ತಲಕಾವೇರಿ ಭೂಕುಸಿತ; 10 ದಿನಗಳ ನಂತರ ಮೂರನೇ ಮೃತದೇಹ ಪತ್ತೆ
ಮಡಿಕೇರಿ, ಆಗಸ್ಟ್ 15: ತಲಕಾವೇರಿಯ ಗುಡ್ಡ ಕುಸಿತ ಪ್ರಕರಣದಲ್ಲಿ ಭೂ ಸಮಾಧಿಯಾಗಿದ್ದ ಐವರ ಪೈಕಿ ಮತ್ತೊಬ್ಬರ ಮೃತ ದೇಹ ಇಂದು ಪತ್ತೆ ಆಗಿದೆ. ಕಳೆದ ಹತ್ತು ದಿನಗಳಿಂದಲೂ ಎನ್ಡಿಆರ್ ಎಫ್ ಹಾಗೂ ಇತರ ಸಿಬ್ಬಂದಿ ಮೂರು ಹಿಟಾಚಿ ಬಳಸಿ ಮೃತ ದೇಹ ಮೇಲೆತ್ತಲು ಕಾರ್ಯಾಚರಣೆ ನಡೆಸುತ್ತಿದ್ದರು.
Recommended Video
IPL
2020
:
'Tata' shows
interest
in
the
title
sponsorship
|
Oneindia
Kannada
ಈಗಾಗಲೇ ತಲಕಾವೇರಿ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ಅವರ ಸಹೋದರ ಆನಂದ ತೀರ್ಥ ಅವರ ಮೃತ ದೇಹಗಳು ಪತ್ತೆ ಆಗಿದ್ದವು. ಈಗ ಸಿಕ್ಕಿರುವ ಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು, ಇನ್ನೂ ಗುರುತು ಪತ್ತೆ ಆಗಿಲ್ಲ.
ತಲಕಾವೇರಿ ಗುಡ್ಡ ಕುಸಿತ ಪ್ರಕರಣ: ಅರ್ಚಕ ನಾರಾಯಣ್ ಆಚಾರ್ ಮೃತದೇಹ ಪತ್ತೆ
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕ ಕೆ. ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಪ್ರದೇಶದಲ್ಲಿ ದಟ್ಟ ಮಂಜು ಮತ್ತು ಮಳೆ ಬೀಳುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿ ಆಗಿದೆ.
Comments
English summary
Another dead body found today in talacauvery. Five were buried before 10 days at landslide in talacauvery of kodau,
Story first published: Saturday, August 15, 2020, 14:14 [IST]