ಭಾಗಮಂಡಲ ಬಳಿಯ ಅರಣ್ಯದಲ್ಲಿ ಬೇಟೆಗಾರನೇ ಬೇಟೆಯಾದ!
ಮಡಿಕೇರಿ, ಡಿಸೆಂಬರ್ 13: ಕೊಡಗಿನ ಅರಣ್ಯಗಳಲ್ಲಿ ನಡೆಯುತ್ತಿರುವ ಬೇಟೆಯನ್ನು ಹತ್ತಿಕ್ಕುವುದು ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಕಷ್ಟವಾಗಿ ಪರಿಣಮಿಸುತ್ತಿದ್ದು, ಬೇಟೆಗೆಂದು ತೆರಳುವ ಗುಂಪುಗಳ ನಡುವೆಯೇ ಮಾತಿನ ಚಕಮಕಿ ನಡೆದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗುವುದು ಹಿಂದಿನಿಂದಲೂ ನಡೆದು ಬಂದಿದೆ.
ಕೆಲವು ತಿಂಗಳ ಹಿಂದೆಯಷ್ಟೇ ಮಡಿಕೇರಿ ತಾಲೂಕಿನ ಮಕ್ಕಂದೂರು ಬಳಿ ಬೇಟೆಗೆ ತೆರಳಿದ ಸಂದರ್ಭ ಗುಂಡಿಟ್ಟು ಕೊಲೆಗೈದ ಘಟನೆ ನಡೆದಿತ್ತು. ಆ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ ಆಗಲೇ ಬೇಟೆಗೆ ತೆರಳಿದ್ದ ವೇಳೆ ಎರಡು ಬೇಟೆಗಾರರ ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದು ಒಬ್ಬಾತ ಸಾವನ್ನಪ್ಪಿರುವ ಘಟನೆ ಭಾಗಮಂಡಲ ಬಳಿಯ ಮುಂಡ್ರೋಟು ಅರಣ್ಯಪ್ರದೇಶದಲ್ಲಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಸತ್ತವನು ಕೇರಳದ ಜಾರ್ಜ್(50) ಎಂದು ಗುರುತಿಸಲಾಗಿದೆ.

ಬುಧವಾರ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ. ಕೊಲೆಯಾದ ಜಾರ್ಜ್ ಕೇರಳದ ತಳಿಪರಂಬುವಿನ ಮೀನಂಕೇರಿ ನಿವಾಸಿಯಾಗಿದ್ದು ಶ್ರೀಮಂತನಾಗಿದ್ದನು ಎನ್ನಲಾಗಿದೆ. ಬಹುಶಃ ಈತ ಬೇಟೆಯಾಡುವ ಹವ್ಯಾಸ ಹೊಂದಿದ್ದು ಸಹಚರರೊಂದಿಗೆ ಬೇಟೆಯಾಡಲು ಬಂದಿದ್ದು, ಈ ವೇಳೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದಿರಬಹುದೆಂದು ಹೇಳಲಾಗುತ್ತಿದೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಭಾಗಮಂಡಲ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊಲೀಸರ ತನಿಖೆಯಿಂದಷ್ಟೆ ನೈಜ ಮಾಹಿತಿ ತಿಳಿದು ಬರಬೇಕಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications