ನಮ್ಮನ್ನೂ ಪರಿಶಿಷ್ಟ ಪಂಗಡಕ್ಕೆ ಸೇರಿಸಿ: ಕೊಡವ ಭಾಷಿಕ ಸಮುದಾಯ ಕೂಟ ಒತ್ತಾಯ
ಮಡಿಕೇರಿ, ಅಕ್ಟೋಬರ್ 9: ಕೊಡವ ಭಾಷೆ (ಕೊಡಗು ಭಾಷೆ) ಸಾಹಿತ್ಯ, ಸಂಸ್ಕೃತಿಯ ಆಧಾರ ಸ್ತಂಭವಾಗಿರುವ ಕಲೆ-ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿದೆ. ಕೊಡಗು ಭಾಷಿಕ ಜನಾಂಗದವರ ಕುಲಶಾಸ್ತ್ರೀಯ ಅಧ್ಯಯನ ಕೈಗೊಂಡು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೊಡವ ಭಾಷಿಕ ಸಮುದಾಯಗಳ ಕೂಟ ಒತ್ತಾಯಿಸಿದೆ.
ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಹಾಗೂ ಕಾರ್ಯದರ್ಶಿ ಕೂಡಂಡ ಸಾಬ ಸುಬ್ರಮಣಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪ್ರಮುಖರು, ರಾಜ್ಯದಲ್ಲಿ ತುಳು, ಲಿಂಗಾಯಿತ, ವೀರಶೈವ ಹಾಗೂ ಒಕ್ಕಲಿಗರಲ್ಲಿ ವಿವಿಧ ಪಂಗಡಗಳಿರುವಂತೆ, ಕೊಡಗು ಜಿಲ್ಲೆಯಲ್ಲಿ ಕೊಡಗು ಭಾಷೆ ಮಾತನಾಡುವ ಪಂಗಡಗಳಿವೆ ಎಂದು ಗಮನ ಸೆಳೆದಿದ್ದಾರೆ.
ಕೊಡವ ಭಾಷೆ ಮಾತಾನಾಡುವವರು ಅನಾದಿ ಕಾಲದಿಂದಲೂ ಪೂರ್ವಿಕರಿಂದ ನಡೆಸಿಕೊಂಡು ಬಂದಿರುವ ಎಲ್ಲಾ ವಿಶಿಷ್ಟ ಪದ್ಧತಿ, ಪರಂಪರೆ, ಆಚಾರ, ವಿಚಾರ, ಸಂಪ್ರದಾಯಗಳನ್ನು ಮೈಗೂಡಿಸಿಕೊಂಡು ಮುನ್ನಡೆಯುತ್ತಿದ್ದಾರೆ. ಜೀವನದಿ ಕಾವೇರಿಯ ಉಗಮ ಸ್ಥಾನವಾಗಿರುವ ಕೊಡಗು ಜಿಲ್ಲೆಯು ವಿವಿಧ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ದೇವಾನುದೇವತೆಗಳ ನೆಲೆವೀಡು. ಈ ನಾಡಿನ ಕೊಡವ ಭಾಷಾ ಮೂಲ ನಿವಾಸಿಗಳಿಗೆ ಹೆಮ್ಮೆಯ ವಿಚಾರ ಎಂದರು.

ಕೊಡಗು ಭಾಷೆ ಮಾತನಾಡುವ ಸಮುದಾಯಗಳಾದ ಹೆಗ್ಗಡೆ, ಐರಿ, ಕೊಯವ, ಕೊಡಗು ನಾಯರ್, ಕೋಲೆಯ, ಗೊಲ್ಲ, ಮಲೆಯ, ಪಣಿಕ, ಕಣಿಯ, ಕೊಡವ ಸವಿತ (ನಾಯಿಂದ) ಬೂಣೆ ಪಟ್ಟಮ, ಮಡಿವಾಳ ಮತ್ತು ಬಣ್ಣ ಜನಾಂಗದವರು ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ತಮ್ಮದೇ ಆದ ವಿಶಿಷ್ಟ ಕೊಡುಗೆಯನ್ನು ನೀಡುತ್ತಾ ಬರುತ್ತಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳೇ ಕಳೆದಿದ್ದರೂ ಕೊಡಗು ಭಾಷಿಕ ಜನಾಂಗದ ಹಲವಾರು ಸಮುದಾಯಗಳ ಬದುಕು ದುಸ್ತರವಾಗಿದೆ. ಕೂಲಿ ಕೆಲಸ ಮಾಡಿ ಕಣ್ಣೀರಿನ ಬದುಕನ್ನು ಸಾಗಿಸುತ್ತಿರುವುದು ವಿಪರ್ಯಾಸ ಎಂದು ಡಾ.ಸುಭಾಷ್ ನಾಣಯ್ಯ ಹೇಳಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications