ಬುದ್ಧನ ಪ್ರತಿಮೆ ನಾಶಪಡಿಸಿದ್ದಕ್ಕೆ ತಾಲಿಬಾನಿಗಳಿಗೆ ಈ ಶಿಕ್ಷೆ
ಲಕ್ನೋ, ನವೆಂಬರ್ 15: ಬುದ್ಧನ ಪ್ರತಿಮೆ ನಾಶಪಡಿಸಿದ್ದಕ್ಕೆ ತಾಲಿಬಾನಿಗಳಿಗೆ ಈ ಶಿಕ್ಷೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
20 ವರ್ಷಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಗೌತಮ ಬುದ್ಧನ ಪ್ರತಿಮೆಯನ್ನು ಧ್ವಂಸಮಾಡಿದ್ದಕ್ಕಾಗಿ ತಾಲಿಬಾನಿಗಳ ಮೇಲೆ ಅಮೆರಿಕಾ ಬಾಂಬ್ ದಾಳಿ ನಡೆಸಿದೆ. ಇದು ಅವರಿಗೆ ದೇವರು ನೀಡಿರುವ ಶಿಕ್ಷೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಾಲಿಬಾನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭಗವಾನ್ ಬುದ್ಧ ಯಾವಾಗಲೂ ಅಹಿಂಸೆ, ಸಂದೇಶ ಶಾಂತಿ, ಸಹೋದರತ್ವವನ್ನು ಪ್ರತಿಪಾದಿಸುತ್ತಿದ್ದ. ಅಂತ ವ್ಯಕ್ತಿಯ ಪ್ರತಿಮೆಯನ್ನು ನಾಶಪಡಿಸಿರುವುದಕ್ಕೆ ದೇವರು ಈ ರೀತಿ ಶಿಕ್ಷೆ ನೀಡಿದ್ದಾನೆ ಎಂದು ಮುಖ್ಯಮಂತ್ರಿ ಹೇಳಿದರು.
ತಾಲಿಬಾನಿಗಳ ಅನಾಗರಿಕತೆಯನ್ನು ಜಗತ್ತು ನೋಡಿದೆ. ಬುದ್ಧ ಎಂದಿಗೂ ಯುದ್ಧ ಮಾಡಲು ಹೇಳಿಲ್ಲ. ಆತ ಯಾವಾಗಲೂ ಮಾನವೀಯತೆಗೆ ಸ್ಫೂರ್ತಿಯ ಮೂಲ ಮತ್ತು ಭಕ್ತಿಯ ಕೇಂದ್ರವಾಗಿರುತ್ತಾನೆ. ಯಾರೂ ಕೂಡ ಇಂತ ವ್ಯಕ್ತಿಯ ಪ್ರತಿಮೆಯನ್ನು ನಾಶಪಡಿಸಿದ ದೃಶ್ಯವನ್ನು ಮರೆಯಬಾರದು ಎಂದರು.
ಲಕ್ನೋದಲ್ಲಿ ನಡೆದ ಸಾಮಾಜಿಕ ಪ್ರತಿನಿಧಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್, 20 ವರ್ಷಗಳ ಹಿಂದೆ ಅಫ್ಘಾನಿಸ್ತಾನದ ಬಾಮಿಯಾನ್ ನಲ್ಲಿ ತಾಲಿಬಾನಿಗಳು 2,500 ವರ್ಷಗಳಷ್ಟು ಹಳೆಯ ಗೌತಮ ಬುದ್ಧನ ಪ್ರತಿಮೆಯನ್ನು ಧ್ವಂಸಗೊಳಿಸಿದ್ದರು.

ಭಾರತ ಸೇರಿ ಯಾವುದೇ ಯಾವುದೇ ದೇಶಗಳ ಜತೆ ತಾಲಿಬಾನ್ ಸಂಘರ್ಷವನ್ನು ಬಯಸುವುದಿಲ್ಲ ಎಂದು ತಾಲಿಬಾನ್ ನೇತೃತ್ವದ ಹಂಗಾಮಿ ಸರ್ಕಾರದ ಹಾಲಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ ಹೇಳಿದ್ದಾರೆ.
ಬಿಬಿಸಿ ಉರ್ದು ಜೊತೆ ಮಾತನಾಡುವಾಗ ಮುತ್ತಖಿ ಈ ರೀತಿಯ ಹೇಳಿಕೆ ನೀಡಿದ್ದಾನೆ. ಇರಾನ್, ಖಝಾಕಿಸ್ತಾನ್, ಕಿರ್ಗಿಜ್ ರಿಪಬ್ಲಿಕ್, ರಷ್ಯಾ, ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ನ ಅಧಿಕಾರಿಗಳು ಭಾಗವಹಿಸಿದ್ದ ನವದೆಹಲಿಯಲ್ಲಿ ಅಫ್ಘಾನಿಸ್ತಾನದ ಕುರಿತು ಎಂಟು ರಾಷ್ಟ್ರಗಳ ಸಂವಾದದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅಧ್ಯಕ್ಷತೆ ವಹಿಸಿದ ಕೆಲವು ದಿನಗಳ ನಂತರ ಅವರ ಸಂದರ್ಶನ ಆಗಿದೆ.
ಅಫ್ಘಾನಿಸ್ತಾನ ಕುರಿತಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನೇತೃತ್ವದಲ್ಲಿ ಇರಾನ್, ಕಝಾಕಿಸ್ತಾನ್, ಕಿರ್ಗಿಜ್ ರಿಪಬ್ಲಿಕ್, ರಷ್ಯಾ, ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ನ ಅಧಿಕಾರಿಗಳ ಮಾತುಕತೆ ನಡೆದ ನಂತರ ಅಮೀರ್ ಖಾನ್ ಮುತ್ತಖಿ ಸಂದರ್ಶನ ನಡೆಸಲಾಗಿದೆ.
ಮಹಿಳಾ ಶಿಕ್ಷಣ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುತ್ತಕಿ, ಅಫ್ಘಾನ್ ಮಹಿಳೆಯರನ್ನು ವಿವಿಧ ಕ್ಷೇತ್ರಗಳಿಂದ ಹೊರಗಿಡಲಾಗುತ್ತಿದೆ ಎಂಬುದನ್ನು ನಿರಾಕರಿಸಿದರು. ಮಹಿಳೆಯರು ಆರೋಗ್ಯ ಕ್ಷೇತ್ರದಲ್ಲಿ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದಾರೆ. ಅವರು ಶಿಕ್ಷಣ ಕ್ಷೇತ್ರದಲ್ಲೂ ಬೋಧನೆ ಮಾಡುತ್ತಿದ್ದಾರೆ. ಅಗತ್ಯವಿರುವ ಪ್ರತಿಯೊಂದು ಕ್ಷೇತ್ರಗಳಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮುತ್ತಕಿ ತಿಳಿಸಿದ್ದಾರೆ.
ಇದು ಮಹಿಳಾ ಪತ್ರಕರ್ತರೊಬ್ಬರೊಂದಿಗೆ ನಡೆಸಿದ ಮೊದಲ ಸಂದರ್ಶನವಾಗಿದೆ. ತಾಲಿಬಾನ್ ಸರ್ಕಾರದ ಅಡಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಣ ಸಂಬಂಧ ಬಗ್ಗೆ ಪತ್ರಕರ್ತೆ ಕೇಳಿದ್ದಾಗ ಮುತ್ತಕಿ ಈ ರೀತಿಯ ಪ್ರತಿಕ್ರಿಯಿದ್ದಾನೆ. ಅಫ್ಘಾನಿಸ್ತಾನ ಬೇರೆ ಯಾವುದೇ ದೇಶದೊಂದಿಗೆ ಸಂಘರ್ಷವನ್ನು ಹೊಂದಲು ಅಥವಾ ನಮ್ಮ ರಾಷ್ಟ್ರದ ಮೇಲೆ ಪರಿಣಾಮ ಬೀರುವ ಸವಾಲುಗಳನ್ನು ಹೊಂದಲು ನಾವು ಬಯಸುವುದಿಲ್ಲ. ಆದ್ದರಿಂದ, ನಾವು ಈ ವಿಷಯದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.
Recommended Video
ಅಫ್ಘಾನಿಸ್ತಾನವು ಭಾರತದೊಂದಿಗೆ ನಿಕಟ ಸಂಬಂಧ ಹೊಂದಿರುವ ಬಗ್ಗೆ ಚೀನಾ ಅಥವಾ ಪಾಕಿಸ್ತಾನದಿಂದ ಪ್ರತಿಕ್ರಿಯೆ ಬಂದಿದ್ದೇಯೆ ಎಂಬ ಪ್ರಶ್ನೆಗೆ ನೇರ ಉತ್ತರದ ಬದಲಿಗೆ, ಮಾಸ್ಕೋದಲ್ಲಿ ಇತ್ತೀಚಿನ ಸಭೆಗಳನ್ನು ಮುತ್ತಕಿ ಉಲ್ಲೇಖಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications