ಜೊಮ್ಯಾಟೋ ಡೆಲಿವರಿ ಬಾಯ್ ಕಮಲೇಶ್ ಹತ್ಯೆ ಆರೋಪಿ
ನವದೆಹಲಿ, ಅಕ್ಟೋಬರ್ 23: ಉತ್ತರ ಪ್ರದೇಶದಲ್ಲಿ ಹಿಂದೂ ಸಮಾಜ ಪಕ್ಷದ ಮುಖಂಡ ಕಮಲೇಶ್ ತಿವಾರಿ ಹತ್ಯೆಯ ಪ್ರಕರಣದಲ್ಲಿ ಬಂಧಿತನಾಗಿರುವವರಲ್ಲಿ ಜೊಮ್ಯಾಟೋ ಆಹಾರ ಪೂರೈಕೆ ಕಂಪೆನಿಯ ಡೆಲಿವರಿ ಬಾಯ್ ಕೂಡ ಸೇರಿದ್ದಾನೆ.
ಇದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೊಳಗಾಗಿದ್ದು, ಕಾನೂನನ್ನು ಉಲ್ಲಂಘಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಜೊಮ್ಯಾಟೋ ಹೇಳಿದೆ.

ಗುಜರಾತ್ನ ಭಯೋತ್ಪಾದನಾ ನಿಗ್ರಹ ದಳವು ರಾಜಸ್ಥಾನ ಗಡಿಭಾಗದಲ್ಲಿನ ಪ್ರದೇಶವೊಂದರ ಸಮೀಪ ಅಶ್ಫಕ್ ಹುಸೇನ್ ಮತ್ತು ಮೊಯಿನುದ್ದೀನ್ ಪಠಾಣ್ ಅವರನ್ನು ಬಂಧಿಸಿತ್ತು. ಇದರಲ್ಲಿ ಒಬ್ಬಾತ ಜೊಮ್ಯಾಟೋದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂಗತಿಯನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಜೊಮ್ಯಾಟೋ ಸಂಸ್ಥೆಯನ್ನು ಟ್ರೋಲ್ ಮಾಡಲಾಗುತ್ತಿದೆ.
ಕೆಲವು ತಿಂಗಳ ಹಿಂದೆ ಮುಸ್ಲಿಂ ಡೆಲಿವರಿ ಬಾಯ್ ತಮ್ಮ ಆಹಾರ ಪೂರೈಕೆ ಮಾಡುತ್ತಿದ್ದಾನೆ ಎಂಬ ಕಾರಣಕ್ಕೆ ಆರ್ಡರ್ ರದ್ದುಗೊಳಿಸಿದ್ದಾಗಿ ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದ ವ್ಯಕ್ತಿಯೊಬ್ಬರನ್ನು 'ಆಹಾರಕ್ಕೆ ಧರ್ಮವಿಲ್ಲ' ಎಂದು ಹೇಳುವ ಮೂಲಕ ಜೊಮ್ಯಾಟೋ ಟ್ರೋಲ್ ಮಾಡಿತ್ತು. ಕೆಲವರು ಜೊಮ್ಯಾಟೋ ನೀಡಿದ್ದ ಪ್ರತಿಕ್ರಿಯೆನ್ನು ಶ್ಲಾಘಿಸಿದ್ದರು. ಇನ್ನು ಕೆಲವರು ಜೊಮ್ಯಾಟೋಅನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ಆರಂಭಿಸಿದ್ದರು.
ಈಗ ಬಳಕೆದಾರರು ಜೊಮ್ಯಾಟೋದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತಿದ್ದಾರೆ. ತನ್ನ ಸಿಬ್ಬಂದಿಯ ಹಿನ್ನೆಲೆ ಪರಿಶೀಲಿಸದೆ ಹೇಗೆ ಕೆಲಸ ನೀಡಿದೆ ಎಂದು ಪ್ರಶ್ನಿಸಿದ್ದಾರೆ.
ಮೊಯಿನುದ್ದೀನ್ ಪಠಾಣ್, ಜೊಮ್ಯಾಟೋದಲ್ಲಿ 2019ರ ಆಗಸ್ಟ್ 17ರಿಂದ ಕೆಲಸ ಮಾಡುತ್ತಿದ್ದಾನೆ. ಅದಕ್ಕೂ ಮೊದಲು ಆತನ ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಪಾನ್ ಕಾರ್ಡ್ ಮತ್ತು ಆತನ ಹಿಂದಿನ ನ್ಯಾಯಾಲಯದ ದಾಖಲೆಗಳನ್ನು ಸ್ವತಂತ್ರ ಸಂಸ್ಥೆಯೊಂದರ ಮೂಲಕ ಪರಿಶೀಲನೆ ನಡೆಸಲಾಗಿತ್ತು. ಅ.6ರಂದು ಆತ ತನ್ನ ಸಂಸ್ಥೆಯಿಂದ ಕೊನೆಯ ಡೆಲಿವರಿ ನೀಡಿದ್ದ ಎಂದು ಜೊಮ್ಯಾಟೋ ವಕ್ತಾರರು ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications