ಎರಡೇ ಶಬ್ದದಲ್ಲಿ ಡಿಸಿಗೆ ಕೊನೆಯ ಎಚ್ಚರಿಕೆ ಕೊಟ್ಟ ಯೋಗಿ ಆದಿತ್ಯನಾಥ್
ಲಕ್ನೋ, ಮಾರ್ಚ್ 31: ಕೊರೊನಾ ನಿಯಂತ್ರಿಸುವ ವಿಚಾರದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಾಳ್ಮೆ ಕಳೆದುಕೊಂಡಿದ್ದಾರೆ.
ನೋಯ್ಡಾ ಜಿಲ್ಲಾಡಳಿತದ (ಗೌತಂ ಬುದ್ದ ನಗರ) ವಿರುದ್ದ ಸಿಕ್ಕಾಪಟ್ಟೆ ಗರಂ ಆಗಿರುವ ಯೋಗಿ, 'ಸುಧರ್ ಜಾವೋ' ಎನ್ನುವ ಕೊನೆಯ ವಾರ್ನಿಂಗ್ ಅನ್ನು ಜಿಲ್ಲಾಧಿಕಾರಿಗೆ ನೀಡಿದ್ದಾರೆ. ಖಾಸಗಿ ಸಂಸ್ಥೆಯ ಮೇಲೆ ಕ್ರಮ ತೆಗೆದುಕೊಳ್ಳದೇ ಇರುವುದು ಯೋಗಿ ಸಿಟ್ಟಿಗೆ ಕಾರಣ.
ಕೋವಿಡ್ 19 ಪರಿಶೀಲನಾ ಸಭೆಯಲ್ಲಿ ಜಿಲ್ಲಾಡಳಿತದ ಕ್ರಮವನ್ನು ಸಮರ್ಥಿಸಲು ಮುಂದಾದ ಮ್ಯಾಜಿಸ್ಟ್ರೇಟ್ ಬಿ.ಎನ್.ಸಿಂಗ್ ಅವರನ್ನು ಶಟ್ ಅಪ್ ಎಂದು ಯೋಗಿ ಆದಿತ್ಯನಾಥ್ ಸುಮ್ಮನಾಗಿಸಿದ್ದಾರೆ.

ನೋಯ್ಡಾದ ಖಾಸಗಿ ಭದ್ರತಾ ಸಂಸ್ಥೆಯಲ್ಲಿನ 25 ಉದ್ಯೋಗಿಗಳಿಗೆ ಕೋವಿಡ್ 19 ಸೋಂಕು ಕಾಣಿಸಿತ್ತು. ಆದರೆ, ಸಂಸ್ಥೆಯ ವಿರುದ್ದ ಯಾವುದೇ ವಿಚಾರಣೆ ಅಥವಾ ಮಾಹಿತಿಯನ್ನು ಜಿಲ್ಲಾಡಳಿತ ಪಡೆದುಕೊಂಡಿರಲಿಲ್ಲ.
"ಜಿಲ್ಲಾಡಳಿತದ ಮೂಗಿನ ನೇರಕ್ಕೆ ಇಂತಹ ಘಟನೆ ನಡೆದರೂ ಯಾಕೆ ಸುಮ್ಮನಾಗಿದ್ದೀರಾ? ಆ ಸಂಸ್ಥೆ ಪ್ರಮುಖವಾದ ಮಾಹಿತಿಯನ್ನು ಮುಚ್ಚಿಟ್ಟಿದ್ದು ಯಾಕೆ? ಈ ಕೂಡಲೇ ಆ ಸಂಸ್ಥೆಯ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಲಬೇಕು. ಬರೀ FIR ಹಾಕಿ ಸುಮ್ಮನಾಗುವುದಲ್ಲ" ಎನ್ನುವ ಎಚ್ಚರಿಕೆಯನ್ನು ಯೋಗಿ ಆದಿತ್ಯನಾಥ್ ನೀಡಿ, ಬಿ.ಎನ್.ಸಿಂಗ್ ಅವರನ್ನು ಎತ್ತಂಗಡಿ ಮಾಡಿದ್ದಾರೆ.
ಇವರ ಜಾಗಕ್ಕೆ ಐಎಎಸ್ ಅಧಿಕಾರಿ ಎಲ್.ವೈ.ಸುಹಾಸ್ ಅವರನ್ನು ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ರಿಪೋರ್ಟ್ ಮಾಡಿಕೊಳ್ಳಲು ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಸುಹಾಸ್, ಪ್ರಯಾಗರಾಜ್ ನಲ್ಲಿ ಯಶಸ್ವಿಯಾಗಿ ಮುಗಿದಿದ್ದ ಕುಂಭಮೇಳದ ವೇಳೆ ಅಲ್ಲಿನ ಜಿಲ್ಲಾಧಿಕಾರಿಯಾಗಿದ್ದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications