ಕೋವಿಡ್ ನಿಯಮ ಪಾಲಿಸದ ಹೋಟೆಲ್, ರೆಸಾರ್ಟ್, ಹೋಂಸ್ಟೇಗಳ ವಿರುದ್ಧ ಕ್ರಮ
ಮಡಿಕೇರಿ, ಅಕ್ಟೋಬರ್ 15: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ಹೋಟೆಲ್, ರೆಸಾರ್ಟ್ ಮತ್ತು ಹೋಂಸ್ಟೇಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಈ ಕುರಿತು ಬುಧವಾರ ಆದೇಶವೊಂದನ್ನು ಹೊರಡಿಸಿರುವ ಅವರು, ಜಿಲ್ಲೆಯ ಹೋಟೆಲ್, ರೆಸಾರ್ಟ್ ಮತ್ತು ಹೋಂಸ್ಟೇಗಳ ಪ್ರವೇಶ ದ್ವಾರದಲ್ಲಿ ಸ್ಟ್ಯಾಂಡ್ ಸ್ಯಾನಿಟೈಸರ್, ಕೊಠಡಿ, ಶೌಚಾಲಯ, ರೆಸ್ಟೋರೆಂಟ್ ಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಬಳಸಲಾಗುತ್ತಿದೆಯೇ, ಕಡ್ಡಾಯವಾಗಿ ಮಾಸ್ಕ್ ಅಥವಾ ಮುಖಗವಸು ಬಳಸಲಾಗುತ್ತಿದೆಯೇ, ಸಾಕಷ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದ್ದಾರೆ.
ಸಾಧ್ಯವಾದಷ್ಟು ವಿವಿಧ ಮಾದರಿಯ ಇ-ಪೇಮೆಂಟ್ ಮೂಲಕ ವ್ಯವಹಾರ ನಡೆಸಲಾಗುತ್ತಿದೆಯೇ, ಥರ್ಮಲ್ ಟೆಸ್ಟ್ ಮಾಡಲಾಗುತ್ತಿದೆಯೇ, ಕೋವಿಡ್-19 ಸಂಬಂಧ ಪ್ರವಾಸಿಗರಿಗೆ, ಅತಿಥಿಗಳಿಗೆ ಸೂಕ್ತ ನಿರ್ದೇಶನ ನೀಡುವ ಫಲಕ ಅಳವಡಿಸಲಾಗಿದೆಯೇ, ವಾಸ್ತವ್ಯ ಹೂಡಿರುವ ಪ್ರವಾಸಿಗರು, ಅತಿಥಿಗಳ ಪ್ರಯಾಣ ಹಿನ್ನೆಲೆಯ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಲಾಗಿದೆಯೇ ಮತ್ತು ಅವರು ಗುರುತಿನ ಚೀಟಿಗಳನ್ನು ಪಡೆಯಲಾಗುತ್ತಿದೆಯೇ ಎಂಬುದರ ಬಗ್ಗೆ ಮಾಹಿತಿ ಪಡೆಯುವಂತೆ ತಿಳಿಸಿದ್ದಾರೆ.

ಸಿಬ್ಬಂದಿಗಳು ಕೋವಿಡ್ ಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳಾದ ಕೈಗವಸು, ಮುಖಗವಸು ಮತ್ತು ಶುಚಿತ್ವ ಕಾಪಾಡಿಕೊಳ್ಳಲಾಗಿದೆಯೇ, ಅತಿಥಿಗಳು, ಪ್ರವಾಸಿಗರ ಲಗೇಜುಗಳನ್ನು ಸ್ಯಾನಿಟೈಸರ್ ಮಾಡಲಾಗುತ್ತಿದೆಯೇ, ಒಂದು ಕೊಠಡಿಯಲ್ಲಿ ಇಬ್ಬರು ಅತಿಥಿಗಳಿಗೆ ಮಾತ್ರ ವಾಸ್ತವ್ಯ ಹೂಡಲು ಅವಕಾಶ ಕಲ್ಪಿಸಲಾಗುತ್ತಿದೆಯೇ ಎಂಬ ಬಗ್ಗೆಯೂ ಮಾಹಿತಿ ಕಲೆಹಾಕುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.
ನಾಲ್ಕು ಮಂದಿಗಿಂತ ಹೆಚ್ಚು ಸಾರ್ವಜನಿಕರು ಪ್ರವಾಸಿ ಸ್ಥಳಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಇತರೆಡೆಗಳಲ್ಲಿ ಒಂದೆಡೆ ಸೇರದಿರುವ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ಹೊಟೇಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಒಂದು ಟೇಬಲ್ ನಿಂದ ಮತ್ತೊಂದು ಟೇಬಲ್ ಗೆ ಕನಿಷ್ಟ 6 ಅಡಿ ಅಂತರದ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.
Recommended Video
ಈ ಸಂಬಂಧವಾಗಿ ಪೊಲೀಸ್ ವರಿಷ್ಠಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ಪೌರಾಯಕ್ತರು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು, ಪಟ್ಟಣ ಪಂಚಾಯತ್ ಗಳ ಮುಖ್ಯಾಧಿಕಾರಿಗಳು ಕ್ರಮವಹಿಸುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications