ಭುಸ್ಸೆಂದು.. ಕಾಡಿಂದ ನಾಡಿಗೆ ಬಂದ ಕಾಳಿಂಗ ಸರ್ಪ
ಮಡಿಕೇರಿ, ಜನವರಿ 31: ಭುಸ್ಸೆಂದು.. ಅರಣ್ಯದಿಂದ ನಾಡಿನತ್ತ ಬಂದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಭಾರೀ ಗಾತ್ರದ ಕಾಳಿಂಗಸರ್ಪವನ್ನು ಸೆರೆ ಹಿಡಿದು ಮರಳಿ ಕಾಡಿಗೆ ಬಿಡುವಲ್ಲಿ ಗೋಣಿಕೊಪ್ಪಲಿನ ಸ್ನೇಕ್ ಶರತ್ ಮತ್ತು ಸ್ನೇಕ್ ಬಾವೆ ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ದಕ್ಷಿಣ ಕೊಡಗಿನ ಗೋಣಿಕೊಪ್ಪ ಬಳಿಯ ದೇವರಪುರದಲ್ಲಿರುವ ದೇವರಪುರ ಸಾವಿರಬಟ್ಟಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದವರ ಕಣ್ಣಿಗೆ ಆಕಸ್ಮಿಕವಾಗಿ ಕಾಳಿಂಗ ಸರ್ಪ ಬಿದ್ದಿತ್ತು. ಜನರು ಹೌಹಾರಿ ಹಿಂದಕ್ಕೆ ಸರಿದು ಅದು ಏನು ಮಾಡುತ್ತದೆ ಎಂಬುದನ್ನೆ ನೋಡುತ್ತಾ ನಿಂತರು.[ಉರಗತಜ್ಞನಿಗೇ ಭೀತಿ ಹುಟ್ಟಿಸಿದ ಕಾಳಿಂಗ ಸರ್ಪ]

ಅಷ್ಟರಲ್ಲೇ ಕೆಲವರು ಸ್ನೇಕ್ ಶರತ್ ಮತ್ತು ಸ್ನೇಕ್ ಬಾವೆ ಅವರಿಗೆ ಸುದ್ದಿ ಮುಟ್ಟಿಸಿದ್ದರು. ಹೀಗಾಗಿ ಅವರು ಸ್ಥಳಕ್ಕೆ ಬಂದಿದ್ದರು. ತಮ್ಮ ಚಾಕಚಕ್ಯತೆ ಬಳಸಿ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ಚೀಲಕ್ಕೆ ತುಂಬಿಸುವಲ್ಲಿ ಯಶಸ್ವಿಯಾದರು.
ಈ ಕಾಳಿಂಗ ಸರ್ಪ ಹೆಣ್ಣಾಗಿದ್ದು, ಎಂಟೂವರೆ ಕೆ.ಜಿ. ತೂಕ ಮತ್ತು ಹತ್ತು ಅಡಿ ಉದ್ದವಿತ್ತು. ಅಂದಾಜು ಆರೇಳು ವರ್ಷ ವಯಸ್ಸಿನದಾಗಿದೆ. ಸಾಮಾನ್ಯವಾಗಿ ದಟ್ಟ ಕಾಡುಗಳಲ್ಲಿರುವ ಇವು ಪಶ್ಚಿಮಘಟ್ಟದ ಅರಣ್ಯದಲ್ಲಿ ಹೆಚ್ಚಾಗಿವೆ. ನಾಗರಹೊಳೆ ಅಭಯಾರಣ್ಯದಿಂದ ಬಹುಶಃ ಬೇಟೆ ಅರಸಿ ಬಂದಿರಬಹುದೆಂದು ತಿಳಿಸಿದರು.

ಇದರೊಂದಿಗೆ ಕೆಲದಿನಗಳ ಹಿಂದೆ ಈಚೂರು ನಾಡುಗುಂಡಿಯಲ್ಲಿ ಸುಮಾರು ಆರು ವರ್ಷದ, ಏಳು ಕೆ.ಜಿ.ತೂಕದ ಒಂಬತ್ತು ಅಡಿ ತೂಕದ ಕಾಳಿಂಗ ಸರ್ಪವನ್ನು ಹಿಡಿಯಲಾಗಿತ್ತು. ಇದೆರಡು ಸರ್ಪಗಳನ್ನು ಇದೀಗ ಸುರಕ್ಷಿತವಾಗಿ ಮಾಕುಟ್ಟ ಅರಣ್ಯದಲ್ಲಿ ಬಿಡಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications