ಮಡಿಕೇರಿ ಬಾರ್ ಮೇಲೆ ದಾಳಿ ಮಾಡಿದ 6 ಜನ ಅರೆಸ್ಟ್
ಮಡಿಕೇರಿ, ಜುಲೈ 14: ನಗರದ ಹೃದಯ ಭಾಗದಲ್ಲಿರುವ ಮಾರುತಿ ಬಾರ್ ಮೇಲೆ ದಾಳಿ ಮಾಡಿ ದಾಂಧಲೆ ನಡೆಸಿದ ಆರು ಮಂದಿ ದುಷ್ಕರ್ಮಿಗಳನ್ನು ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ.
ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ಸ್ಟೋರ್ ಕೀಪರ್ ಆಗಿರುವ ಅರ್ವತ್ತೊಕ್ಲು ಗ್ರಾಮದ ಗಂಗಾಧರ ಎಂಬವರ ಪುತ್ರ ದೇಶಿಕ್, ಕಾರುಗುಂದದ ಕಡಿಯತ್ತೂರು ಗ್ರಾಮದ ನಿವಾಸಿ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಸೆಕ್ಯೂರಿಟಿಯಾಗಿರುವ ನಾಣಯ್ಯ ಅವರ ಪುತ್ರ ಮನೋಜ್, ಅರ್ವತ್ತೊಕ್ಲು ಗ್ರಾಮದ ದೇವಯ್ಯ ಎಂಬವರ ಪುತ್ರ ಹಾಗೂ ಫ್ಯಾಷನ್ ಡಿಸೈನರ್ ವಿದ್ಯಾರ್ಥಿಯಾಗಿರುವ ಪಿ.ಡಿ.ಕುಶ, ಚೆಟ್ಟಳ್ಳಿಯ ಕಂಡಕೆರೆಯ ಕಾರ್ಪೆಂಟರ್ ಕಾರ್ಮಿಕ ಬಾಬು ಎಂಬವರ ಪುತ್ರ ಶ್ರವಣ್, ಚೆಟ್ಟಳ್ಳಿಯ ಕಂಡಕೆರೆಯ ಕಾರ್ಪೆಂಟರ್ ಕಾರ್ಮಿಕರಾಗಿರುವ ಮುಸ್ತಾಫ ಎಂಬವರ ಪುತ್ರ ಫಯಾಜ್ ಮತ್ತು ಮಡಿಕೇರಿ ಮಂಗಳದೇವಿ ನಗರದ ಕಾಂತರಾಜ್ ಎಂಬವರ ಪುತ್ರ ಕಿರಣ್ ಬಂಧಿತರು.

ಘಟನೆಯ ವಿವರ
ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮುಂಭಾಗವಿರುವ ಮಾರುತಿ ಬಾರ್ ಗೆ ಜು.10 ರಂದು ಸಂಜೆ 4 ಗಂಟೆ ಸಮಯಕ್ಕೆ ಬಂದಿದ್ದ ಗಾಳಿಬೀಡು ಗ್ರಾಮದ ಮೊಣ್ಣಪ್ಪ (ಸರಾ) ಎಂಬವರು ಮನೆಯಲ್ಲಿಟ್ಟಿದ್ದ ಕೋವಿ ಕಾಣೆಯಾದ ಬಗ್ಗೆ ಅದೇ ಗ್ರಾಮದ ಕುಡಿಯರ ಲವ ಮತ್ತು ಕೀರ್ತನ್ ಅವರ ಜೊತೆಯಲ್ಲಿ ವಾಗ್ವಾದಕ್ಕಿಳಿದಿದ್ದರು.
ಈ ವೇಳೆ ಅಲ್ಲಿಗೆ ಮದ್ಯಪಾನ ಮಾಡಲು ಬಂದ ದೇಶಿಕ್ ಮತ್ತು ಮನೋಜ್ ತಮಗೆ ಸಂಬಂಧವಿಲ್ಲದ ವಿಷಯದಲ್ಲಿ ತಲೆ ಹಾಕಿದ್ದಾರೆ. ಆಗ ಬಾರ್ನ ಸಿಬ್ಬಂದಿಗಳು ಎರಡೂ ಕಡೆಯವರನ್ನು ಸಮಾಧಾನಗೊಳಿಸಿ ಹೊರಗೆ ಕಳುಹಿಸಿದ್ದಾರೆ.
ಆಗ ತಾನೇ ಐಟಿಐ ಮುಗಿಸಿರುವ ದೇಶಿಕ್ ಮತ್ತು ಮನೋಜ್ ತಮಗೆ ಬಾರ್ನಲ್ಲಿದ್ದವರು ಹಲ್ಲೆ ಮಾಡಿದರೆಂದು ಮೊಬೈಲ್ನಲ್ಲಿ ತಮ್ಮ ಗೆಳೆಯರನ್ನು ಮಡಿಕೇರಿಗೆ ಕರೆಸಿದ್ದಾರೆ. ಸ್ನೇಹಿತನ ಮೇಲೆ ಹಲ್ಲೆಗೆ ಕಾರಣವಾದ ಬಾರಿನ ಮೇಲೆ ಪ್ರತಿಕಾರ ತೀರಿಸಲು ಮಡಿಕೇರಿಗೆ ಬಂದ ಗೆಳೆಯರು ರಾತ್ರಿ ವೇಳೆ ಹೆಲ್ಮೆಟ್ ಹಾಕಿ ಕೊಂಡು ಕಲ್ಲು ಮತ್ತು ಸೋಡಾ ಬಾಟಲ್ಗಳನ್ನು ಸಂಗ್ರಹಿಸಿ ಹಠಾತ್ ಸಿನಿಮೀಯ ಶೈಲಿಯಲ್ಲಿ ಬಾರ್ ಮೇಲೆ ದಾಳಿ ಮಾಡಿದ್ದಾರೆ. ಜತೆಗೆ ಬಾರ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಮದ್ಯದ ಬಾಟಲ್ಗಳನ್ನು ನಾಶ ಪಡಿಸಿದ್ದರು. ದಾಂಧಲೆ ನಡೆಸಿದ ಸಂದರ್ಭ ಸಿಬ್ಬಂದಿ ತಪ್ಪಿಸಿಕೊಂಡಿದ್ದಾರೆ.
ಈ ಸಂಬಂಧ ಬಾರ್ ಮಾಲೀಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.
ಸಿ.ಸಿ ಟಿವಿಯಲ್ಲಿ ಚಿತ್ರೀಕರಣಗೊಂಡ ದೃಶ್ಯಗಳನ್ನಾಧರಿಸಿ ದಾಂಧಲೆ ನಡೆಸಿದ ಯುವಕರ ಗುಂಪನ್ನು ಬಂಧಿಸಲಾಗಿದೆ. ಘಟನೆ ಬಳಿಕ ದೇಶಿಕ್ ಮತ್ತು ಮನೋಜ್ ತಲೆಮರೆಸಿಕೊಂಡಿದ್ದು ಅವರ ಪತ್ತೆಗೆ ಬಲೆ ಬೀಸಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications