ಅಯೋಧ್ಯೆ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಮುಖ್ಯಸ್ಥರಿಗೆ Z+ ಭದ್ರತೆ
ಲಕ್ನೋ, ಜನವರಿ.10: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ದೇವಸ್ಥಾನ ನಿರ್ಮಾಣಕ್ಕೆ ಈಗಾಗಲೇ ಎಲ್ಲ ಸಿದ್ಧತೆಗಳು ನಡೆಯುತ್ತಿವೆ. ದೇಗುಲ ನಿರ್ಮಿಸಲೆಂದೇ ಟ್ರಸ್ಟ್ ಒಂದನ್ನು ರಚಿಸಿದ್ದು, ದೇವಸ್ಥಾನ ನಿರ್ಮಾಣದ ಸಂಪೂರ್ಣ ಹೊಣೆಯನ್ನು ಆ ಟ್ರಸ್ಟ್ ಗೆ ವಹಿಸಲಾಗಿದೆ.
ಇತ್ತೀಚಿಗೆ ನಡೆದ ಬೆಳವಣಿಗೆಗಳ ಹಿನ್ನೆಲೆ ರಾಮಜನ್ಮ ಭೂಮಿಯಲ್ಲಿ ದೇಗುಲ ನಿರ್ಮಾಣದ ಹೊಣೆ ಹೊತ್ತಿರುವ ಟ್ರಸ್ಟ್ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಹೆಚ್ಚಿನ ಭದ್ರತೆ ನೀಡಲು ತೀರ್ಮಾನಿಸಿದೆ.
ಶ್ರೀರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಮುಖ್ಯಸ್ಥ ಮಹಾಂತ್ ನೃತ್ಯ ಗೋಪಾಲ್ ದಾಸ್ ಅವರನ್ನೇ ರಾಮಮಂದರಿ ಟ್ರಸ್ಟ್ ಮುಖ್ಯಸ್ಥರನ್ನಾಗಿ ನೇಮಿಸುವ ಸಾಧ್ಯತೆಗಳು ಹೆಚ್ಚಾಗಿ ಕಂಡು ಬಂದಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಝೆಡ್ ಪ್ಲಸ್ ಭದ್ರತೆಯನ್ನು ಒದಗಿಸಲು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Y+ ಭದ್ರತೆ ಹೊಂದಿದ್ದ ಮಹಾಂತ್ ನೃತ್ಯ ಗೋಪಾಲ್ ದಾಸ್:
ಶ್ರೀರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಮುಖ್ಯಸ್ಥರಾಗಿರುವ ಮಹಾಂತ್ ನೃತ್ಯ ಗೋಪಾಲ್ ದಾಸ್ ಅವರಿಗೆ ಈ ಮೊದಲು ಸರ್ಕಾರದಿಂದ Y+ ಭದ್ರತೆಯನ್ನು ನೀಡಲಾಗಿತ್ತು. ಆದರೆ, ರಾಮ ಮಂದಿರ ಟ್ರಸ್ಟ್ ಗೆ ಇವರನ್ನೇ ನೇಮಿಸಲಾಗುತ್ತದೆ ಎಂದು ಸುದ್ದಿ ಹರಿದಾಡುತ್ತಿದ್ದಂತೆ ದಿಢೀರ್ ಎಂದು ಭದ್ರತೆಯನ್ನು ಹೆಚ್ಚಿಸಲಾಗಿದೆ.
ಈ ಹಿಂದೆ ನವೆಂಬರ್.09ರಂದು ರಾಮ ಮಂದಿರ ನಿರ್ಮಾಣ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. 1993ರ ಅಯೋಧ್ಯೆ ಕಾಯ್ದೆ ಅನ್ವಯ ಶ್ರೀರಾಮನ ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್ ರಚನೆ ಮಾಡಬೇಕು. ಟ್ರಸ್ಟ್ ಮೂಲಕ ದೇವಸ್ಥಾನದ ನಿರ್ಮಾಣ ಕಾರ್ಯವು ನಡೆಯಬೇಕು.

ಇನ್ನು, ಮಸೀದಿ ನಿರ್ಮಾಣವನ್ನೂ ಸರ್ಕಾರ ನಿರ್ಲಕ್ಷಿಸುವಂತಿಲ್ಲ. ಅದಕ್ಕಾಗಿ ಅಯೋಧ್ಯೆಯಲ್ಲಿ ಸೂಕ್ತ ಜಾಗವನ್ನು ಹುಡುಕಿ ಮಸೀದಿ ನಿರ್ಮಾಣಕ್ಕಾಗಿ ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಪ್ರದೇಶವನ್ನು ಕೇಂದ್ರ ಸರ್ಕಾರವೇ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications