ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾಗಮಂಡಲ ಬಳಿಯ ಅರಣ್ಯದಲ್ಲಿ ಬೇಟೆಗಾರನೇ ಬೇಟೆಯಾದ!

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಡಿಸೆಂಬರ್ 13: ಕೊಡಗಿನ ಅರಣ್ಯಗಳಲ್ಲಿ ನಡೆಯುತ್ತಿರುವ ಬೇಟೆಯನ್ನು ಹತ್ತಿಕ್ಕುವುದು ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಕಷ್ಟವಾಗಿ ಪರಿಣಮಿಸುತ್ತಿದ್ದು, ಬೇಟೆಗೆಂದು ತೆರಳುವ ಗುಂಪುಗಳ ನಡುವೆಯೇ ಮಾತಿನ ಚಕಮಕಿ ನಡೆದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗುವುದು ಹಿಂದಿನಿಂದಲೂ ನಡೆದು ಬಂದಿದೆ.

ಕುಟುಂಬ ಕಲಹದಲ್ಲಿ ಇಬ್ಬರು ಮಕ್ಕಳನ್ನೇ ಉಸಿರುಗಟ್ಟಿಸಿ ಕೊಂದ ತಾಯಿಕುಟುಂಬ ಕಲಹದಲ್ಲಿ ಇಬ್ಬರು ಮಕ್ಕಳನ್ನೇ ಉಸಿರುಗಟ್ಟಿಸಿ ಕೊಂದ ತಾಯಿ

ಕೆಲವು ತಿಂಗಳ ಹಿಂದೆಯಷ್ಟೇ ಮಡಿಕೇರಿ ತಾಲೂಕಿನ ಮಕ್ಕಂದೂರು ಬಳಿ ಬೇಟೆಗೆ ತೆರಳಿದ ಸಂದರ್ಭ ಗುಂಡಿಟ್ಟು ಕೊಲೆಗೈದ ಘಟನೆ ನಡೆದಿತ್ತು. ಆ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ ಆಗಲೇ ಬೇಟೆಗೆ ತೆರಳಿದ್ದ ವೇಳೆ ಎರಡು ಬೇಟೆಗಾರರ ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದು ಒಬ್ಬಾತ ಸಾವನ್ನಪ್ಪಿರುವ ಘಟನೆ ಭಾಗಮಂಡಲ ಬಳಿಯ ಮುಂಡ್ರೋಟು ಅರಣ್ಯಪ್ರದೇಶದಲ್ಲಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಸತ್ತವನು ಕೇರಳದ ಜಾರ್ಜ್(50) ಎಂದು ಗುರುತಿಸಲಾಗಿದೆ.

A man murdered in the forest near Bhagamandala

ಬುಧವಾರ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ. ಕೊಲೆಯಾದ ಜಾರ್ಜ್ ಕೇರಳದ ತಳಿಪರಂಬುವಿನ ಮೀನಂಕೇರಿ ನಿವಾಸಿಯಾಗಿದ್ದು ಶ್ರೀಮಂತನಾಗಿದ್ದನು ಎನ್ನಲಾಗಿದೆ. ಬಹುಶಃ ಈತ ಬೇಟೆಯಾಡುವ ಹವ್ಯಾಸ ಹೊಂದಿದ್ದು ಸಹಚರರೊಂದಿಗೆ ಬೇಟೆಯಾಡಲು ಬಂದಿದ್ದು, ಈ ವೇಳೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದಿರಬಹುದೆಂದು ಹೇಳಲಾಗುತ್ತಿದೆ.

 ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ಸದ್ಯ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಭಾಗಮಂಡಲ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊಲೀಸರ ತನಿಖೆಯಿಂದಷ್ಟೆ ನೈಜ ಮಾಹಿತಿ ತಿಳಿದು ಬರಬೇಕಿದೆ.

English summary
A man named George was murdered in the forest near Bhagamandala. Exact cause of the murder is unknown. Bhagamandala police have taken further action.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X