ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ವಿರಾಜಪೇಟೆ ತಹಶೀಲ್ದಾರ್

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಅಕ್ಟೋಬರ್ 11: ವೀರಾಜಪೇಟೆ ತಹಶೀಲ್ದಾರ್ ಪುರಂದರ ಅವರು ತಮ್ಮ ಕಚೇರಿಯಲ್ಲಿ ಶುಕ್ರವಾರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಜಿ ಪರಮೇಶ್ವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿಜಿ ಪರಮೇಶ್ವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ವೀರಾಜಪೇಟೆ ತಾಲ್ಲೂಕು ತೂಚಮಕೇರಿಯ ನಿವಾಸಿ ಪಿ.ಎಂ. ನರೇಂದ್ರ ಎಂಬುವವರು ತಮ್ಮ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಕೆಲಸ ಮಾಡಿಕೊಡಲು ಸತಾಯಿಸುತಿದ್ದ ತಹಶೀಲ್ದಾರ್ ಸಿಬ್ಬಂದಿ ಜಾಗೃತ್ ಮೂಲಕ 15 ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು.

ACB Raid On Virajpete Tahsildar While Taking Bribe

ಕೊನೆಗೆ 9 ಸಾವಿರ ರೂಪಾಯಿ ಕೊಡಲು ನರೇಂದ್ರ ಸಮ್ಮತಿಸಿದ್ದರು. ಇಂದು ಈ ಲಂಚದ ಮೊದಲ ಕಂತಾದ 2000 ರೂಪಾಯಿಗಳನ್ನು ತಮ್ಮ ಕಚೇರಿಯಲ್ಲೇ ಸ್ವೀಕರಿಸುತ್ತಿದ್ದಾಗ ಎಸಿಬಿ ಡಿವೈಎಸ್ ‌ಪಿ ಪೂರ್ಣಚಂದ್ರ ಹಾಗೂ ಇನ್ಸ್ ‌ಪೆಕ್ಟರ್ ಮಂಜುನಾಥ್‌ ದಾಳಿ ನಡೆಸಿ ಬಂಧಿಸಿದ್ದಾರೆ. ಸಿಬ್ಬಂದಿ ಜಾಗೃತ್ ಎಂಬಾತನನ್ನೂ ಬಂಧಿಸಲಾಗಿದ್ದು ಮೊಕದ್ದಮೆ ದಾಖಲು ಮಾಡಿಕೊಂಡು ತನಿಖೆ ನಡೆಯುತ್ತಿದೆ.

English summary
ACB officers raid on Virajpete tahsildar Purandara while accepting bribe at his office on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X