ಮಡಿಕೇರಿ ಸೌಂದರ್ಯದ ಸೊಬಗು ಬಿಚ್ಚಿಟ್ಟ ಆ 4 ಚಿತ್ರಗಳು
ಮಡಿಕೇರಿ, ಆಗಸ್ಟ್ 14: ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಆಯೋಜಿಸಲಾಗಿದ್ದ ಕೊಡಗಿನ ನಿಸರ್ಗ ಸೊಬಗು ಛಾಯಾಚಿತ್ರ ಸ್ಪರ್ಧೆಯಲ್ಲಿ ಮಡಿಕೇರಿಯ ಸುನಿಲ್ ಶೆಟ್ಟಿ ಪ್ರಥಮ, ಸುಧಾಮ ಪೆರಾಜೆ ದ್ವಿತೀಯ ಬಹುಮಾನ ಪಡೆದಿದ್ದಾರೆ.
ಮಡಿಕೇರಿಯ ಡೈರಿ ಫಾರಂನ ನಿವಾಸಿ ಕೆ.ಎಂ. ಜಗನ್ನಾಥ್ ಹಾಗೂ ಜಿ.ಎಸ್. ಲೀಲಾ ದಂಪತಿಯ ಪುತ್ರ ಸುನಿಲ್ ಶೆಟ್ಟಿ ಔಷಧಿ ವಿತರಣಾ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ.
ಮಡಿಕೇರಿಯ ಮಂಗಳಾದೇವಿ ನಗರದ ನಿವಾಸಿ ಕೇಶವ್ ಪೆರಾಜೆ ಹಾಗೂ ನಾಗಮ್ಮ ಪೆರಾಜೆ ದಂಪತಿ ಪುತ್ರ ಸುಧಾಮ ಪೆರಾಜೆ ಆಳ್ವಾಸ್ ಕಾಲೇಜಿನಲ್ಲಿ ಇತ್ತೀಚೆಗೆ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. ಈ ಹಿಂದೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದಿದ್ದರು.
ಮಡಿಕೇರಿಯ ಮಂಗಳಾದೇವಿ ನಗರದ ನಾಗೇಶ್ ಹಾಗೂ ಗೀತಾ ದಂಪತಿಗಳ ಪುತ್ರ ಜಗದೀಶ್ ಪೂಜಾರಿ ತೃತೀಯ ಬಹುಮಾನ ಪಡೆದಿದ್ದಾರೆ. ಇವರು ಮಡಿಕೇರಿಯಲ್ಲಿ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಭಾಗಮಂಡಲ ಸಮೀಪದ ತಣ್ಣಿಮಾನಿಯ ನಿವಾಸಿ ದೇವಿಪ್ರಸಾದ್ ನಾಲ್ಕನೇ ಬಹುಮಾನ ಪಡೆದಿದ್ದಾರೆ.
ಆ.20ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯುವ ವಿಶ್ವ ಛಾಯಾಗ್ರಾಹಕರ ದಿನಾಚರಣೆಯಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಎಂ. ಭೂತನಕಾಡು ತಿಳಿಸಿದ್ದಾರೆ.

ಮಡಿಕೇರಿ ಮೇಲ್ ಮಂಜು!
ಹಸಿರು ತುಂಬಿದ ಬೆಟ್ಟದ ಮೇಲೆ ಮುತ್ತಿನ ರಂಗವಲ್ಲಿ ಬರೆದ ಕೊಡಗಿನ ಸೊಬಗಿನ ಈ ಚಿತ್ರ ಕ್ಲಿಕ್ಕಿಸಿದ್ದಕ್ಕಾಗಿ ಪ್ರಥಮ ಬಹುಮಾನ ಪಡೆದವರು ಸುನಿಲ್ ಶೆಟ್ಟಿ.

ಸ್ವರ್ಗಕ್ಕೇ ಸ್ಪರ್ಧೆ!
ಸ್ವರ್ಗಕ್ಕೇ ಸ್ಪರ್ಧೆ ನೀಡುವಂಥ ರಾಜಾಸೀಟ್ ನ ಈ ಮನಮೋಹಕ ದೃಶ್ಯಕ್ಕಾಗಿ ಸುಧಾಮ ಪೆರಾಜೆ ದ್ವಿತೀಯ ಬಹುಮಾನ ಪಡೆದಿದ್ದಾರೆ.

ನಾಕಕ್ಕೆ ಮೂರೇ ಗೇಣು!
ಸ್ವರ್ಗಕ್ಕೆ ಇನ್ನು ಮೂರೇ ಗೇಣು ಎನ್ನುತ್ತಿರುವ ಮುಗಿಲುಪೇಟೆಯ ಈ ರಮಣೀಯ ದೃಶ್ಯಕ್ಕಾಗಿ ತೃತೀಯ ಬಹುಮಾನ ಪಡೆದವರು ಜಗದೀಶ್ ಪೂಜಾರಿ.

ಹಸಿರ ಜಾತ್ರೆ
ಬಾನು, ಭೂಮಿಯನ್ನೆಲ್ಲ ಒಂದಾಗಿಸಿ ಸೌಂದರ್ಯದ ರಸಾನುಭೂತಿ ನೀಡಿದ ಹಸಿರಜಾತ್ರೆಯ ಈ ಚಿತ್ರ ಕ್ಲಿಕ್ಕಿಸಿದ್ದಕ್ಕಾಗಿ ದೇವಿಪ್ರಸಾದ್ ನಾಲ್ಕನೇ ಬಹುಮಾನ ಗಳಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications