಸವನ್ನು ರದ್ದು ಮಾಡಿದ್ದರು.
We've made all arrangements to ensure that there is no laxity on any count. Main focus is on #COVID19. The protocol has to be enforced very strictly. Only those who are invited should come here. All devotees want to come but PM will represent all of them: UP CM Yogi Adityanath pic.twitter.com/1cjsObGLzi
— ANI UP (@ANINewsUP) August 3, 2020