ಕಾಳಿ ವಿಗ್ರಹಕ್ಕಾಗಿ ಮಡಿಕೇರಿಯಲ್ಲಿ ಮುಸ್ಲಿಂ ಮಹಿಳೆ ಹೋರಾಟ
ಮಡಿಕೇರಿ, ಸೆಪ್ಟೆಂಬರ್ 6: ಖಾಸಗಿ ಶಾಲೆಯ ಸಂಸ್ಥಾಪಕಿಯಾಗಿರುವ ಮುಸ್ಲಿಂ ಮಹಿಳೆಯೊಬ್ಬರು ತಮ್ಮ ಶಾಲಾ ಕೊಠಡಿಯ ತಳಭಾಗದಲ್ಲಿ ಮಹಾಕಾಳಿಯ ವಿಗ್ರಹವಿದ್ದು ಅದನ್ನು ಹೊರತೆಗೆದು ದೇವಸ್ಥಾನ ನಿರ್ಮಿಸಲು ಅವಕಾಶ ಮಾಡಿಕೊಡುವಂತೆ ಆಗ್ರಹಿಸುತ್ತಿರುವ ಘಟನೆ ಕೊಡಗಿನ ಕುಶಾಲನಗರದಲ್ಲಿ ನಡೆದಿದೆ.
ಬ್ರೀಲಿಯಂಟ್ ಬ್ಲೂಮ್ ಶಾಲೆಯ ಸಂಸ್ಥಾಪಕಿ ಮುಬೀನ್ ತಾಜ್ ಎಂಬುವರೇ ಜಿಲ್ಲಾಡಳಿತದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದು, ಈಗಾಗಲೇ ಹಲವು ಬಾರಿ ಈ ಸಂಬಂಧ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನಲೆಯಲ್ಲಿ ತಾನೇ ತ್ರಿಶೂಲ ಹಿಡಿದು ಕುಶಾಲನಗರದ ಪಟ್ಟಣ ಪಂಚಾಯಿತಿ ಮುಂದೆ ಏಕಾಂಗಿಯಾಗಿ ಸಾಗಿ ಪ್ರತಿಭಟನೆ ನಡೆಸಿದ್ದಾರೆ.

ಮುಬೀನ್ ತಾಜ್ ಅವರ ಒತ್ತಾಯ ಏನೆಂದರೆ ಅವರ ಶಾಲೆಯ ಕೊಠಡಿಯೊಂದರ ನೆಲದೊಳಗೆ ಪುರಾತನ ಕಾಲದ ಮಹಾಕಾಳಿಯ ವಿಗ್ರಹವಿದೆ ಅದನ್ನು ಹೊರ ತೆಗೆಯಲು ಅನುಮತಿ ನೀಡ ಬೇಕೆಂತೆ. ಇದನ್ನು ಕಾಳಿಯೇ ಕನಸಲ್ಲಿ ಬಂದು ತಿಳಿಸಿದ್ದಾಳಂತೆ. ಆ ಪ್ರಕಾರ ಹೇಳುವುದಾದರೆ, ಸುಮಾರು 600ವರ್ಷಗಳ ಹಿಂದೆ ಈ ಸ್ಥಳದಲ್ಲಿ ಮಹಾಕಾಳಿಯ ದೇವಾಲಯವಿದ್ದು ಟಿಪ್ಪು ಸುಲ್ತಾನ್ ಆಳ್ವಿಕೆಯ ಕಾಲದಲ್ಲಿ ಹಿಂದೂ ದೇವಾಲಯಗಳನ್ನು ದ್ವಂಸಗೊಳಿಸಲಾಗಿತ್ತು.
ಈ ಸಮಯದಲ್ಲಿ ಅಂದು ಪೂಜೆ ಸಲ್ಲಿಸುತ್ತಿದ್ದ ಪುರೋಹಿತರೊಬ್ಬರು ಮಹಾಕಾಳಿಯ ವಿಗ್ರಹವನ್ನು ಭೂಮಿಯೊಳಗೆ ಅಡಗಿಸಿಟ್ಟಿದ್ದರು. ಅದು ಭೂಮಿಯೊಳಗೆ ಇದೆಯಂತೆ. ಅದರ ಮೇಲೆ ಶಾಲಾ ಕಟ್ಟಡ ಕಟ್ಟಲಾಗಿರುವುದರಿಂದ ಈಗ ಅದನ್ನು ಹೊರ ತೆಗೆಯುವಂತೆ ದೇವಿ ಕನಸಲ್ಲಿ ಬಂದು ಹೇಳಿದ್ದಾಳಂತೆ. ಹೀಗಾಗಿ ಮುಬೀನ್ ತಾಜ್ ಕಾಳಿ ವಿಗ್ರಹ ತೆಗೆಯಲು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂದೆ ಏನಾಗುತ್ತೋ ಕಾದು ನೋಡಬೇಕಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications