ಬ್ರಹ್ಮಗಿರಿ ರಕ್ಷಿತಾರಣ್ಯದಲ್ಲಿ rallyಗೆ ಅವಕಾಶ; ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ
ಮಡಿಕೇರಿ, ಸೆಪ್ಟೆಂಬರ್ 18: ಸರ್ಕಾರವು ವಾರ್ಷಿಕವಾಗಿ ವನ್ಯ ಪ್ರಾಣಿಗಳ ಮತ್ತು ಅರಣ್ಯದ ರಕ್ಷಣೆಗೆಂದೇ ಕೋಟ್ಯಂತರ ರೂಪಾಯಿಗಳನ್ನು ವ್ಯಯಿಸುತ್ತಿದೆ. ಅನೇಕ ಅರಣ್ಯಗಳನ್ನು ರಕ್ಷಿತಾರಣ್ಯ, ಅಭಯಾರಣ್ಯ ಎಂದೇ ಘೋಷಿಸಿದ್ದು, ಇಲ್ಲಿಗೆ ಮನುಷ್ಯರ ಪ್ರವೇಶವೇ ನಿಷಿದ್ಧವಾಗಿದೆ. ಅಲ್ಲದೆ ಅರಣ್ಯ ಇಲಾಖೆಯ ಸಿಬ್ಬಂದಿ ಸಂಖ್ಯೆಯನ್ನೂ ಹೆಚ್ಚಿಸಿ 24x7 ಕಾವಲು ಕಾಯಲಾಗುತ್ತಿದೆ.
ಆದರೆ ಅರಣ್ಯ ರಕ್ಷಣೆ ಮಾಡಬೇಕಾದ ಅರಣ್ಯಾಧಿಕಾರಿಯೇ ಕಾನೂನು ಉಲ್ಲಂಘಿಸಿ ಅರಣ್ಯದೊಳಗೆ ವಾಹನಗಳಿಗೆ ಪ್ರವೇಶ ನೀಡಿರುವ ಘಟನೆ ದಕ್ಷಿಣ ಕೊಡಗಿನ ಶ್ರೀಮಂಗಲದಿಂದ ವರದಿಯಾಗಿದೆ.
ನಾಗರಹೊಳೆ ಅಭಯಾರಣ್ಯಕ್ಕೆ ತಾಗಿಕೊಂಡಿರುವ ಬ್ರಹ್ಮಗಿರಿ ರಕ್ಷಿತಾರಣ್ಯದಲ್ಲಿ ಕಳೆದ ಆಗಸ್ಟ್ ಕೊನೆಯ ವಾರ ಮತ್ತು ಸೆಪ್ಟೆಂಬರ್ ಮೊದಲ ವಾರದಲ್ಲಿ ಮೋಟಾರು rally ಆಯೋಜಿಸಲು ಶ್ರೀಮಂಗಲ ವನ್ಯಜೀವಿ ವಲಯ ಅರಣ್ಯಾಧಿಕಾರಿ ವೀರೇಂದ್ರ ಮರಿ ಬಸವಣ್ಣನವರ್ ಅವರು ಮೌಖಿಕ ಅನುಮತಿ ನೀಡಿದ್ದಾರೆ ಎಂದು ಕೊಡಗು ಏಕೀಕರಣ ರಂಗ ಆರೋಪಿಸಿದೆ.

ಅರಣ್ಯಾಧಿಕಾರಿ ತಮಗೆ ಯಾವುದೇ ಅಧಿಕಾರವಿಲ್ಲದಿದ್ದರೂ ಆಮಿಷಕ್ಕೆ ಒಳಗಾಗಿ ಎಂಟು ಯುವಕರ ತಂಡಕ್ಕೆ ಮೋಟಾರು rally ನಡೆಸಲು ಅನುಮತಿ ನೀಡಿದ್ದರು ಎಂದು ಆರೋಪಿಸಲಾಗಿದೆ. ಕೊಡಗಿನ ರಕ್ಷಿತಾರಣ್ಯಗಳಲ್ಲಿ ಅಪರೂಪದ ಪಕ್ಷಿ ಮತ್ತು ಪ್ರಾಣಿಗಳ ಸಂಕುಲವೇ ಇದ್ದು, ಅವುಗಳ ವಂಶಾಭಿವೃದ್ಧಿಗೆ ಅನುವಾಗಲಿ ಎಂಬ ಕಾರಣದಿಂದ ಸರ್ಕಾರ ಮನುಷ್ಯರ ಪ್ರವೇಶ ನಿಷೇಧಿಸಿದೆ. ಹೀಗಿರುವಾಗ ವಾಹನಗಳ ಸೈಲೆನ್ಸರ್ ತೆಗೆದ ಕರ್ಕಶ ಸದ್ದಿಗೆ ಪ್ರಾಣಿಗಳು ಅಪಾಯಕ್ಕೀಡಾಗುತ್ತವೆ.
ಮಡಿಕೇರಿಯಲ್ಲಿ ಇಂದು ಏಕೀಕರಣ ರಂಗವು ಕೊಡಗು ವನ್ಯ ಜೀವಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ವಿರಾಜಪೇಟೆ ಪ್ರಾದೇಶಿಕ ವನ್ಯಜೀವಿ ವೃತ್ತದ ಅರಣ್ಯ ಇಲಾಖಾಧಿಕಾರಿಗಳಿಗೆ ದೂರು ನೀಡಿದೆ. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನೀಡುವ ಎಚ್ಚರಿಕೆಯನ್ನೂ ನೀಡಿದೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications